Home / ಲೇಖನ / ವಿಜ್ಞಾನ / ತತ್‌ಕ್ಷಣವೇ ಛಾಯಾಚಿತ್ರ ನೀಡುವ ಕ್ಯಾಮರಾ

ತತ್‌ಕ್ಷಣವೇ ಛಾಯಾಚಿತ್ರ ನೀಡುವ ಕ್ಯಾಮರಾ

ಕಲಾಕಾರರಿಗೆ, ವಿಜ್ಞಾನಿಗಳಿಗೆ, ಇತಿಹಾಸಕಾರರಿಗೆ, ಬರಹಗಾರರಿಗೆ, ಚಲನಚಿತ್ರ ನಿರ್ಮಾಪಕರಿಗೆ ಈ ಕ್ಯಾಮರಾವು ಒಂದು ದೊಡ್ಡವರವಾಗಿದೆ. ಕ್ರಿ.ಶ. ೧೮೩೯ರಲ್ಲಿ ಮೊಟ್ಟಮೊದಲ ಬಾರಿ ಕ್ಯಾಮರವನ್ನು ಕಂಡುಹಿಡಿಯಲಾಯಿತಾದರೂ ಇದರಲ್ಲಿ ಅನೇಕ ಆವಿಷ್ಕಾರಗಳಾಗಿ ರೂಪಾಂತರಗಳಾಗಿ, ತಂತ್ರಗಳಾಗಿ ಹೊರಹೊಮ್ಮಿವೆ. ಅದರಲ್ಲೂ ೧೯೪೮ರಲ್ಲಿ “ಪೊಲರೈಯ್ಡ್ ಕ್ಯಾಮರಾ” ಎಂದು ಕರೆಯಲಾಗುವ ತಕ್ಷಣ ಚಿತ್ರ ಬಿಂಬವನ್ನು ತಯಾರಿಸಿಕೊಡುವ ಅದ್ಭುತ ಕ್ಯಾಮರ ಇದಾಗಿದೆ. ಇದು ವಿಜ್ಞಾನ ಜಗತ್ತಿಗೆ ನೂತನ ಕೊಡುಗೆಯಾಗಿದೆ. ಇದನ್ನು ಸಂಯುಕ್ತಸಂಸ್ಥಾನದ ‘ಎಡ್ವಿನ್ ಹರ್ಬರ್ಟ್’ ಎಂಬ ವಿಜ್ಞಾನಿ
ಕಂಡುಹಿಡಿದ. ಅಲ್ಲಿಯವರೆಗೆ “ಕಪ್ಪು-ಬಿಳುಪು ಕ್ಯಾಮರಾಗಳು ಸಾಕಷ್ಟು ಸಮಯದ ನಂತರ ಫಲಿತಾಂಶ ನೀಡುತ್ತಿದ್ದವು. ಆದರೆ ತತ್‌ಕ್ಷಣದಲ್ಲಿ ಅದು ಬಣ್ಣದಲ್ಲಿ ಫೋಟೋಗಳನ್ನು ನೀಡಬಲ್ಲ ಈ ಕ್ಯಾಮರಾ ದುಬಾರಿಯಾಗಿದ್ದರೂ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬೇಡಿಕೆ ಪಡೆದಿದೆ.

ಮುಂದುವರೆದಂತೆ ೧೯೭೨ರಲ್ಲಿ ಎಡ್ವಿನ್. ಹೆಚ್. ಲ್ಯಾಂಡ್ ಎಸ್.ಎಕ್ಷ್-೭೦ ಎಂದು ಕರೆಯಲ್ಪಡುವ ತನ್ನ ಕ್ಯಾಮರದ ಸುಧಾರಿತ ‘ಜೇಬು ಮಾದರಿ’ಯನ್ನು ಸೊಸೈಟಿ ಆಫ್
ಪೋಟೋಗ್ರಾಫಿಕ್ ಸೈಂಟಿಸ್ಟ್ ಅಂಡ್ ಇಂಜಿನಿಯರ್ಸ್‌ಗೆ ಪರಿಚಯಿಸಿದ. ಇದರಲ್ಲಿ ಛಾಯಾ ಚಿತ್ರಣ ಕ್ರಿಯೆಯು ಸೂಕ್ಷ್ಮ ಎಲೆಕ್ಟ್ರಾನಿಕ್ ಪರಿಧಿಗಳಿಂದ ತಮ್ಮಷ್ಟಕ್ಕೆ ತಾವೇ ನಿಯಂತ್ರಿಸಲ್ಪಡುತ್ತವೆ. ೧೯೪೮ರಲ್ಲಿ ಎಡ್ವಿನ್ ಲ್ಯಾಂಡನು “ಪೊಲಾರ್ ವಿಷನ್” ಎಂದು ಕರೆಯಲ್ಪಡುವ ಒಂದು ತಕ್ಷಣ ಗೃಹಚಲನ ಚಿತ್ರ ವ್ಯವಸ್ಥೆಯನ್ನು ಕಂಡುಹಿಡಿದು ಪರಿಚಯಿಸಿದ. ಇಂತಹ ಕ್ಯಾಮರಗಳು ಅದ್ಭುತವಾಗಿದ್ದು ಪ್ರಪಂಚದಾದ್ಯಂತ ಹವ್ಯಾಸಿ ಛಾಯಾ ಚಿತ್ರಗಾರರಿಂದ ಬಳಕೆಯಾಗಲ್ಪಡುತ್ತವೆ.
*****

ಪುಸ್ತಕ: ವಿಜ್ಞಾನದ ವಿಸ್ಮಯ ಶೋಧಗಳು

Tagged:

Leave a Reply

Your email address will not be published. Required fields are marked *

“ಸುಭದ್ರೆ, ನೀನು ಎಂದು….” ದೈನ್ಯವಾಣಿಯಿಂದ ಕೇಳಿಕೊಂಡ ಶ್ರೀಧರ. “ತಡೆ ಶ್ರೀಧರ. ಹ್ಞ. ಹತ್ತಿರ ಬರಬೇಡ. ಪ್ರತಿಯೊಂದು ಕಾರ್ಯಕ್ಕೂ ಮುಹೂರ್ತ ಬರಬೇಕು; ಸ್ವಲ್ಪ ಕಾಲ ತಡೆ. ಒಮ್ಮೆ ಹೇಳಿದೆ: ನಾನು ನಿನ್ನವಳೆಂದು, ನಂಬಿಕೊ.” “ಎಷ್ಟು ದಿನ ಈ ನ...

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...