Home / ಕವನ / ಕವಿತೆ / ಹೋರಾಟಕೆ

ಹೋರಾಟಕೆ

ಏಳಿ ಏಳಿ ಗೆಳೆಯರೇ ಏಳಿರಿ ಹೋರಾಟಕೆ
ತಾಳಿ ಬಾಳು ಎನುತ ಕೊಳೆತು ಹೋದೆವಲ್ಲ ಹಿಂದಕೆ ||ಪ||

ಗುಬ್ಬಿ ಪಾರಿವಾಳಗಳನು ಹದ್ದಿನಿಂದ ಉಳಿಸಲು
ಜಿಂಕೆ ಮೊಲಗಳನ್ನು ವ್ಯಾಘ್ರ ಬಾಯಿಯಿಂದ ಉಳಿಸಲು
ಮುರುಕು ಗುಡಿಸಲಲ್ಲಿ ದೀಪ ಮಿಣುಕು ಕುಟುಕು ಜೀವಕೆ
ಕಣ್ಣ ನೀರ ತೊಡೆದು ಎಣ್ಣೆ ಹೊಯ್ದು ಜ್ವಾಲೆ ಉರಿಸಲು ||೧||

ಹರಕು ತೇಪೆ ಬಟ್ಟೆಗಳಿಗೆ ರಕ್ಷೆ ಕವಚ ಕೊಡಲಿಕೆ
ಒಡಕು ಗಡಿಗೆ ಗಂಜಿಯಗಳ ಅಕ್ಷಯಾನ್ನ ಮಾಡಲಿಕೆ
ಎಲುಬು ಗೂಡು ಸುಕ್ಕು ಚರ್ಮಗಳಲಿ ಶಕ್ತಿ ತುಂಬಲು
ಮಾಂಸ ಭಕ್ಷಕಾಸುರರನು ಮಸಣ ಮನೆಗೆ ನೂಕಲು ||೨||

ಆಕಳಂತೆ ಮೇಕೆಯಂತೆ ಹುಲಿಯು ತೋಳ ಮೆರೆದಿವೆ
ಮೊಲಗಳನ್ನು ಕಚ್ಚಿತಿಂಬ ಹದ್ದುಗದ್ದುಗೇರಿವೆ
ಮತ ಧರ್ಮದ ಮತ್ತಿನಲ್ಲಿ ಯುಗಯುಗಗಳೆ ಕಳೆದಿವೆ
ಕೊಳೆತ ಬಾವಿ ಹಳಸುನಾತ ಕುಡಿಯುತ ಕಾಲೆಳೆದಿವೆ ||೩||

ನಾಮ ಪಟ್ಟಿದಾರ ಜುಟ್ಟುಗಳನು ಒಗೆದು ಬನ್ನಿರೊ
ಕಾವಿ ಬಟ್ಟೆ ಗೂಗೆಗಳನು ದುಡಿವ ಹೊಲಕೆ ತನ್ನಿರೊ
ಪ್ರಜರ ರಾಜರಾಗಿ ಮೆರೆವ ಹದ್ದು ತೋಳ ಹುಲಿಗಳ
ಬಣ್ಣ ಬಯಲಿಗೆಳೆದು ಹರಕು ಗುಡಿಸಲುಗಳಿಗೆಳೆಯಿರೊ ||೪||

ಗಿಳಿಪಾಠದ ಓದು ಓದಿ ಕೂಚು ಭಟ್ಟರಾದೆವೂ
ಕಾಗದ ಕೈಯಲ್ಲಿ ಹಿಡಿದು ಅಲೆವ ತಿರುಕರಾದೆವೂ
ಕುರ್ಚಿಕಾಲು ಹಣದ ಪಾದ ಹಿಡಿದು ಹೊಟ್ಟೆ ಹೊರೆದೆವೊ
ಗಟ್ಟಿಯಾಗಿ ನಗಲು ಬರದೆ ಬೆದರುಗೊಂಬೆಯಾದೆವೊ ||೫||

ಧಮನಿಗಳಲಿ ಉಚ್ಚೆ ನೀರು ಹರಿವರೆಲ್ಲ ಬಿದ್ದಿರಿ
ಕೆಂಪುರಕ್ತ ನಿಮಗಿದ್ದರೆ ಕ್ರಾಂತಿ ಮಾಡಲೆದ್ದಿರಿ
ಕುಷ್ಠರೋಗದಂಥ ಕೊಳೆತ ಪರಂಪರೆಯ ಒದೆಯಿರಿ
ಸಾಕು ಸಾಕು ಹಣದ ಬದುಕು ಹೋರಾಟಕೆ ಕುದಿಯಿರಿ ||೬||
**********************
೧೧.೧೧.೮೬

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...