Home / ಕವನ / ಕವಿತೆ / ನಿನ್ನ ಬರುವು

ನಿನ್ನ ಬರುವು

ನಿನ್ನ ಬರವನೇ ಕಾಯ್ದು ಇರುವೆ ಇರವೆಲ್ಲ ಕಾಯ್ವ ಚಿಂತೆ
ಬರದೆ ನೀನು ಬರಡಾದೆ ನಾನು ಬಾಗಿಲನು ತೆರೆದೆ ನಿಂತೆ

ಬಣ್ಣ ಬಣ್ಣ ವೇಷಗಳ ತೊಟ್ಟು ಬಯಲಾಟ ಬೊಂಬೆಯಂತೆ
ಬಣ್ಣಿಸಿದ್ದೆ ನಾ ಹಿಂದೆ ಅಂತೆಯೇ ಎಲ್ಲ ಅಂತೆ ಕಂತೆ

ಜಟೆಕಿರೀಟದಲಿ ನಾಲ್ಕು ಕೈಗಳಲಿ ವಿವಿಧ ಆಯುಧಗಳ
ರೇಷ್ಠ ಬಟ್ಟೆಗಳ ಚಿನ್ನದೊಡವೆಗಳ ಮುತ್ತು ರತ್ನ ಬಹಳ

ತೊಟ್ಟು ಬರುವಿ ನೀ ಬೆಳಕ ತರುವಿ ಝಗ್ಗೆಂದು ಕಣ್ಣ ಕುಕ್ಕಿ
ಎಂಬ ಭ್ರಮೆಯು ಈಗಿಲ್ಲ ತಂದೆ ತಿಳಿದಿಹುದು ತಿಳಿವು ಸಿಕ್ಕಿ

ಬಾ ಬಾರ ದೇವ ಬಂದೀಯ ನೀನು ಗುರುತಿಸಲು ಬಾರದಂತೆ
ಕಣ್ಣ ಮುಂದೆ ಹಗಲಿರುಳು ತಿರುಗಿದರು ನೋಟವರಿಯದಂತೆ

ಸುಕ್ಕುಗಲ್ಲ ಬರಿ ಎಲುಬು ಮೈಯಿ ಒಳಸೇರಿದಂಥ ದಿಟ್ಟಿ
ಭೂಮಿ ಭಾರ ಹೊತ್ತಂತೆ ಬೆನ್ನು ನಸುಬಾಗಿ ಕೋಲು ಕುಟ್ಟಿ

ಬರಿಮೈಯೊ ಏನೊ ಅರಮೈಯೊ ಏನೊ ಮಾನಕ್ಕೆ ಮರೆಯು ಬಟ್ಟೆ
ಬರಿಹೊಟ್ಟೆ ಏನೊ ಅರೆಹೊಟ್ಟೆ ಏನೊ ಬದುಕಿರಲು ನೆವವು ಹೊಟ್ಟೆ

ಮಾತನಾಡಿದರು ಮೂಕನಂತೆ ಮೌನದಲೆ ಎಲ್ಲ ಭಾಷ್ಯ
ಸುಮ್ಮನಿದ್ದರೂ ಮಗುವಿನಂತೆ ಲೀಲೆಯೊಳು ಕೃತಿಯು ವಶ್ಯ

ನೀನು ಬರಲು ಮೆರವಣಿಗೆಯಿಲ್ಲ ತುತ್ತೂರಿ ಕಹಳೆ ಇಲ್ಲ
ಬಾಲ ಹಿಂಬಾಲ ಬೊಗಳು ಹೊಗಳುಗಳು ಯಾರ ತರಲೆ ಇಲ್ಲ
ಗಾಳಿಯಷ್ಟು ಹಗುರಾಗಿ ಬರುವೆ ರವಿಕಿರಣದಂತೆ ನೇರ
ಬೆಳಕಿನಂತೆ ತಿಳಿಯಾಗಿ ಬರುವೆ ಜಲದಂತೆ ತೊಳೆಯ ಬಾರ

ಹಣ್ಣಿಗಿಂತ ಹಣ್ಣಾಗಿ ಬರುವೆ ಅನುಭಾವ ರಸವ ಹನಿಸಿ
ಹೂವಿನಂತೆ ಎದೆ ಅರಳುವಂತೆ ಪರಿಮಳದ ಪ್ರೇಮವೆನಿಸಿ

ತಿರೆಯ ಭ್ರಮಣ ಪರಿಯಂತೆ ಬಿಡುವಿರದ ಕಾಯಕರ್ಮನಿರತ
ಅಮರ ತತ್ವ ತೋರಿಸುವ ಮರಗಳೊಲು ಪ್ರಕೃತಿ ಧರ್ಮ ರಕ್ತ

ಋತು ಋತುವು ಹೊಸದು ಋತ ಸತ್ಯ ನಿತ್ಯ ನಿತ್ಯಾತ್ಮ ಲೀನ ನೀನು
ಇದ್ಧಿಲ್ಲದಂತೆ ಸದ್ದಿಲ್ಲದಂತೆ ಇರದಿರುವ ಯೋಗ ನೀನು
***

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...