Home / ಕವನ / ಕವಿತೆ / ಚಂದ್ರ ನೀನೊಬ್ಬನೆ

ಚಂದ್ರ ನೀನೊಬ್ಬನೆ

ಉರಿಯಿಲ್ಲ ಬಿಸಿಯಿಲ್ಲ
ಉರಿಬಿಸಿಲ ಬೇಗೆ ಬವಣೆಗಳಿಲ್ಲ
ಕಿಡಿಸಿಡಿವ ಕೆಂಡದುಂಡೆಯಂತುದಯಕ್ಕೆ
ಅಸ್ತಕ್ಕೆ ರಕ್ತದೋಕುಳಿಯಿಲ್ಲ
ಅವನಂತೆ ನಿಂತಲ್ಲೇ ನಿಂತು ಜಗವೆಲ್ಲ ತನ್ನನ್ನೇ ಸುತ್ತಿ
ಠಳಾಯಿಸಲೆಂಬ ಠೇಂಕಾರದವನಲ್ಲ.
ಏನಾದರೂ ಹೋದರು ಲೆಖ್ಖಿಸಿದೆ ಬೆಳಗು ಬೈಗಿನ ಕಾಲಚಕ್ರದ
ನಿಷ್ಠುರಕ್ಕೆ ನಿಷ್ಠನಾಗಿ ಸದಾ ಹೊತ್ತಿಕೊಂಡುರಿವ ಅಮಾನುಷನಲ್ಲ
ಅಹರ್ನಿಶಿ ನಮ್ಮ ಸುತ್ತ ಪ್ರೀತಿಯಲಿ ಸುತ್ತುತ್ತಲೇ ಇರುವ
ಪರಿವೀಕ್ಷಕ ನಿರಂತರ ಪರಿಕ್ರಮದ ಸಜೀವ ಮಾನುಷ್ಯಕಾಯ
ಈ ಇಳೆಯ ನಿಜಗೆಳೆಯ ಅಜಾತ ಶತ್ರು; ಲಕ್ಷ ನಕ್ಷತ್ರಗಳ
ರಾಜಾಧಿರಾಜ.

ಓ ಮನಃಕಾರಕನೇ
ಮನುಜನೊಳಗಿನ ಮನಸು
ನೂರಾರು ಕನಸು ಪ್ರೀತಿ ಪ್ರೇಮ

ನಿನ್ನದೇ ಸೋಮ, ನಮ್ಮೊಳಗಿನೆಲ್ಲ ಚಿತ್ರ ವಿಚಿತ್ರ ಬಯಕೆ ಕಾಮ.
ಧೀಶಕ್ತಿ, ಚಿತ್ರ ವೃತ್ತಿ, ಅನುರಕ್ತಿ ತೃಪ್ತಿ ಸಂತುಷ್ಟಿ
ಭಾವ ರಾಗ ಅನುರಾಗ ಭಾವಾವೇಶ
ಅನ್ಯೊನ್ಯದನುಬಂಧ, ಆತ್ಮೀಯದೊಲುಮೆ ಮೈತ್ರಿಬಾಂಧವ್ಯ

ಭೂಮಿಯೊಳಗಣ ನೀರು
ಸಸ್ಯ ಔಷಧ ವನಸ್ಪತಿ
ಜ್ಞಾನ, ವಿಜ್ಞಾನ ರಸ ರಸಾಯನ ಋತುಮಾನದಧಿಪತಿ

ಎಂದೆಂದೂ ಆರದಂತಮೃತದೆಣ್ಣೆಯನೆರೆದು
ಬೆಣ್ಣೆಮುದ್ದೆಯ ಒಳಗೆ ಯಾರೋ ಹಚ್ಚಿ ಬಚ್ಚಿಟ್ಟ
ಆಕಾಶದದ್ಭುತ ದೀಪ, ನೀನು ಓ ತಿಂಗಳು
ತಂಗಳು ಕೈತುತ್ತಿನನ್ನಕ್ಕು ಇನ್ನಿರದ ರುಚಿಕೊಡುವ
ನಿನ್ನ ಬೆಳ್ಳಿ ಬೆಳದಿಂಗಳು.

ಮಧು ನಿನ್ನದು; ಮುದ ನಿನ್ನದು
ನಿನ್ನದೇ ಅದು; ಗಂಡು ಹೆಣ್ಣುಗಳ ಹೃದಯ
ಕವಾಟಗಳ ಕದ ತೆಗೆವ ಮಧುಚಂದ್ರ.

ವೃದ್ಧಿ ಕ್ಷಯ, ಭರತ ಕುಸಿತ, ಏರಿಳಿತ
ಎಲ್ಲ ನಮ್ಮಂತೆಯೇ ಅನ್ನು;
ಎಂದಮಾತ್ರಕ್ಕೆ ಓ ಚಗಚ್ಚಕ್ಷುವೇ
ದೇವರಲ್ಲವೆನ್ನುವರುಂಟೇ ನಿನ್ನನ್ನು
ಇರಬಹುದು ಬಿಡು ಸೂರ್ಯ ಅವನೊಬ್ಬನೆ
ಆದರೆ ಓ ಇಂದುವೇ, ಪೃಥ್ವಿಗತಿಸನಿಹದ ಬಂಧುವೇ
ಇಂದು, ಮುಂದು, ಎಂದೆಂದೂ,
ನಮಗೆ ನಮ್ಮ ಪ್ರೀತಿಯ ಚಂದ್ರ ನೀನೊಬ್ಬನೆ
ಚಂದ್ರನೆಂಬುವನೊಬ್ಬನೆ
ಚಂದ್ರ ನೀನೊಬ್ಬನೆ.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...