Home / ಲೇಖನ / ವಿಜ್ಞಾನ / ಯುದ್ಧಕ್ಕೆ ಬರಲಿದ್ದಾರೆ – ಅಜೇಯ ಸೈನಿಕರು

ಯುದ್ಧಕ್ಕೆ ಬರಲಿದ್ದಾರೆ – ಅಜೇಯ ಸೈನಿಕರು

ಚಿತ್ರ: ಮಥಿಯಸ್ ವೇವರಿಂಗ್
ಚಿತ್ರ: ಮಥಿಯಸ್ ವೇವರಿಂಗ್

ಐತಿಹಾಸಿಕ ಕಾಲದಿಂದ ಹಿಡಿದು ಇಂದಿನವರೆಗೂ ಸೋಲಿನ ಕಹಿಯನ್ನು ಅನುಭವಿಸಿದ ಆಥವಾ ದೂರದಿಂದ ಕಂಡು ಪಲಾಯನ ಗೈಯ್ಯುವ ಸೈನಿಕರು ಸರ್ವೇ ಸಾಮಾನ್ಯ. ಆದರೆ ಸೋಲನ್ನೇ ಆರಿಯದ ಸೈನಿಕರು ಕೆಲವೇ ವರ್ಷಗಳಲ್ಲಿ ರಣರಂಗಕ್ಕೆ ಧುಮುಕಲಿದ್ದಾರೆ ಎಂದರೆ ಆಶ್ಚರ್ಯ ಮತ್ತು ಸಂತೋಷದ ಸಂಗತಿಯೇ. ಮಾನವ ಸಹಜವಾದ ಸೋಲು ಗೆಲುವು ಭೂಮಿಯಲ್ಲಿ ಇದ್ದದ್ದೆ ಆದರೆ ಮಾನವರೇ ಅಲ್ಲದೆ ಮಾನವರಂತೆ ಯುದ್ಧ ವೈಖರಿಯಲ್ಲಿ ತೊಡಗುವ ಸೋಲನ್ನು ಅರಿಯದ ಸೈನಿಕರು ಸಿಕ್ಕುವುದೆಂದರೆ ಮನುಷ್ಯರಲ್ಲದೆ ರಾಕ್ಷಸರೆ!? ರಾಕ್ಷಸಿ ಶಕ್ತಿಯುಳ್ಳ ಮನುಷ್ಯರಲ್ಲದ ರೋಬಟ್ ಸೈನಿಕರಿಂದಲೇ ಈ ಸಾಧನೆ ನಿಜ, ಮಾನವ ಶಕ್ತಿಯ ಹತ್ತಾರುಪಟ್ಟು ಹೆಚ್ಚಿನ ಶಕ್ತಿಯನ್ನು ಹೊಂದಿದ ರೋಬಟ್ ಮಾನವರು ಈಗಾಗಲೇ ಫ್ಯಾಕ್ಟರಿಗಳಲ್ಲಿ ವಿದೇಶಿ ಅಡುಗೆ ಮನೆಗಳಲ್ಲಿ ಕೆಲಸ ನಿರ್ವಹಿಸುತ್ತಲಿವೆ. ಹತ್ತು ಜನ ಮಾಡುವ ಕೆಲಸವನ್ನು ಒಬ್ಬ ರೋಬಟ್ ಮನುಷ್ಯ ಕೆಲವೇ ಘಂಟೆಗಳಲ್ಲಿ ಮಾಡುವುದಾದರೆ ೧೦ ಜನ ಸೈನಿಕರಿಗೆ ತರಬೇತಿ ನೀಡಿ ಅವರ ಸಂಬಳ ಸಾರಿಗೆ, ಇತರೆ ಖರ್ಚುಗಳನ್ನೆಲ್ಲ ನಿಭಾಯಿಸುವುದಕ್ಕಿಂತಲೂ ಒಬ್ಬ ರೋಬನನ್ನು ಯುದ್ಧಕ್ಕೆ ತೊಡಗಿಸಿದರೆ ಎದುರಿಗಿದ್ದ ಮನುಷ್ಯ ಸೈನಿಕರಾಗಲಿ, ಮದ್ದು ಗುಂಡುಗಳಾಗಲಿ ಎಲ್ಲವೂ ಸಪಾಟ್ ಆಗುತ್ತದೆ!!

ಅಮೇರಿದ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯಾದ ನಾಸಾದ ಜೆಟ್ ಪ್ರೊಪುಲಶನ್ ಪ್ರಯೋಗಾಲಯ ಇದಕ್ಕಾಗಿ ಅಭಿವೃದ್ದಿ ಪಡಿಸಿದ ಯಂತ್ರಜ್ಞಾನವನ್ನು
ಬೆಳೆಸಿಕೊಂಡಿದೆ. ಮನೆಗೆಲಸಕ್ಕಾಗಿ ಮತ್ತು ಕಾರ್ಖಾನೆಗಳಲ್ಲಿ ಕೆಲಸ ಮಾಡುವಂತೆ ಯುದ್ಧದಲ್ಲಿಯೂ ಕೂಡ ಕೈಯಲ್ಲಿ ಪಿಸ್ತೂಲು, ರೈಫಲ್‌ಗಳ ಗುಂಡಿ ಅದುಮುವ, ಮುಂದೆ ಮುಂದೆ ನುಗ್ಗುವ, ಗಂಡು ಖಾಲಿಯಾದಾಗ ತುಂಬುವ, ಮತ್ತು ಗುರಿ ಇಟ್ಟು ಶತೃಸೈನ್ಯವನ್ನು ನಾಶಪಡಿಸುವ ಯಾಂತ್ರೀಕೃತ ಯಂತ್ರಗಳನ್ನಳವಡಿಸಿದ ರೋಬಟ್‌ಗಳನ್ನು ಸಿದ್ಧಗೊಳಿಸುತ್ತಿದೆ. ರೋಬಟ್ ಸೈನಿಕರು ಭಾರವಿರದೆ ಹಗುರವಾಗಿದ್ದು ಸುಲಭವಾಗಿ ಚಲಿಸುತ್ತವೆಯಂತೆ
ಇವುಗಳನ್ನು ಒಂದು ಸ್ಥಳದಿಂದ ಇನ್ನೊಂದು ಸ್ಥಳಕ್ಕೆ ಸಾಗಿಸಬಹುದು.
*****

Tagged:

Leave a Reply

Your email address will not be published. Required fields are marked *

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಕೀಲಿಕರಣ: ಎಂ ಎನ್ ಎಸ್ ರಾವ್