ಆಶಯ

ಇಹದ ಸುಖವನು ಬಯಸಿ, ಆತ್ಮಯೋಗದ ಬಲವು
ತನ್ನದೆಂಬುದ ನೆಚ್ಚಿ, ಮುಂಗುರಿಯ ದೃಷ್ಠಿಯನು
ನಂಬಿಕೆಯ ನೇತೃದಲಿ ನೋಡುತಲು, ಜೀವನದ
ಧ್ಯೇಯವನು ದಿಗ್ಭ್ರಾಂತ ತರಂಗದೊಳಾಡಿಸುತ,
ಕೋಟಿಮಾನವರಲ್ಲಿ ತನ್ನ ಪ್ರತಿಭೆಯ ಸಾಕ್ಷ್ಯ
ಸಾರುತಲಿ ಪಾಡುತಲಿ, ಮಾನವನು ತಾನ್ಪಡೆದ
ಜನ್ಮಸಾರ್ಥಕವೆಂದು ಜಡನಂತೆ ಮರುಳಾಗಿ
ವಿಶ್ವನಿಯಮದ ಎದುರು ಪಕ್ಕಮಿಲ್ಲದ ಪಾತೆ-
ಯಂತೆ ಸೇರ್ವನು ಸೋಲ ಸುರಂಗವನ್ನು!

ಕಾಲಪುರುಷನು ತಾಳ್ದ ಅನುಭವವೆ ಅದು ಚಿತ್ರ!
ಎಲ್ಲಿಂದೆಲಿಗೆ ಹಾಯ್ದು ಎಂತೆಂಥಾ ಭೀಕರದ
ನೋಟವನು, ಜನತೆಗಳ ಭಾಗ್ಯ ದೌರ್ಭಾಗ್ಯಗಳ
ಜೀವನವ ನೋಡಿ ಕನಿಕರಗೊಂಡು, ಮನಸಿನಾ
ಭಿತ್ತಿಯಲಿ ಆ ಹಾಳೂಬಾಳಿನಾ ಬೇಗುದಿಯ
ಚಿತ್ರವನು, ಆ ಕಾಲ ಮಹಿಮಾ ಮಹತ್ವವನು
ಒಂದಾಗಿ, ಗುರುಜನರ ನೃಪಜನದ ತತ್ವದಿಂ
ಆಳ್ಕೆಯಿಂ ಬಗೆ ಬಗೆಯ ಸೋಗನ್ನು ಜಗಪಡೆದ
ತೆರವನ್ನು ನೋಡುತೋಡುತ ಸಾರ್ವುದಾಹಾ!

ಎನ್ನೆದೆನ್ನದುವೆಂದು ಔತ್ಕೃಷ್ಟ್ಯವಾದದಲಿ,
ಒಲ್ಮೆ ನಲ್ಮೆಯ ಸುಖನು ಎಂಬ ವಿಚಾರದಲಿ,
ರಸಿಕ ಜೀವನ ತಾಳ್ವ ಮೋಹ ಸಂಘಟನೆಯಲಿ,
ಸಮರನಾದದಿ ಏಳ್ವ ಜನದ ತಳಮಳದಲ್ಲಿ,
ವೈರಾಗ್ಯ ಜೀವನವು ಪಡೆವ ಸಾರ್ಥಕದಲ್ಲಿ,
ಮನಕೆ ತೋರುವವೊಂದು ವಿಸ್ಮಯಾಂತಕವಾದ-
ಧ್ವನಿಯ ಲೋಕಕೆ ಸಾರ್ವ ಮಂಗಲಾಮಂಗಲವೊ
ಹೇಳ ಬಲ್ಲವರಾರು?  ಹೃದಯಾದಾವೇಶವನು
ಅನುಭವವೆ ಒಪ್ಪಿಸುವುದು ಕಾಣ್ಕೆಯಾಗಿ!

ಲೇಖನಿಯನುರುಳಿಸೆನು ಕವಿಯೆಂಬ ಹೆಮ್ಮೆಯಲಿ,
ಪಾಡ್ದನಿಯನೊಪ್ಪಿಸೆನು ಗಮಕಿಯೆಂಬರ್ಥದಲಿ,
ಜಗದಿರವ ಚಿತ್ರಿಸೆನು ಚಿತ್ರಿಕನ ರೀತಿಯಲಿ,
ತತ್ವಗಳ ನೊರೆಯೆನಾ ತಾತ್ವಿಕನ ಸೂಕ್ತಿಯಲಿ,
ಎಮ್ಮೆ ಜೀವದ ಛಾಯೆ ಪರರ ಬಾಳಿನ ಮಾಯೆ
ಹಾಸುಹೊಕ್ಕಾಗಿ ತರಂಗಗಳ ತಲ್ಪದಲಿ
ಬಿದ್ದುರುಳುವುದ ಕಂಡು ಮನವಾರೆ ಸೋಲುತಲಿ
ನೀಳ್ಗತೆಯ ಕಿರಿದಾಗಿ ವಿಷಯಗಳ ಲಘುವಾಗಿ
ಅಂಧ ಸಾಧಕನಂತೊರೆಯಲಿಳಿದೆನೊರ್ವ!

ಬ್ರಹ್ಮಾಂಡ ನೆಲಗಟ್ಟು ಪ್ರೇಮದಾಧಾರದಲಿ
ವಿಶ್ವನಿಯಮದ ಬಲವು ಪ್ರೇಮಸುಧೆ ಧಾರೆಯಲಿ,
ಮಾನವನ ವ್ಯವಹಾರ ಪ್ರೇಮ ಪೋಷಾಕಿನಲಿ,
ಜೀವಿಗಳ ಸ್ವಾತಂತ್ರ್‍ಯ ಪ್ರೇಮಪ್ರಲಾಪದಲಿ-
ಅಡಗಿರಲು, ಈರೇಳು ಲೋಕದಾ ಘಟನೆಯಲಿ
ಪ್ರೇಮಜಾಲದಿ ಏಳ್ವ ಪ್ರಣಯಧೂಮದ ರೂಪ
ಅದೆಂತು ವೈಚಿತ್ರ್‍ಯ!  ಎಂತು ಮನೋಹರವು!!
ಎನ್ನ ಸೊಲ್ಲನು ಇಲ್ಲಿ ತದ್ವಿಶೇಷದಿ ಚೆಲ್ಲಿ
ನೋಟಕರ ಹಾಯೆಣಿಸಲಸದಳವೊ!

ಮನಸಿಜನ ಮಾಯೆಯಲಿ ಜನದಲಿಹ ಮೋಹದಲಿ
ಕವಿಪಾಕವೊಸರುವುದು ಆತ್ಮರಸಬಟ್ಟಲಿಂ!
ಸುಖದ ದುಃಖದ ಬೇರೆ ಪಾಲು ಎರಡನು ಮಾಡಿ
ಸೋಗಿನನುಭವದಲ್ಲಿ ಸವಿದು ಸವಿಕಹಿಯನ್ನು
ನೋಡಿ ಲೋಕದ ಬಗೆಯ ಚಿತ್ರಿಸಿಡುತಲಿ ವಿಧವ-
ಹಾಹಾಕಾರದ ಕಾಣ್ಕೆ ಗುಣದ ದೋಷದ ಪೂಣ್ಕೆ
ಒಂದನೊಂದರಲಿಟ್ಟು, ತನ್ನ ಇರವನು ತನ್ನ
ಬುದ್ಧಿಬಲದಿಂ ಬೆಳಗಿ ಆದರ್ಶ ಜೀವನಕೆ
ಆಧಾರನಾಗಿರಲು ಸಲ್ವುದೆನಿತೊ!
*****

ಪುಸ್ತಕ: ಸೂರ್ಯ ಕಾಂತಿ

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...