Home / ಕವನ / ಕವಿತೆ / ನಿನ್ನ ಬರುವು

ನಿನ್ನ ಬರುವು

ನಿನ್ನ ಬರವನೇ ಕಾಯ್ದು ಇರುವೆ ಇರವೆಲ್ಲ ಕಾಯ್ವ ಚಿಂತೆ
ಬರದೆ ನೀನು ಬರಡಾದೆ ನಾನು ಬಾಗಿಲನು ತೆರೆದೆ ನಿಂತೆ

ಬಣ್ಣ ಬಣ್ಣ ವೇಷಗಳ ತೊಟ್ಟು ಬಯಲಾಟ ಬೊಂಬೆಯಂತೆ
ಬಣ್ಣಿಸಿದ್ದೆ ನಾ ಹಿಂದೆ ಅಂತೆಯೇ ಎಲ್ಲ ಅಂತೆ ಕಂತೆ

ಜಟೆಕಿರೀಟದಲಿ ನಾಲ್ಕು ಕೈಗಳಲಿ ವಿವಿಧ ಆಯುಧಗಳ
ರೇಷ್ಠ ಬಟ್ಟೆಗಳ ಚಿನ್ನದೊಡವೆಗಳ ಮುತ್ತು ರತ್ನ ಬಹಳ

ತೊಟ್ಟು ಬರುವಿ ನೀ ಬೆಳಕ ತರುವಿ ಝಗ್ಗೆಂದು ಕಣ್ಣ ಕುಕ್ಕಿ
ಎಂಬ ಭ್ರಮೆಯು ಈಗಿಲ್ಲ ತಂದೆ ತಿಳಿದಿಹುದು ತಿಳಿವು ಸಿಕ್ಕಿ

ಬಾ ಬಾರ ದೇವ ಬಂದೀಯ ನೀನು ಗುರುತಿಸಲು ಬಾರದಂತೆ
ಕಣ್ಣ ಮುಂದೆ ಹಗಲಿರುಳು ತಿರುಗಿದರು ನೋಟವರಿಯದಂತೆ

ಸುಕ್ಕುಗಲ್ಲ ಬರಿ ಎಲುಬು ಮೈಯಿ ಒಳಸೇರಿದಂಥ ದಿಟ್ಟಿ
ಭೂಮಿ ಭಾರ ಹೊತ್ತಂತೆ ಬೆನ್ನು ನಸುಬಾಗಿ ಕೋಲು ಕುಟ್ಟಿ

ಬರಿಮೈಯೊ ಏನೊ ಅರಮೈಯೊ ಏನೊ ಮಾನಕ್ಕೆ ಮರೆಯು ಬಟ್ಟೆ
ಬರಿಹೊಟ್ಟೆ ಏನೊ ಅರೆಹೊಟ್ಟೆ ಏನೊ ಬದುಕಿರಲು ನೆವವು ಹೊಟ್ಟೆ

ಮಾತನಾಡಿದರು ಮೂಕನಂತೆ ಮೌನದಲೆ ಎಲ್ಲ ಭಾಷ್ಯ
ಸುಮ್ಮನಿದ್ದರೂ ಮಗುವಿನಂತೆ ಲೀಲೆಯೊಳು ಕೃತಿಯು ವಶ್ಯ

ನೀನು ಬರಲು ಮೆರವಣಿಗೆಯಿಲ್ಲ ತುತ್ತೂರಿ ಕಹಳೆ ಇಲ್ಲ
ಬಾಲ ಹಿಂಬಾಲ ಬೊಗಳು ಹೊಗಳುಗಳು ಯಾರ ತರಲೆ ಇಲ್ಲ
ಗಾಳಿಯಷ್ಟು ಹಗುರಾಗಿ ಬರುವೆ ರವಿಕಿರಣದಂತೆ ನೇರ
ಬೆಳಕಿನಂತೆ ತಿಳಿಯಾಗಿ ಬರುವೆ ಜಲದಂತೆ ತೊಳೆಯ ಬಾರ

ಹಣ್ಣಿಗಿಂತ ಹಣ್ಣಾಗಿ ಬರುವೆ ಅನುಭಾವ ರಸವ ಹನಿಸಿ
ಹೂವಿನಂತೆ ಎದೆ ಅರಳುವಂತೆ ಪರಿಮಳದ ಪ್ರೇಮವೆನಿಸಿ

ತಿರೆಯ ಭ್ರಮಣ ಪರಿಯಂತೆ ಬಿಡುವಿರದ ಕಾಯಕರ್ಮನಿರತ
ಅಮರ ತತ್ವ ತೋರಿಸುವ ಮರಗಳೊಲು ಪ್ರಕೃತಿ ಧರ್ಮ ರಕ್ತ

ಋತು ಋತುವು ಹೊಸದು ಋತ ಸತ್ಯ ನಿತ್ಯ ನಿತ್ಯಾತ್ಮ ಲೀನ ನೀನು
ಇದ್ಧಿಲ್ಲದಂತೆ ಸದ್ದಿಲ್ಲದಂತೆ ಇರದಿರುವ ಯೋಗ ನೀನು
***

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...