Home / ಕವನ / ಕವಿತೆ / ಚೈತನ್ಯ ಚಿಮ್ಮಿದಾಗ

ಚೈತನ್ಯ ಚಿಮ್ಮಿದಾಗ

ಎಲ್ಲಿಂದ ಬರ್ತೀಯೊ ಯಾವ ಗಳಿಗೆ ಬರ್ತೀಯೊ
ಯಾವ್ಮಾತ್ನಾಗೆ ಹೊಳಿತಿಯೊ ತಿಳಿಯದಲ್ಲಾ
ಹೊರಗೆಲ್ಲ ಹುಡುಕಿದ್ದೆ ಹುಡುಹುಡುಕಿ ದಣಿದಿದ್ದೆ
ಯಾವಾಗ್ಲೋ ಒಳಬಂದು ಕುಂತಿಯಲ್ಲಾ ||೧||

ಹೆಣದಾಗೆ ಚೈತನ್ಯ ಮೈತುಂಬಿ ನಿಂತಂಗೆ
ತುಂಬ್ಕೊಂಡೆ ಬಂದಿತ್ತು ಯಾವ್ದೋ ಶಕ್ತಿ
ಬರಡಾದ ಭೂಮಿಗೆ ಸ್ವರ್ಗಾನೆ ಇಳಿದಿತ್ತು
ಮಂತ್ರ ಹಾಕಿದಂತೆ ಯಾವ್ದೋ ಯುಕ್ತಿ ||೨ ||

ಮರುಭೂಮ್ಯಾಗೆ ಚಿಲುಮೆದ್ದು ಚಿಮ್ದಂಗೆ ಮ್ಯಾಲಕ್ಕೆ
ಎಲ್ಲಿತ್ತೊ ಒಳಸೆಲೆ ಕಾಣ್ಲೆ ಇಲ್ಲ
ಒಣಗಿದ್ದ ಮರದಾಗೆ ಒಮ್ಮಿಂದೊಮ್ಗೆ ಹಸಿರು
ಉಸಿರಾಡಿ ಉಡಿಯಾಗೆ ತುಂಬಿತಲ್ಲ ||೩||

ಆಲಸ್ಯ ಅಡಗ್ಹೋತು ಭಯವೆಲ್ಲ ಕಡೆಗಾಯ್ತು
ಕೋಪ ತಾಪವೆಲ್ಲ ತಣ್ಣಗಾಯ್ತು
ನಿದ್ದೆಲ್ಲ ಎಚ್ರಾತು ಎಚ್ರಾನೆ ಮುದ್ದಾಯ್ತು
ಕಲ್ಲಾಗೆ ಕಣ್ಣೀರು ಬಂದಂಗಾಯ್ತು ||೪||

ಒಬ್ಬನೆ ಇದ್ದವಗೆ ನೂರ್ ಜನ ಬಲಬಂತು
ನಾನೊಬ್ನೆ ಅಲ್ಲಂತ ಧೈರ್ಯ ಬಂತು
ರಾತ್ರೆಲ್ಲ ಬೆಳಕಾತು ಹಗಲೆಲ್ಲ ಬಯಲಾತು
ಹುಚ್ಚೆದ್ದು ಕುಣಿವಂಥ ಸ್ಫೂರ್ತಿ ಬಂತು ||೫||

ನೆಲದಲ್ಲಿ ನಿಂತವ್ಗೆ ಗಗನದ್ಹೂ ಸಿಕ್ಕಿತ್ತು
ಆಳಕ್ಕೆ ಬೇರುಗಳು ಹಬ್ಬಿದ್ದವು
ಒಳಗೆಲ್ಲಾ ಬೆಳೆದಂತೆ ಕೊಂಬೆಗಳು ಬೆಳೆದಿದ್ದು
ವಿಶ್ವಾನೆ ಹಬ್ಬಿದಂತೆ ಚಾಚಿದ್ದವು ||೬||

ಕಷ್ಟಗಳ ಗುಡ್ಡಗಳು ಬಿಳಿ ಮೋಡಗಳಾದವು
ಚಿಂತೆಲ್ಲ ಸಂತೆಲ್ಲ ಬಯಲಾಯಿತು
ದುಃಖಾದ ನೀರಲ್ಲು ಸುಖ ತುಂಬಿ ಕಣ್ಣೀರು
ಸಂಕಟದ ನೋವೆಲ್ಲ ಸಯವಾಯಿತು ||೭||

ನಂಗೊತ್ತು ಈ ಸೊಗಸು ಒಂದೇ ಕ್ಷಣಂಬೋದು
ಜೀವಾ ಹಿಡಿಯಾಕೊಂದೆ ಬೊಗಸೆ ಸಾಕು
ವಿಷಯ ಸಾಗರದಾಗ ಈಜಾಡ್ತಾ ಸಾಗಿದ್ರು
ಒಂದೆ ಹನಿ ಅಮೃತಾವು ಸಾಕೆ ಸಾಕು ||೮||

ಭೂಮಿ ಸೀಮೀ ಬಿಟ್ಟು ಬರಿ ಬಾನು ಬೇಕಿಲ್ಲ
ಬಾನ್ನ್ಯಾಗೆ ಸ್ವರ್ಗಾನೆ ಇರವೊಲ್ದ್ಯಾಕೆ
ಆಕಾಶ್ದಾಗ ಹಾರ್ವಂಥ ಹಕ್ಕೀನೆ ಆಗ್ಬೇಕೆ
ಮಣ್ಣಾಗಿನ ಮಣಿಯಾಗಿ ಇರಬಾರ್ದ್ಯೇಕೆ ||೯||
***

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...