Home / ಕವನ / ಕವಿತೆ / ಚೈತನ್ಯ ಚಿಮ್ಮಿದಾಗ

ಚೈತನ್ಯ ಚಿಮ್ಮಿದಾಗ

ಎಲ್ಲಿಂದ ಬರ್ತೀಯೊ ಯಾವ ಗಳಿಗೆ ಬರ್ತೀಯೊ
ಯಾವ್ಮಾತ್ನಾಗೆ ಹೊಳಿತಿಯೊ ತಿಳಿಯದಲ್ಲಾ
ಹೊರಗೆಲ್ಲ ಹುಡುಕಿದ್ದೆ ಹುಡುಹುಡುಕಿ ದಣಿದಿದ್ದೆ
ಯಾವಾಗ್ಲೋ ಒಳಬಂದು ಕುಂತಿಯಲ್ಲಾ ||೧||

ಹೆಣದಾಗೆ ಚೈತನ್ಯ ಮೈತುಂಬಿ ನಿಂತಂಗೆ
ತುಂಬ್ಕೊಂಡೆ ಬಂದಿತ್ತು ಯಾವ್ದೋ ಶಕ್ತಿ
ಬರಡಾದ ಭೂಮಿಗೆ ಸ್ವರ್ಗಾನೆ ಇಳಿದಿತ್ತು
ಮಂತ್ರ ಹಾಕಿದಂತೆ ಯಾವ್ದೋ ಯುಕ್ತಿ ||೨ ||

ಮರುಭೂಮ್ಯಾಗೆ ಚಿಲುಮೆದ್ದು ಚಿಮ್ದಂಗೆ ಮ್ಯಾಲಕ್ಕೆ
ಎಲ್ಲಿತ್ತೊ ಒಳಸೆಲೆ ಕಾಣ್ಲೆ ಇಲ್ಲ
ಒಣಗಿದ್ದ ಮರದಾಗೆ ಒಮ್ಮಿಂದೊಮ್ಗೆ ಹಸಿರು
ಉಸಿರಾಡಿ ಉಡಿಯಾಗೆ ತುಂಬಿತಲ್ಲ ||೩||

ಆಲಸ್ಯ ಅಡಗ್ಹೋತು ಭಯವೆಲ್ಲ ಕಡೆಗಾಯ್ತು
ಕೋಪ ತಾಪವೆಲ್ಲ ತಣ್ಣಗಾಯ್ತು
ನಿದ್ದೆಲ್ಲ ಎಚ್ರಾತು ಎಚ್ರಾನೆ ಮುದ್ದಾಯ್ತು
ಕಲ್ಲಾಗೆ ಕಣ್ಣೀರು ಬಂದಂಗಾಯ್ತು ||೪||

ಒಬ್ಬನೆ ಇದ್ದವಗೆ ನೂರ್ ಜನ ಬಲಬಂತು
ನಾನೊಬ್ನೆ ಅಲ್ಲಂತ ಧೈರ್ಯ ಬಂತು
ರಾತ್ರೆಲ್ಲ ಬೆಳಕಾತು ಹಗಲೆಲ್ಲ ಬಯಲಾತು
ಹುಚ್ಚೆದ್ದು ಕುಣಿವಂಥ ಸ್ಫೂರ್ತಿ ಬಂತು ||೫||

ನೆಲದಲ್ಲಿ ನಿಂತವ್ಗೆ ಗಗನದ್ಹೂ ಸಿಕ್ಕಿತ್ತು
ಆಳಕ್ಕೆ ಬೇರುಗಳು ಹಬ್ಬಿದ್ದವು
ಒಳಗೆಲ್ಲಾ ಬೆಳೆದಂತೆ ಕೊಂಬೆಗಳು ಬೆಳೆದಿದ್ದು
ವಿಶ್ವಾನೆ ಹಬ್ಬಿದಂತೆ ಚಾಚಿದ್ದವು ||೬||

ಕಷ್ಟಗಳ ಗುಡ್ಡಗಳು ಬಿಳಿ ಮೋಡಗಳಾದವು
ಚಿಂತೆಲ್ಲ ಸಂತೆಲ್ಲ ಬಯಲಾಯಿತು
ದುಃಖಾದ ನೀರಲ್ಲು ಸುಖ ತುಂಬಿ ಕಣ್ಣೀರು
ಸಂಕಟದ ನೋವೆಲ್ಲ ಸಯವಾಯಿತು ||೭||

ನಂಗೊತ್ತು ಈ ಸೊಗಸು ಒಂದೇ ಕ್ಷಣಂಬೋದು
ಜೀವಾ ಹಿಡಿಯಾಕೊಂದೆ ಬೊಗಸೆ ಸಾಕು
ವಿಷಯ ಸಾಗರದಾಗ ಈಜಾಡ್ತಾ ಸಾಗಿದ್ರು
ಒಂದೆ ಹನಿ ಅಮೃತಾವು ಸಾಕೆ ಸಾಕು ||೮||

ಭೂಮಿ ಸೀಮೀ ಬಿಟ್ಟು ಬರಿ ಬಾನು ಬೇಕಿಲ್ಲ
ಬಾನ್ನ್ಯಾಗೆ ಸ್ವರ್ಗಾನೆ ಇರವೊಲ್ದ್ಯಾಕೆ
ಆಕಾಶ್ದಾಗ ಹಾರ್ವಂಥ ಹಕ್ಕೀನೆ ಆಗ್ಬೇಕೆ
ಮಣ್ಣಾಗಿನ ಮಣಿಯಾಗಿ ಇರಬಾರ್ದ್ಯೇಕೆ ||೯||
***

Tagged:

Leave a Reply

Your email address will not be published. Required fields are marked *

ತೆಂಕಣದಿ ಹದಿನಾರು ಮೈಲಿಗಳಾಚಿ ಬಾಂದಳಕೆ ಭುಜಗೊಟ್ಟು ನಿಂತಿರುವ ಸಿಂಹಗಡವೇ-ಇದೋ ನಿನಗೆ ತಲೆಬಾಗುವೆನು. ಶತಮಾನಗಳ ಹಿಂದೆ, ನರಜಾತಿಯಲಿ ಹರಿಯಂತೆ ಮೆರೆದ ವೀರಲೀಲಾಲೋಲ ಶಿವಪ್ರಭುವನು ಶಿರದಲಿ ಹೊತ್ತು ಮೆರೆಯಿಸಿದ ಸಿಂಹಗಡವೇ ಇದೋ-ನಿನಗೆ ವಂದಿಸುವೆನು. ಅಂದು ನಮ್ಮ ನಾಡಿನ ಧರ್‍ಮ-ನಮ್ಮ ಹ...

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...