Home / ಲೇಖನ / ಇತರೆ / ಪುರುಷೋತ್ತಮ’ ಯಶವಂತ ಚಿತ್ತಾಲ

ಪುರುಷೋತ್ತಮ’ ಯಶವಂತ ಚಿತ್ತಾಲ

ಪುರುಷೋತ್ತಮ ಯಶವಂತ ಚಿತ್ತಾಲರು ಇನ್ನಿಲ್ಲ. ಇಂದಿನ ಪ್ರಜಾವಣಿಯ ಮುಖಪುಟದಲ್ಲಿ ಅವರ ನಿರ್ಗಮನದ ಸುದ್ದಿಯನ್ನು ಓದಿ ಮನಸ್ಸು ನೆನಪಿನ ಸುರುಳಿ ಬಿಚ್ಚಿ ೨೦೦೬ನೆ ಇಸವಿಯ ಡಿಸೆಂಬರ್ ಮಾಹೆಯ ಒಂದು ಇಳಿಸಂಜೆಯ ಮೆಲುಕು ಹಾಕಲಾರಂಭಿಸಿತು. ಅಂದು ನಾನು ಇಂದು ಇನ್ನಿಲ್ಲವಾಗಿರುವ ಚಿತ್ತಾಲರನ್ನು ಅವರ ಬಾಂದ್ರಾ ನಿವಾಸದಲ್ಲಿ ಭೇಟಿಯಾಗಿದ್ದೆ. ಅವರ ಪ್ರೀತಿಯ ಸಮುದ್ರ ನೋಟವನ್ನು ಸವಿಯುತ್ತ ಅವರೆದಿರಾಗಿ ಕುರ್ಚಿಯಲ್ಲಿ ಕುಳಿತು ಸಾಹಿತ್ಯ, ತಾಂತ್ರಜ್ಞಾನದ ಬಗ್ಗೆ ಅವರ ವಿಚಾರಗಳನ್ನು ಕೇಳಿದ್ದೆ. ಅಂದು ಅವರು ಹೇಳಿದ ಒಂದು ಮಾತು ನನ್ನನ್ನು ಬಹಳವಾಗಿ ಪ್ರಭಾವಿಸಿತು. ದಕ್ಷಿಣ ಅಮೇರಿಕದ ಲೇಖಕನೊಬ್ಬ ಬರೆಯುವಾಗ/ಟೈಪಿಸುವಾಗ ತಪ್ಪಾದಾಗ ಅದು ಬರಿ ಕೈತಪ್ಪಲ್ಲ, ಮನಸ್ಸಿನ ಚಿಂತನೆಯಲ್ಲಿನ ತಪ್ಪು, ಎಂದು ಪರಿಭಾವಿಸಿ ಆ ಪುಟವನ್ನೇ ಹರಿದುಹಾಕಿ ಪುನಃ ಬರವಣಿಗೆಯನ್ನು ಪ್ರಾರಂಭಿಸುತ್ತಿದ್ದನು, ಆ ಬದ್ಧತೆ ನಮ್ಮ ಎಲ್ಲ ಚಿಂತನೆ, ಕೃತಿಯಲ್ಲಿರಬೇಕು ಎಂದಿದ್ದರು. ಅವರು ಅಂದು ನನ್ನಂತಹ ಕಿರಿಯನೊಂದಿಗೂ ತೋರಿದ ಮುಕ್ತ ಮನಸ್ಕತೆ, ಸೌಜನ್ಯವನ್ನು ನಾನೆಂದಿಗೂ ಮರೆಯಲಾರೆ. ಆತ್ಮದ ಕಲ್ಪನೆಯ ಬಗ್ಗೆ ಸಂಶಯಗಳನ್ನು ಹೊಂದಿರುವ ನಾನು ಚಿತ್ತಾಲರಂತಹ ಚೇತನ ನಾಡಿನೆಲ್ಲರನ್ನು ನೂರ್ಕಾಲ ಉದ್ದೀಪಿಸುತ್ತಿರಲಿ ಎಂದು ಹಾರೈಸ ಬಯಸುತ್ತೇನೆ.

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...