Home / ಕವನ / ಕವಿತೆ / ಕಾಲ ಬಂದಿದೆ

ಕಾಲ ಬಂದಿದೆ

ಕಾಲ ಬಂದಿದೇ ಅಣ್ಣ ನಮ್ಮ ಕಾಲ ಬಂದಿದೆ ಅಣ್ಣಾ                           ||ಪ||

ಸಾವಿರ ಸಾವಿರ ವರ್ಷದ ಕತ್ತಲೆ ಸಾವು ನೋವುಗಳ ಕಾಲವು ಹೋಗಿ
ಮೂಡಲ ಕೆಂಪಿನ ಕಂಪಿನ ಗಾಳಿಯ ಬೆಳಕಿನ ಕಾಲವು ಅಣ್ಣಾ           ||೧||

ಬೆಳಕನೆಲ್ಲ ಬಚ್ಚಿಟ್ಟುಕೊಂಡು ಬರಿ ಕೊಳಕ ಕುಡಿಸಿದವರ
ಥಳುಕಿನಿಂದ ಕಂಗಳನು ಕುಕ್ಕಿ ಕುರುಡು ಮಾಡಿದವರ                   ||೨||

ಬಯಲಿಗೆಳೆದು ಬೆತ್ತಲೆಯಗೊಳಿಸಿ ಚಮ್ಮಟಿಗೆಯಿಂದ ಥಳಿಸು
ನಯದ ವಂಚಕರ ಸವರಿ ವರೆಸಿ ಮನೆಯನ್ನು ಸ್ವಚ್ಛಗೊಳಿಸು         ||೩||

ಧರ್ಮ ಧರ್ಮವೆಂದಂಧಕಾರವನೆ ರಾಜ್ಯವಾಳಿಸಿದರು
ಕಾಲು ಕೈಗಳನು ಕಟ್ಟಿದ೦ಥ ಕಟ್ಟುಗಳ ಕಿತ್ತು ಎಸೆವ                     ||೪||

ಮೇಲು ಕೀಳುಗಳ ಮಡಿಯ ಮೈಲಿಯ ಕಟ್ಟುಪಾಡು ಕಸವ
ಕಾಲು ಕೈಗಳನು ಕಟ್ಟಿದಂಥ ಕಟ್ಟುಗಳ ಕಿತ್ತು ಎಸೆವ                      ||೫||

ಹೊಸ ಸೆಲೆಯು ಇಲ್ಲದಿರುವಂಥ ಹಳಸು ನೀರಿರುವ ಮೌಢ್ಯ ಹೊಂಡ
ನಿಶೆಯನ್ನು ಉಸಿರು ನೀರೆಂದು ತಿಳಿವ ಅಜ್ಞಾನವಾಯ್ತು ಹೆಂಡ      ||೬||

ನೀತಿ ಶಾಸ್ತ್ರಗಳು ಕೋತಿ ಶಾಸ್ತ್ರಗಳು ನಮಗೆ ಹೇಳಲಿಕ್ಕೆ
ಮಾತು ಬೋಧೆ ತತ್ವಾರ್ಥವೆಲ್ಲ ನಮ್ಮ ಹೂಳಲಿಕ್ಕೆ                      ||೭||

ಪರಮ ಧರ್ಮ ಅಹಿಂಸೆ ಎಂದು ಒತ್ತಿ ಒತ್ತಿ ಸಾರಿ
ಕೊರಡು ಬಡಿದು ಪೌರುಷಪ ಕೊಂದು ಮಾಡಿದರು ಸವಾರಿ          ||೮||

ದಾಸನಾಗು ನಿನ್ನೆಲ್ಲ ಒಪ್ಪಿಸುತ ಕಾಲ ಕೆಳಗೆ ಹೊರಳು
ಭಕ್ತಿ ಮುಕ್ತಿ ಇದೆ ಎಂದು ಕತ್ತಲಲಿ ಎಳೆದರಲ್ಲ ಉರುಲು                ||೯||

ಸ್ನಾನದಂತೆ ಕುಂಯ್ಗುಡುತ ಕಾಲುಗಳ ನೆಕ್ಕಿದ್ದಿನ್ನು ಸಾಕು
ಆನೆಯಂತೆ ಮದ್ದಾನೆಯಂತೆ ತುಳಿದವರ ತುಳಿದು ನೂಕು           ||೧೦||

ಅಂಜಿ ಅಂಜಿ ಕುರಿ ಮಂದೆಯಂತೆ ಇದ್ದವರು ಸಿಂಹದಂತೆ
ಜೂಲು ಕೇಸರವ ಕೆದರಿ ಗರ್ಜಿಸುವ ಸಿಡಿಲು ಮೊಳಗಿದಂತೆ         ||೧೧||

************************************************
೧೧-೬-೮೭

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...