Home / ಕವನ / ಕವಿತೆ / ಚಂದ್ರ ನೀನೊಬ್ಬನೆ

ಚಂದ್ರ ನೀನೊಬ್ಬನೆ

ಉರಿಯಿಲ್ಲ ಬಿಸಿಯಿಲ್ಲ
ಉರಿಬಿಸಿಲ ಬೇಗೆ ಬವಣೆಗಳಿಲ್ಲ
ಕಿಡಿಸಿಡಿವ ಕೆಂಡದುಂಡೆಯಂತುದಯಕ್ಕೆ
ಅಸ್ತಕ್ಕೆ ರಕ್ತದೋಕುಳಿಯಿಲ್ಲ
ಅವನಂತೆ ನಿಂತಲ್ಲೇ ನಿಂತು ಜಗವೆಲ್ಲ ತನ್ನನ್ನೇ ಸುತ್ತಿ
ಠಳಾಯಿಸಲೆಂಬ ಠೇಂಕಾರದವನಲ್ಲ.
ಏನಾದರೂ ಹೋದರು ಲೆಖ್ಖಿಸಿದೆ ಬೆಳಗು ಬೈಗಿನ ಕಾಲಚಕ್ರದ
ನಿಷ್ಠುರಕ್ಕೆ ನಿಷ್ಠನಾಗಿ ಸದಾ ಹೊತ್ತಿಕೊಂಡುರಿವ ಅಮಾನುಷನಲ್ಲ
ಅಹರ್ನಿಶಿ ನಮ್ಮ ಸುತ್ತ ಪ್ರೀತಿಯಲಿ ಸುತ್ತುತ್ತಲೇ ಇರುವ
ಪರಿವೀಕ್ಷಕ ನಿರಂತರ ಪರಿಕ್ರಮದ ಸಜೀವ ಮಾನುಷ್ಯಕಾಯ
ಈ ಇಳೆಯ ನಿಜಗೆಳೆಯ ಅಜಾತ ಶತ್ರು; ಲಕ್ಷ ನಕ್ಷತ್ರಗಳ
ರಾಜಾಧಿರಾಜ.

ಓ ಮನಃಕಾರಕನೇ
ಮನುಜನೊಳಗಿನ ಮನಸು
ನೂರಾರು ಕನಸು ಪ್ರೀತಿ ಪ್ರೇಮ

ನಿನ್ನದೇ ಸೋಮ, ನಮ್ಮೊಳಗಿನೆಲ್ಲ ಚಿತ್ರ ವಿಚಿತ್ರ ಬಯಕೆ ಕಾಮ.
ಧೀಶಕ್ತಿ, ಚಿತ್ರ ವೃತ್ತಿ, ಅನುರಕ್ತಿ ತೃಪ್ತಿ ಸಂತುಷ್ಟಿ
ಭಾವ ರಾಗ ಅನುರಾಗ ಭಾವಾವೇಶ
ಅನ್ಯೊನ್ಯದನುಬಂಧ, ಆತ್ಮೀಯದೊಲುಮೆ ಮೈತ್ರಿಬಾಂಧವ್ಯ

ಭೂಮಿಯೊಳಗಣ ನೀರು
ಸಸ್ಯ ಔಷಧ ವನಸ್ಪತಿ
ಜ್ಞಾನ, ವಿಜ್ಞಾನ ರಸ ರಸಾಯನ ಋತುಮಾನದಧಿಪತಿ

ಎಂದೆಂದೂ ಆರದಂತಮೃತದೆಣ್ಣೆಯನೆರೆದು
ಬೆಣ್ಣೆಮುದ್ದೆಯ ಒಳಗೆ ಯಾರೋ ಹಚ್ಚಿ ಬಚ್ಚಿಟ್ಟ
ಆಕಾಶದದ್ಭುತ ದೀಪ, ನೀನು ಓ ತಿಂಗಳು
ತಂಗಳು ಕೈತುತ್ತಿನನ್ನಕ್ಕು ಇನ್ನಿರದ ರುಚಿಕೊಡುವ
ನಿನ್ನ ಬೆಳ್ಳಿ ಬೆಳದಿಂಗಳು.

ಮಧು ನಿನ್ನದು; ಮುದ ನಿನ್ನದು
ನಿನ್ನದೇ ಅದು; ಗಂಡು ಹೆಣ್ಣುಗಳ ಹೃದಯ
ಕವಾಟಗಳ ಕದ ತೆಗೆವ ಮಧುಚಂದ್ರ.

ವೃದ್ಧಿ ಕ್ಷಯ, ಭರತ ಕುಸಿತ, ಏರಿಳಿತ
ಎಲ್ಲ ನಮ್ಮಂತೆಯೇ ಅನ್ನು;
ಎಂದಮಾತ್ರಕ್ಕೆ ಓ ಚಗಚ್ಚಕ್ಷುವೇ
ದೇವರಲ್ಲವೆನ್ನುವರುಂಟೇ ನಿನ್ನನ್ನು
ಇರಬಹುದು ಬಿಡು ಸೂರ್ಯ ಅವನೊಬ್ಬನೆ
ಆದರೆ ಓ ಇಂದುವೇ, ಪೃಥ್ವಿಗತಿಸನಿಹದ ಬಂಧುವೇ
ಇಂದು, ಮುಂದು, ಎಂದೆಂದೂ,
ನಮಗೆ ನಮ್ಮ ಪ್ರೀತಿಯ ಚಂದ್ರ ನೀನೊಬ್ಬನೆ
ಚಂದ್ರನೆಂಬುವನೊಬ್ಬನೆ
ಚಂದ್ರ ನೀನೊಬ್ಬನೆ.
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...