Home / ಕವನ / ಕವಿತೆ / ನಡುವಿನವರಿಗೆ

ನಡುವಿನವರಿಗೆ

ಗುಡಿಯು ಮಠವು ನಿನಗೆ ಯಾಕೆ ನಡುವಿನವರಿಗೆ
ಗಡಿಯ ಗೋಡೆ ನಿನಗೆ ಯಾಕೆ ನಡುವಿನವರಿಗೆ
ಮೂರ್ತಿ ಮೂರ್ತಿ ರೂಪ ನೂರು ನಿನಗೆ ಯಾತಕೆ
ಕೀರ್ತಿ ಹಾಡಿ ತಮ್ಮ ಮೆರೆವ ನಡುವಿನವರಿಗೆ ||ಪ||

ಧರ್ಮ ಶಾಸ್ರ ಗ್ರಂಥ ಸೂತ್ರ ನಿನಗೆ ಯಾತಕೆ
ಕರ್ಮಗೇಡಿ ಕೆಲಸಗೇಡಿ ನಡುವಿನವರಿಗೆ
ಪುಣ್ಯ ತೊಳೆಯ ಪುಣ್ಯ ಕ್ಷೇತ್ರ ನಿನಗೆ ಯಾತಕೆ
ಪಣ್ಯ ನಾರಿಯಂತೆ ಸುಲಿವ ನಡುವಿನವರಿಗೆ ||೧|

ತೊಳೆಯಲೆಂದು ನದಿಯ ನೀರು ನಿನಗೆ ಯಾತಕೆ
ಆಭರಣ ಅಲಂಕಾರ ನಿನಗೆ ಯಾತಕೆ
ಶೋಭೆಯಿಂದ ಸೋಗು ಮೆರೆವ ನಡುವಿನವರಿಗೆ ||೨||

ಪೂಜೆಯೋಜೆ ಯಜ್ಞಯಾಗ ನಿನಗೆ ಯಾತಕೆ
ಸಾಜವಾಗಿ ಕುಳಿತುಣ್ಣಲು ನಡುವಿನವರಿಗೆ
ಜಪವು ತಪವು ಕಿಙತ೯ನೆಗಳು ನಿನಗೆ ಯಾತಕೆ
ಕಪಟತನವ ಮಾಡುವಂಥ ನಡುವಿನವರಿಗೆ ||೩||

ಪುರಾಣ ಪುಣ್ಯ ಕಥೆಯು ನಿನಗೆ ಯಾತಕೆ
ಬರೀ ಕುರಿಗಳಾಗಲೆಂಬ ನಡುವಿನವರಿಗೆ
ಹಬ್ಬ ಪರಿಷೆ ಉತ್ಸವಗಳು ನಿನಗೆ ಯಾತಕೆ
ಕೊಬ್ಬು ಬಾಯಿ ತಿಂಡಿಗಾಗಿ ನಡುವಿನವರಿಗೆ ||೪|

ಹೂವು ಹಣ್ಣು ನೈವೇದ್ಯವು ನಿನಗೆ ಯಾತಕೆ
ನೋವಿಲ್ಲದೆ ಹೊಟ್ಟೆ ಹೊರೆವ ನಡುವಿನವರಿಗೆ
ಕಪ್ಪೆ ಮಂತ್ರ ಪಠಣ ಗಡಣ ನಿನಗೆ ಯಾತಕೆ
ಬೆಪ್ಪು ಮಾಡಲೆಲ್ಲರನ್ನು ನಡುವಿನವರಿಗೆ ||೫|

ಗಂಟೆ ಜಗಟೆ ತಾಳ ಬೇರಿ ನಿನಗೆ ಯಾತಕೆ
ಕಂಠ ಮಟ್ಟ ತಿಂಬ ವೇಳೆ ನಡುವಿನವರಿಗೆ
ಮಂಡೆ ಬೋಳು ಕಾವಿ ಬಟ್ಟೆ ನಿನಗೆ ಯಾತಕೆ
ಭಂಡ ಪಾಪ ಮುಚ್ಚಿ ಕೊಳಲು ನಡುವಿನವರಿಗೆ ||೬||

ಹೆಣ್ಣು ಸೇವೆ ದೇವದಾಸಿ ನಿನಗೆ ಯಾತಕೆ
ಹಣ್ಣು ಮಾಡಿ ಸವಿಯಲಿಕ್ಕೆ ನಡುವಿನವರಿಗೆ
ಅಡ್ಡ ಉದ್ದ ನಾಮಾವಳಿ ನಿನಗೆ ಯಾತಕೆ
ಗೊಡ್ಡಮ್ಮಯನೇರುವಂಥ ನಡುವಿನವರಿಗೆ ||೭||

ಗಂಧಾಕ್ಷತೆ ದೀಪ ಧೂಪ ನಿನಗೆ ಯಾತಕೆ
ಮಂದಮತಿಯ ಬೆಳೆಸಲಿಕ್ಕೆ ನಡುವಿನವರಿಗೆ
ಹುಂಡಿಯಲ್ಲಿ ಲಕ್ಷ ನೋಟು ನಿನಗೆ ಯಾತಕೆ
ದಂಡ ಕಪ್ಪ ಹಣವ ಪಡೆದ ನಡುವಿನವರಿಗೆ ||೮||

ಹೊಸಾ ಹೊಸಾ ಗುಡಿಗೋಪುರ ನಿನಗೆ ಯಾತಕೆ
ಹೊಸಾ ಸುಲಿಗೆಗಳಿಗೆ ಕಳಸ ನಡುವಿನವರಿಗೆ
ಅದ್ಭುತ ಪವಾಡ ಮೆರೆತ ನಿನಗೆ ಯಾತಕೆ
ಅಬ್ಬರದಲಿ ಮಟ್ಟು ಬೆಳೆಸೆ ನಡುವಿನವರಿಗೆ ||೯|

ಅವತಾರೋದ್ಧಾರ ಕಥನ ನಿನಗೆ ಯಾತಕೆ
ಸವಿಯಾಗಿಯೆ ಕುರಿಬೋಳಿಸೆ ನಡುವಿನವರಿಗೆ
ನಿನ್ನ ಹೆಸರಿನಲ್ಲಿ ಎಲ್ಲ ನಿನಗೆ ಯಾತಕೆ
ನಿನ್ನವರೆಗೆ ಅಲ್ಲ ಬರೀ ನಡುವಿನವರಿಗೆ ||೧೦||

ನನ್ನ ನಿನ್ನ ನಡುವೆ ನಡುವಿನವರು ಯಾತಕೆ
ನನಗೆ ನೀನು ನಿನಗೆ ನಾನು ಬೇರೆ ಯಾತಕೆ ||೧೧||

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...