Home / ಕವನ / ಕವಿತೆ / ಚಂದ್ರ ನೀನೊಬ್ಬನೆ

ಚಂದ್ರ ನೀನೊಬ್ಬನೆ

ಉರಿಯಿಲ್ಲ ಬಿಸಿಯಿಲ್ಲ
ಉರಿಬಿಸಿಲ ಬೇಗೆ ಬವಣೆಗಳಿಲ್ಲ
ಕಿಡಿಸಿಡಿವ ಕೆಂಡದುಂಡೆಯಂತುದಯಕ್ಕೆ
ಅಸ್ತಕ್ಕೆ ರಕ್ತದೋಕುಳಿಯಿಲ್ಲ
ಅವನಂತೆ ನಿಂತಲ್ಲೇ ನಿಂತು ಜಗವೆಲ್ಲ ತನ್ನನ್ನೇ ಸುತ್ತಿ
ಠಳಾಯಿಸಲೆಂಬ ಠೇಂಕಾರದವನಲ್ಲ.
ಏನಾದರೂ ಹೋದರು ಲೆಖ್ಖಿಸಿದೆ ಬೆಳಗು ಬೈಗಿನ ಕಾಲಚಕ್ರದ
ನಿಷ್ಠುರಕ್ಕೆ ನಿಷ್ಠನಾಗಿ ಸದಾ ಹೊತ್ತಿಕೊಂಡುರಿವ ಅಮಾನುಷನಲ್ಲ
ಅಹರ್ನಿಶಿ ನಮ್ಮ ಸುತ್ತ ಪ್ರೀತಿಯಲಿ ಸುತ್ತುತ್ತಲೇ ಇರುವ
ಪರಿವೀಕ್ಷಕ ನಿರಂತರ ಪರಿಕ್ರಮದ ಸಜೀವ ಮಾನುಷ್ಯಕಾಯ
ಈ ಇಳೆಯ ನಿಜಗೆಳೆಯ ಅಜಾತ ಶತ್ರು; ಲಕ್ಷ ನಕ್ಷತ್ರಗಳ
ರಾಜಾಧಿರಾಜ.

ಓ ಮನಃಕಾರಕನೇ
ಮನುಜನೊಳಗಿನ ಮನಸು
ನೂರಾರು ಕನಸು ಪ್ರೀತಿ ಪ್ರೇಮ

ನಿನ್ನದೇ ಸೋಮ, ನಮ್ಮೊಳಗಿನೆಲ್ಲ ಚಿತ್ರ ವಿಚಿತ್ರ ಬಯಕೆ ಕಾಮ.
ಧೀಶಕ್ತಿ, ಚಿತ್ರ ವೃತ್ತಿ, ಅನುರಕ್ತಿ ತೃಪ್ತಿ ಸಂತುಷ್ಟಿ
ಭಾವ ರಾಗ ಅನುರಾಗ ಭಾವಾವೇಶ
ಅನ್ಯೊನ್ಯದನುಬಂಧ, ಆತ್ಮೀಯದೊಲುಮೆ ಮೈತ್ರಿಬಾಂಧವ್ಯ

ಭೂಮಿಯೊಳಗಣ ನೀರು
ಸಸ್ಯ ಔಷಧ ವನಸ್ಪತಿ
ಜ್ಞಾನ, ವಿಜ್ಞಾನ ರಸ ರಸಾಯನ ಋತುಮಾನದಧಿಪತಿ

ಎಂದೆಂದೂ ಆರದಂತಮೃತದೆಣ್ಣೆಯನೆರೆದು
ಬೆಣ್ಣೆಮುದ್ದೆಯ ಒಳಗೆ ಯಾರೋ ಹಚ್ಚಿ ಬಚ್ಚಿಟ್ಟ
ಆಕಾಶದದ್ಭುತ ದೀಪ, ನೀನು ಓ ತಿಂಗಳು
ತಂಗಳು ಕೈತುತ್ತಿನನ್ನಕ್ಕು ಇನ್ನಿರದ ರುಚಿಕೊಡುವ
ನಿನ್ನ ಬೆಳ್ಳಿ ಬೆಳದಿಂಗಳು.

ಮಧು ನಿನ್ನದು; ಮುದ ನಿನ್ನದು
ನಿನ್ನದೇ ಅದು; ಗಂಡು ಹೆಣ್ಣುಗಳ ಹೃದಯ
ಕವಾಟಗಳ ಕದ ತೆಗೆವ ಮಧುಚಂದ್ರ.

ವೃದ್ಧಿ ಕ್ಷಯ, ಭರತ ಕುಸಿತ, ಏರಿಳಿತ
ಎಲ್ಲ ನಮ್ಮಂತೆಯೇ ಅನ್ನು;
ಎಂದಮಾತ್ರಕ್ಕೆ ಓ ಚಗಚ್ಚಕ್ಷುವೇ
ದೇವರಲ್ಲವೆನ್ನುವರುಂಟೇ ನಿನ್ನನ್ನು
ಇರಬಹುದು ಬಿಡು ಸೂರ್ಯ ಅವನೊಬ್ಬನೆ
ಆದರೆ ಓ ಇಂದುವೇ, ಪೃಥ್ವಿಗತಿಸನಿಹದ ಬಂಧುವೇ
ಇಂದು, ಮುಂದು, ಎಂದೆಂದೂ,
ನಮಗೆ ನಮ್ಮ ಪ್ರೀತಿಯ ಚಂದ್ರ ನೀನೊಬ್ಬನೆ
ಚಂದ್ರನೆಂಬುವನೊಬ್ಬನೆ
ಚಂದ್ರ ನೀನೊಬ್ಬನೆ.
*****

Tagged:

Leave a Reply

Your email address will not be published. Required fields are marked *

ಬೀರ ಹಾಸಿಗೆಯಲ್ಲಿ ಹೊರಳುತ್ತಿದ್ದಾನೆ, ಕಣ್ಣಿಗೆ ನಿದ್ರೆಯಿಲ್ಲ; ಮನಸ್ಸಿಗೆ ಶಾ೦ತಿಯಿಲ್ಲ. ಸಾಯಂಕಾಲ ಊರ ಚಾವಡಿಯಲ್ಲಿ “ಹೆಚ್ಚು ಆಹಾರ ಧಾನ್ಯ ಬೆಳೆಯಿರಿ!” ಎಂಬ ವಿಷಯದ ಮೇಲೆ ಅಧಿಕಾರಿಗಳ ವ್ಯಾಖ್ಯಾನ ಕೇಳಿದ್ದನಾತ. ಆಗಿನಿಂದಲೂ ಅವನಿಗೆ ತಾನೊಂದು ಬಾವಿಯನ್ನೇಕೆ ತೋಡಬಾರದು ಎನ್ನ...

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...