Home / ಲೇಖನ / ವಿಜ್ಞಾನ / ಅಣುಶಕ್ತಿಗಡಿಯಾರ

ಅಣುಶಕ್ತಿಗಡಿಯಾರ

ಮಾನವನ ನಾಗರೀಕತೆಯ ಪ್ರಾರಂಭದಿಂದಲೇ ಸಮಯವನ್ನು ಅಳೆಯುವ ಗಡಿಯಾರಗಳ ಉಪಯೋಗವಾಗುತ್ತಲಿವೆ. ಪುರಾತನ ಅಳತೆಯ ವಿಧಾನಗಳು ಅಷ್ಟೇನೂ
ಕರಾರುವಾಕ್ಕಾಗಿರಲಿಲ್ಲ. ಇದೀಗ ಸಮಯವನ್ನು ಕರಾರುವಾಕ್ಕಾಗಿ ತೋರಿಸುವ ಅತ್ಯಂತ ಸುಧಾರಿತ ಗಡಿಯಾರಗಳು ರಚನೆಯಾಗುತ್ತಲಿವೆ. ಕರಾರುವಾಕ್ಕಾಗಿ ಸಮಯ ತೋರಿಸುವ ಅದ್ಭುತ ಗಡಿಯಾರವೆಂದರೆ ಅಣುಶಕ್ತಿ ಗಡಿಯಾರಗಳು. ಕ್ರಿ.ಶ. ೧೯೪೬ರಲ್ಲಿ ಡಾ|| ವಿಲ್ಲರ್ಟ್ ಫ್ರಾಂಕ್ ಎಂಬ ಒಬ್ಬ ಅಮೇರಿಕದ ಭೌತವಿಜ್ಞಾನಿಯು ಈ ಗಡಿಯಾರವನ್ನು ಸಂಶೋಧಿಸಿದ ವಾಷಿಂಗ್‌ಟನ್ ಡಿ.ಸಿಯ ನ್ಯಾಶನಲ್ ಬ್ಯೂರೋ ಆಫ್ ಸ್ಟ್ಯಾಂಡರ್ಡ್‌ನಲ್ಲಿ ಇಂತಹ ಮೊದಲ ಗಡಿಯಾರವನ್ನು ತಯಾರಿಸಿ ಇಡಲಾಯಿತು.

೧೭,೦೦,೦೦೦ ವರ್ಷಗಳ ಆವಧಿಯವರೆಗೆ ಒಂದು ಸೆಕೆಂಡಿನಷ್ಟು ಕರಾರುವಾಕ್ಕಾಗಿ ಈ ಗಡಿಯಾರ ಇರುತ್ತದೆ. ಸಮಯದ ಅಳತೆಯ ಕ್ಷೇತ್ರದಲ್ಲಿ ಇದು ಈಗಾಗಲೇ ಕ್ರಾಂತಿಯನ್ನುಂಟು ಮಾಡಿದೆ. ಪರಮಾಣುಗಳ ಕೆಲವು ಆಣುಗಳು ಉತ್ಪಾದಿಸುವ ಕಂಪನಗಳನ್ನು ಈ ಅಣುಶಕ್ತಿ ಗಡಿಯಾರವು ಅಳೆಯುತ್ತದೆ. ತೂಗಾಡುವಿಕೆಗಳ ಸಂಖ್ಯೆಯನ್ನು ಲೆಕ್ಕಮಾಡುವುದರಿಂದ ಸಮಯವನ್ನು ಅಳೆಯಲಾಗುತ್ತದೆ. ಹೆಚ್ಚಿನ ಅಣುಶಕ್ತಿಗಡಿಯಾರಗಳು ೧,೪೦೦ ರಿಂದ ೪೦,೦೦೦MHzವರೆಗೆ ಸೂಕ್ಷ್ಮ ಅಲೆಗಳ ಪ್ರದೇಶದಲ್ಲಿ ಆಗುವ ತೂಗಾಡುವಿಕೆಗಳ ಸಂಖ್ಯೆಯನ್ನು ಅಳತೆಮಾಡಿ ಕಾಲವನ್ನು ಕಂಡು ಹಿಡಿಯಲಾಗುತ್ತದೆ.

ಈ ರೀತಿಯ ಅಣುಶಕ್ತಿ ಗಡಿಯಾರಗಳ ಅಭಿವೃದ್ದಿಯಿಂದಾಗಿ ಪ್ರಪಂಚವು ೧೯೭೨ರ ಪ್ರಾರಂಭದಿಂದಲೂ ಅಣುಶಕ್ತಿ ಸಮಯಕ್ಕೆ ಬದಲಾಯಿಸಿಕೊಂಡಿತು. ಈಗ ಅಂತರಾಷ್ಟ್ರೀಯ ಒಪ್ಪಿಗೆಯಾಗಿರುವ ಅತಿ ಚಿಕ್ಕ ಸಮಯ ಘಟಕವು ಅಣುಶಕ್ತಿಸೆಕೆಂಡ್ ಆಗಿದೆ.

ಈ ಗಡಿಯಾರಗಳ ಅನುಕೂಲ ಮತ್ತು ಉಪಯೋಗ: ವಾತಾವರಣದ ಚಂಚಲತೆಯಿಂದಾಗಲಿ ಅಥವಾ ಭೂಮಿಯ ಸುತ್ತುವಿಕೆಯ ವ್ಯತ್ಯಾಸಗಳಿಂದಾಗಲಿ ಇದರ ಮೇಲೆ ಯಾವುದೇ ಪರಿಣಾಮ ಬೀರಲಾರದು ಏಕೆಂದರೆ ಭೂಮಿಯು ಪ್ರತಿವರ್ಷವೂ ಒಂದು ಸೆಕೆಂಡಿನಷ್ಟು ತನ್ನ ಸುತ್ತುವಿಕೆಯಲ್ಲಿನಿಧಾನವಾಗುತ್ತಿದೆ.
*****

ಪುಸ್ತಕ: ವಿಜ್ಞಾನದ ವಿಸ್ಮಯ ಶೋಧಗಳು

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...