Home / ಲೇಖನ / ಇತರೆ / ಪುರುಷೋತ್ತಮ’ ಯಶವಂತ ಚಿತ್ತಾಲ

ಪುರುಷೋತ್ತಮ’ ಯಶವಂತ ಚಿತ್ತಾಲ

ಪುರುಷೋತ್ತಮ ಯಶವಂತ ಚಿತ್ತಾಲರು ಇನ್ನಿಲ್ಲ. ಇಂದಿನ ಪ್ರಜಾವಣಿಯ ಮುಖಪುಟದಲ್ಲಿ ಅವರ ನಿರ್ಗಮನದ ಸುದ್ದಿಯನ್ನು ಓದಿ ಮನಸ್ಸು ನೆನಪಿನ ಸುರುಳಿ ಬಿಚ್ಚಿ ೨೦೦೬ನೆ ಇಸವಿಯ ಡಿಸೆಂಬರ್ ಮಾಹೆಯ ಒಂದು ಇಳಿಸಂಜೆಯ ಮೆಲುಕು ಹಾಕಲಾರಂಭಿಸಿತು. ಅಂದು ನಾನು ಇಂದು ಇನ್ನಿಲ್ಲವಾಗಿರುವ ಚಿತ್ತಾಲರನ್ನು ಅವರ ಬಾಂದ್ರಾ ನಿವಾಸದಲ್ಲಿ ಭೇಟಿಯಾಗಿದ್ದೆ. ಅವರ ಪ್ರೀತಿಯ ಸಮುದ್ರ ನೋಟವನ್ನು ಸವಿಯುತ್ತ ಅವರೆದಿರಾಗಿ ಕುರ್ಚಿಯಲ್ಲಿ ಕುಳಿತು ಸಾಹಿತ್ಯ, ತಾಂತ್ರಜ್ಞಾನದ ಬಗ್ಗೆ ಅವರ ವಿಚಾರಗಳನ್ನು ಕೇಳಿದ್ದೆ. ಅಂದು ಅವರು ಹೇಳಿದ ಒಂದು ಮಾತು ನನ್ನನ್ನು ಬಹಳವಾಗಿ ಪ್ರಭಾವಿಸಿತು. ದಕ್ಷಿಣ ಅಮೇರಿಕದ ಲೇಖಕನೊಬ್ಬ ಬರೆಯುವಾಗ/ಟೈಪಿಸುವಾಗ ತಪ್ಪಾದಾಗ ಅದು ಬರಿ ಕೈತಪ್ಪಲ್ಲ, ಮನಸ್ಸಿನ ಚಿಂತನೆಯಲ್ಲಿನ ತಪ್ಪು, ಎಂದು ಪರಿಭಾವಿಸಿ ಆ ಪುಟವನ್ನೇ ಹರಿದುಹಾಕಿ ಪುನಃ ಬರವಣಿಗೆಯನ್ನು ಪ್ರಾರಂಭಿಸುತ್ತಿದ್ದನು, ಆ ಬದ್ಧತೆ ನಮ್ಮ ಎಲ್ಲ ಚಿಂತನೆ, ಕೃತಿಯಲ್ಲಿರಬೇಕು ಎಂದಿದ್ದರು. ಅವರು ಅಂದು ನನ್ನಂತಹ ಕಿರಿಯನೊಂದಿಗೂ ತೋರಿದ ಮುಕ್ತ ಮನಸ್ಕತೆ, ಸೌಜನ್ಯವನ್ನು ನಾನೆಂದಿಗೂ ಮರೆಯಲಾರೆ. ಆತ್ಮದ ಕಲ್ಪನೆಯ ಬಗ್ಗೆ ಸಂಶಯಗಳನ್ನು ಹೊಂದಿರುವ ನಾನು ಚಿತ್ತಾಲರಂತಹ ಚೇತನ ನಾಡಿನೆಲ್ಲರನ್ನು ನೂರ್ಕಾಲ ಉದ್ದೀಪಿಸುತ್ತಿರಲಿ ಎಂದು ಹಾರೈಸ ಬಯಸುತ್ತೇನೆ.

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...