Home / ಕವನ / ಕವಿತೆ / ಕಾಲ ಬಂದಿದೆ

ಕಾಲ ಬಂದಿದೆ

ಕಾಲ ಬಂದಿದೇ ಅಣ್ಣ ನಮ್ಮ ಕಾಲ ಬಂದಿದೆ ಅಣ್ಣಾ                           ||ಪ||

ಸಾವಿರ ಸಾವಿರ ವರ್ಷದ ಕತ್ತಲೆ ಸಾವು ನೋವುಗಳ ಕಾಲವು ಹೋಗಿ
ಮೂಡಲ ಕೆಂಪಿನ ಕಂಪಿನ ಗಾಳಿಯ ಬೆಳಕಿನ ಕಾಲವು ಅಣ್ಣಾ           ||೧||

ಬೆಳಕನೆಲ್ಲ ಬಚ್ಚಿಟ್ಟುಕೊಂಡು ಬರಿ ಕೊಳಕ ಕುಡಿಸಿದವರ
ಥಳುಕಿನಿಂದ ಕಂಗಳನು ಕುಕ್ಕಿ ಕುರುಡು ಮಾಡಿದವರ                   ||೨||

ಬಯಲಿಗೆಳೆದು ಬೆತ್ತಲೆಯಗೊಳಿಸಿ ಚಮ್ಮಟಿಗೆಯಿಂದ ಥಳಿಸು
ನಯದ ವಂಚಕರ ಸವರಿ ವರೆಸಿ ಮನೆಯನ್ನು ಸ್ವಚ್ಛಗೊಳಿಸು         ||೩||

ಧರ್ಮ ಧರ್ಮವೆಂದಂಧಕಾರವನೆ ರಾಜ್ಯವಾಳಿಸಿದರು
ಕಾಲು ಕೈಗಳನು ಕಟ್ಟಿದ೦ಥ ಕಟ್ಟುಗಳ ಕಿತ್ತು ಎಸೆವ                     ||೪||

ಮೇಲು ಕೀಳುಗಳ ಮಡಿಯ ಮೈಲಿಯ ಕಟ್ಟುಪಾಡು ಕಸವ
ಕಾಲು ಕೈಗಳನು ಕಟ್ಟಿದಂಥ ಕಟ್ಟುಗಳ ಕಿತ್ತು ಎಸೆವ                      ||೫||

ಹೊಸ ಸೆಲೆಯು ಇಲ್ಲದಿರುವಂಥ ಹಳಸು ನೀರಿರುವ ಮೌಢ್ಯ ಹೊಂಡ
ನಿಶೆಯನ್ನು ಉಸಿರು ನೀರೆಂದು ತಿಳಿವ ಅಜ್ಞಾನವಾಯ್ತು ಹೆಂಡ      ||೬||

ನೀತಿ ಶಾಸ್ತ್ರಗಳು ಕೋತಿ ಶಾಸ್ತ್ರಗಳು ನಮಗೆ ಹೇಳಲಿಕ್ಕೆ
ಮಾತು ಬೋಧೆ ತತ್ವಾರ್ಥವೆಲ್ಲ ನಮ್ಮ ಹೂಳಲಿಕ್ಕೆ                      ||೭||

ಪರಮ ಧರ್ಮ ಅಹಿಂಸೆ ಎಂದು ಒತ್ತಿ ಒತ್ತಿ ಸಾರಿ
ಕೊರಡು ಬಡಿದು ಪೌರುಷಪ ಕೊಂದು ಮಾಡಿದರು ಸವಾರಿ          ||೮||

ದಾಸನಾಗು ನಿನ್ನೆಲ್ಲ ಒಪ್ಪಿಸುತ ಕಾಲ ಕೆಳಗೆ ಹೊರಳು
ಭಕ್ತಿ ಮುಕ್ತಿ ಇದೆ ಎಂದು ಕತ್ತಲಲಿ ಎಳೆದರಲ್ಲ ಉರುಲು                ||೯||

ಸ್ನಾನದಂತೆ ಕುಂಯ್ಗುಡುತ ಕಾಲುಗಳ ನೆಕ್ಕಿದ್ದಿನ್ನು ಸಾಕು
ಆನೆಯಂತೆ ಮದ್ದಾನೆಯಂತೆ ತುಳಿದವರ ತುಳಿದು ನೂಕು           ||೧೦||

ಅಂಜಿ ಅಂಜಿ ಕುರಿ ಮಂದೆಯಂತೆ ಇದ್ದವರು ಸಿಂಹದಂತೆ
ಜೂಲು ಕೇಸರವ ಕೆದರಿ ಗರ್ಜಿಸುವ ಸಿಡಿಲು ಮೊಳಗಿದಂತೆ         ||೧೧||

************************************************
೧೧-೬-೮೭

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...