Home / ಕವನ / ಕವಿತೆ / ಹುಂಬರಾದೆವಲ್ಲೋ

ಹುಂಬರಾದೆವಲ್ಲೋ

ನಂಬಿದ್ರೆ ನಂಬಿ ಬಿಟ್ರೆ ಬಿಡ್ರಿ ಹುಂಬಗುತ್ಗಿ ಮಾತಿದಲ್ಲ
ಹುಂಬರಾದೆವಲ್ಲೋ ನಾವು ಇಷ್ಟೂ ದಿನ ||ಪ||

ತುಂಬಿ ತುಳುಕೋ ದೇಶದೊಳ್ಗೆ ತುಂಬದಂಗೆ ಹೊಟ್ಟೆ ಬಟ್ಟೆ
ದೊಂಬಿ ಮಾಡೋ ಶಕ್ತಿ ಇಲ್ದೆ ಕೊಳಿತಿವೋ ಜನ ||ಅ.ಪ||

ಕಂಡ ಕಂಡ ಗುಂಡು ಕಲ್ಗೆ ದೇವ್ರು ದಿಂಡ್ರು ಅಂದುಕೊಂತ
ಕಂಡು ಕಂಡು ಹಾಳು ಭಾವ್ಯಾಗ ಬಿದ್ದೀವಲ್ಲ
ಉಂಡು ತಿಂದು ಬೊಜ್ಜಾದೋರು ಕಾಲಿಗೆ ಬೀಳ್ರೋ ಅಂತಾ ಅಂದ್ರೆ
ದಿಂಡುಗೆಡ್ಡು ಮಂಡೆ ಬೋಳ್ಸಿಕೊಂಡೇವಲ್ಲ ||೧||

ಖೂನೀ ಮಾಡ್ಸೋ ಕಟುಕರಿಗೆ ಹೆಂಗಸರ್ಯಾನ ಕಳದೋರಿಗೆ
ನೀನೇ ದಣಿ ನಮ್ಮಪ್ಪಂತ ಕಾಲಿಗೆ ಬೀಳ್ತೀವಿ
ತಾನೇ ತಿಂದು ಊರಿನಾಸ್ತಿ ನಾನೇ ನಾನೆಂದ್ಮೆರದೋರ್ನೆಲ್ಲ
ನೀನೇ ಇಂದ್ರ ಚಂದ್ರ ಅಂತ ನಾವೆ ಹೊಗಳ್ತೀವಿ ||೨||

ನಮ್ಮ ಸೇವೆ ಮಾಡೋ ಆಳ್ಗೋಳ್ ಆಫೀಸಿನ್ಯಾಗೆ ದಣಿಗಳಂಗೆ
ಕಮ್ಗೆ ಮೆರ್ದು ದಬಾಯಿಸಿದ್ರೆ ನಾಯ್ಗಳಾಗ್ತೀವಿ
ದಮ್ಮು ಇಲ್ದೆ ಕಾಲಿಗೆ ಬಿದ್ದು ಕೇಳಿದಷ್ಟು ಬೋಳಿಸ್ಕೊಂಡು
ಸುಮ್ಗೆ ಹಲ್ಲಾಗ ನಾಲ್ಗೆ ಮಡ್ಗಿ ಮೂಳ್ಳುಳಾಗ್ತೀವಿ  ||೩||

ನಾನು ಮೇಲಿನ ಜಾತಿಯೋನು ನಾನು ಮೇಲಿಂದುದ್ರಿದೋನು
ನೀವು ಕೀಳು ಅಂದೋರ್ಕಾಲ್ಗೆ ನಾವೆ ಬೀಳ್ತೀವಿ
ಬಾನು ಭೂಮಿ ಗಾಳಿ ಬೆಂಕಿ ಒಂದೇ ಎಂದು ಸಾರುತಿದ್ರು
ಹೀನ ಜಾತಿ ಮೇಲು ಜಾತಿ ಅಂತ ಹೇಳ್ತೀವಿ ||೪||

ತಕ್ಡಿ ಮುರ್ದು ತೌಡು ಕೊಟ್ಟು ಮಹಡಿ ಮಹಡಿ ಕಟ್ಟಿಸ್ತಾರೆ
ಬೆಪ್ಪ ತಕ್ಡಿ ಆದ್ವಿ ನಾವು ದುಡ್ಡು ಹಣ್ಣಾಗಿ
ಬಡ್ಡೀ ಬಡ್ಡೀ ಕೂಡ್ಸಿ ಬರ್ದು ಮನೀ ಹೊಲ ನುಂಗಿ ಕುಂತು
ಬಡ್ಡೀ ಮಕ್ಳೆ ಅಂತ ಒದ್ರೆ ಬಿದ್ವಿ ಮಣ್ಣಾಗಿ ||೫||

ಪುಂಡ ಪೋಕ್ರಿ ಭಂಡರೆಲ್ಲ ಗೂಂಡಾಗದಿಮಿ ಮಾಡಿಕೊಂತ
ದಂಡು ಕಟ್ಟಿ ಕುಡ್ದು ತಿಂದು ದೊಡ್ಡೋರಾಗ್ತಾರೆ
ಗಂಡ ಹೇಣ್ತಿ ರಟ್ಟಿ ಮುರ್ದು ಹಗಲೆಲ್ಲ ದುಡುದ್ರು ಕೂಡ
ತಿಂಡಿಗಿಲ್ದೆ ಬಟ್ಟೆಗಿಲ್ದೆ ಹೆಡ್ಡರಾಗ್ತಾರೆ ||೬||

ತಾರಾತಿಗಡೀ ಮಾಡಿದೋರೆಲ್ಲ ತಾರಸಿ ಮನಿ ಕಟ್ಟಿಸ್ತಾರೆ
ನೇರ ನ್ಯಾಯ ನೀತಿ ಅಂದೋನ್ ಕೋತಿಯಾಗ್ತಾನೆ
ಬಾರಾ ವಿದ್ಯಾ ಭಾನಗೇಡಿ ಒಳಾಗೊಳ್ಗೆ ಮಾಡೋರೆಲ್ಲ
ದೊರಿಗಳಾದ್ರೆ ದುಡ್ಡು ಮನಸ್ಯ ಕತ್ತೆ ಆಗ್ತಾನೆ ||೭||

ಪ್ರಜೆಗಳದೆಲ್ಲ ರಾಜ್ಯಂತಾರೆ ಪ್ರಜೆಗಳಂದ್ರೆ ಯಾರಂತೀರಿ
ಪ್ರಜಾರಾಜ್ಯದಾಗ ರೊಕ್ಕ ಇರೋನೆ ರಾಜಾ
ಮೋಜಿನ್ಯಾಗ ರೊಕ್ಕ ಉಗ್ಗಿ ರೊಕ್ಕ ಬಳಿಯೋ ಆಟದಾಗೆ
ನಿಜವಾಗಿ ಸರ್ಕಾರೆಲ್ಲ ರೊಕ್‌ದೋರ್ ಮಜಾ ||೮||

ಕಾವಿ ಬಟ್ಟೆ ಹಾಕಿ ಸ್ವಾಮಿ ಗುರುವು ಅಂತ ಮೆರೆಯೋವಂಥ
ಸಾವಿರಾರು ಕುಂತು ತಿಂಬೊ ಮೈಗಳ್ರಿಗೆ
ನಾವೆ ಕಾಲೀಗ್ ಬೀಳತೀವಿ ಕಾಣ್ಕೆ ಕೊಟ್ಟು ಮೆರೆಸುತೀವಿ
ಪಾವನಾದೆವಂತ ಮಬ್ಬು ಮುಚ್ಚಿ ಮಳ್ಳಿಗೆ ||೯||

ವೇಷಕೆ ನಾವು ಮಳ್ಳಾಗ್ತೀವಿ ಬಣ್ಣಕ ನಾವು ಬಾಯ್ಬಿಡ್ತೀವಿ
ಐಷಾರಾಮಿ ಹಣವಂತರಿಗೆ ಹೆದರಿಕೊಂತಿವಿ
ಭಾಷೆ ಇಲ್ಲದ ಭಂಡರ ಮುಂದೆ ಬಾಯಿ ತೆಕ್ಕೊಂಡ್ ಬಿದ್ದಿರ್ತೀವಿ
ದೋಷ ನಮದಲ್ಲವೇನ್ರೊ ಎಲ್ಲಿ ಕುಂತಿವಿ ||೧೦||

***.

Tagged:

Leave a Reply

Your email address will not be published. Required fields are marked *

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...