Home / ಲೇಖನ / ವಿಜ್ಞಾನ / ಸಾಗರಗಳು ಮತ್ತು ಅವುಗಳ ತಳ

ಸಾಗರಗಳು ಮತ್ತು ಅವುಗಳ ತಳ

ಭೂಮಿಯ ಶೇ. ೭೧ ಭಾಗವು ನೀರಿನಿಂದ ಆವರಿಸ್ಪಟ್ಟಿರುವುದರಿಂದ ಈ ನೀರಿನ ಸಂಚಯಗಳೇ ಸಾಗರಗಳಾದವು. ಮಾರುತಗಳು ನೀರಿನಲ್ಲಿ ಅಲೆಗಳನ್ನು ಉಂಟು
ಮಾಡುವುದರಿಂದಲೂ ಮತ್ತು ಚಂದ್ರನ ಗುರುತ್ವಾಕರ್ಷಣೆ ಶಕ್ತಿಯಿಂದಲೂ ‘ಉಕ್ಕು’ ಮತ್ತು ‘ಕೆಳಭರತ’ಗಳು ಉಂಟಾಗುವುದರಿಂದ ಸಾಗರ ಮತ್ತು ಸಮುದ್ರಗಳ ಮೇಲ್ಮೈಯು ನಿರಂತರವಾಗಿ ಅವಿಶ್ರಾಂತ ಸ್ಥಿತಿಯಲ್ಲಿದೆ. ಸಾಗರತಜ್ಞರು ಅಂತರ್ಜಲ ಕ್ಯಾಮರಗಳು, ಪ್ರತಿಧ್ವನಿ ಶಬ್ದಯಂತ್ರಗಳು, ಸೋನಾರ್‌ಗಳು ಮತ್ತು ಜಲಂತರ್ಗಾಮಿ ನೌಕೆಗಳನ್ನು ಉಪಯೋಗಿಸಿ ನಿರಂತರ ಸಾಗರಗಳ ಅಧ್ಯಯನ ಮಾಡಿ ಸಾಗರದ ತಳವು ನಮ್ಮ ಭೂಪ್ರದೇಶದಂತೆಯೇ ಇದೆ, ಎಂಬುದನ್ನು ಕಂಡುಹಿಡಿದರು. ಇಲ್ಲಿಯೂ ಸಹ ಪ್ರಸ್ಥಭೂಮಿ, ಕಂದಕಗಳು, ಕಡಿದಾದ ಬಿರುಕುಗಳು, ಪರ್ವತ ಶ್ರೇಣಿಗಳು ಮತ್ತು ಅಗ್ನಿಪವರ್ತಗಳೂ ಇವೆ ಎಂದರೆ ಆಶ್ಚರ್ಯವಲ್ಲವೆ? ಸಮುದ್ರದ ತಳದಿಂದ ಉದ್ಭವಿಸಿದ ಶಿಖರಗಳು ನೀರಿನ ಮೇಲೆದ್ದು ದ್ವೀಪಗಳಾಗಿ ಪರಿವರ್ತನೆ ಗೊಂಡಿವೆ. ೬ ಕಿ.ಮೀ. ಗಳಿಂದ ಫೆಸಿಫಿಕ್ ಸಾಗರದಲ್ಲಿ ಇದರ ಆಳವು ಸಮುದ್ರದ ಮೇಲ್ಮೆಯಿಂದ ೧೧ ಕಿ.ಮೀ. ನಷ್ಟು ಆಳವಾಗಿದೆ. ಇದನ್ನು ‘ಸಾಹಸಿಗರ ಆಳ’ವೆಂದು ಕರೆಯಲಾಗುತ್ತದೆ.
*****

ಪುಸ್ತಕ: ವಿಜ್ಞಾನದ ವಿಸ್ಮಯ ಶೋಧಗಳು

Tagged:

Leave a Reply

Your email address will not be published. Required fields are marked *

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...

ನನ್ನ ಜನ್ಮ ಗ್ರಾಮಕ್ಕೆ ಹೋಗದೆ ನಾಲ್ಕಾರು ವರುಷಗಳಾಗಿದ್ದವು. ಮೇ ತಿಂಗಳ ಬೆವರನ್ನು ತೋಟದ ಅಬ್ಬಿಯಲ್ಲಿ ತೊಳೆದು ತಂಪಾಗಿ ಒಂದು ಮಾಸ ಕಳೆದು ಬರುವ ಎಂದು ಹಳ್ಳಿಗೆ ಹೋಗಿದ್ದೆ. ಮನೆಗೆ ತಲುಪಿದ ಮರುದಿನವೇ ತಂಗಿಯ ಮನೆಗೆ ಹೋಗುವದು ನನ್ನ ಪದ್ಧತಿ. ನಮ್ಮ ಕೇರಿಯ ಎದುರಿನ ಗುಡ್ಡೆಯನ್ನು ಹತ್...

ಕಾಲ ಹನ್ನೆರಡನೆ ಶತಮಾನ. ದೇಶ ಜಪಾನ್. ಅರಸನ ಹೆಸರು ಅಂತೋಕು. ವಯಸ್ಸು ಕೇವಲ ಏಳು ಸಂವತ್ಸರಗಳು. ಅಂತೋಕು ಹೈಕೆ ಎಂಬ ಸಾಮುರಾಯ ದಳದ ನಾಮ ಮಾತ್ರ ಮುಂದಾಳುವಾಗಿದ್ದು ನಿಜವಾದ ಅಧಿಕಾರ ಇವನ ಅಜ್ಜಮ್ಮನ ಕೈಯಲ್ಲಿತ್ತು. ಅಜ್ಜಮ್ಮನ ಹೆಸರು ನೀ ಎಂದು. ನೀಯ ಜವಾಬ್ದಾರಿ ಗುರುತರವಾಗಿತ್ತು ಎಂದು...

ಶೇಖರನಿಗೆ ಇನ್ನೂ ಎರಡು ದಿನಗಳ ‘ವಾರ’ ಕಡಿಮೆ ಬಿದ್ದಿತ್ತು. ಎಲ್ಲಿಯೂ ಹುಟ್ಟುವಂತೆ ತೋರಲಿಲ್ಲ. ಶ್ರೀಮಾನ್ ಪದ್ಮನಾಭ ಹೆಬ್ಬಾರರ ಮನೆಯಲ್ಲಿ ಕೇಳಬೇಕೆಂದು ನಾಲ್ಕಾರು ಸಲ ಯೋಚಿಸಿದ. ಆದರೆ ಅವರು ಭಿಕ್ಷುಕರನ್ನೂ, ವರ್ಗಣಿ ಕೇಳುವವರನ್ನೂ ವಾರದ ಮಾಣಿಗಳನ್ನೂ ಅಂಗಳಕ್ಕೂ ಬರಗೊ...

ಸರ್‍ಕಸ್ಸು ಮುಗಿದರೂ ಅವನು ಅಲ್ಲಿಯೇ ಕುಳಿತಿದ್ದ. ಎಲ್ಲಾ ಎದ್ದು ಹೋಗಿದ್ದರು. ಎರಡನೇ ಷೋ ಆರಂಭವಾಗಲು ಕೆಲವೇ ಸಮಯ ಉಳಿದಿತ್ತು. ಅವನ ಕಣ್ಣುಗಳು ಏನನ್ನೋ ಹುಡುಕುತ್ತಿದ್ದವು. ಆ ಸರ್‍ಕಸ್ಸಿನ ಹುಡುಗಿ ಪ್ರವೇಶಿಸಿ ಓಡಿ ಬಂದು ಎರಡು ಬಾರಿ ಲಾಗಾ ಹಾಕಿ ಇವನ ಮುಂದೆಯೇ ನಿಂತಂತಾಯಿತು. ಆಕೆಯ...

“ಸುಭದ್ರೆ, ನೀನು ಎಂದು….” ದೈನ್ಯವಾಣಿಯಿಂದ ಕೇಳಿಕೊಂಡ ಶ್ರೀಧರ. “ತಡೆ ಶ್ರೀಧರ. ಹ್ಞ. ಹತ್ತಿರ ಬರಬೇಡ. ಪ್ರತಿಯೊಂದು ಕಾರ್ಯಕ್ಕೂ ಮುಹೂರ್ತ ಬರಬೇಕು; ಸ್ವಲ್ಪ ಕಾಲ ತಡೆ. ಒಮ್ಮೆ ಹೇಳಿದೆ: ನಾನು ನಿನ್ನವಳೆಂದು, ನಂಬಿಕೊ.” “ಎಷ್ಟು ದಿನ ಈ ನ...