Home / ಕವನ / ಕವಿತೆ / ಒಬ್ಬೊಬ್ಬ ಸೂರ್ಯನ ಕೊಡಿ

ಒಬ್ಬೊಬ್ಬ ಸೂರ್ಯನ ಕೊಡಿ

ಅಕ್ಕ ತಂಗಿಯರೇ!
ಪ್ರತಿಯೊಬ್ಬರೂ ಒಬ್ಬೊಬ್ಬ ಸೂರ್ಯನನ್ನು ದೇಶಕ್ಕೆ ಕೊಡಿ
ಕನಿಷ್ಟ ಪಕ್ಷ ನಕ್ಷತ್ರವನ್ನಾಗಲೀ ಕೊನೆಗೆ ಹಣತೆಯನ್ನಾಗಲೀ ಕೊಡಿ

ಎರವಲು ಬೆಳಕಿನಿಂದ ಮೆರೆವ
ಗ್ರಹ ಉಪಗ್ರಹಗಳನ್ನೋ
ಉಲ್ಕೆಗಳನ್ನೋ ಕೊಡಬೇಡಿ

ಒಂದರೊಳಗೊಂದು ಸಿಕ್ಕಾ ಸಿಕ್ಕಾಗಿ ಗೋಜಲುಗೊಂಡು
ಒಂದನೊಂದು ಕಿತ್ತು ತಿನ್ನುವ ಕೆಲವು
ಹೆಗ್ಗಣ ಹದ್ದು ನಾಯಿ ನರಿಗಳಿಗಂಜಿ
ಪುತು ಪುತು ತಿಪ್ಪೆ ಸೇರಿಕೊಳ್ಳುವ
ಅಲ್ಲೇ ಕೈಲಾಸ ವೈಕುಂಠಗಳ ತೇಲುಗಣ್ಣಿನಲ್ಲಿ ಕಾಣುವ
ಬರೀ ಹುರುಳಿಲ್ಲದ ನರಳಾಟದ ನರಸತ್ತ
ನರಹುಳಗಳನ್ನು ಮಾತ್ರ ಕೊಡಬೇಡಿ

ತಮ್ಮ ತಮ್ಮೊಳಗೆ ಹೆಣೆದುಕೊಂಡ
ಬೇಲಿಗಳಿಗಾಗಿ ಇರಿದಾಡಿ ಸಾಯುವುದರಲ್ಲೇ
ತಮ್ಮ ಪೌರುಷ ಶೌರ್ಯಗಳನ್ನೆಲ್ಲ ಕಳೆದುಕೊಳ್ಳುತ್ತಿರುವ
ಮೃಗಗಳನ್ನು ಮಾತ್ರ ಕೊಡಬೇಡಿ
ಹೆಗ್ಗಣ ಹದ್ದು ನಾಯಿ ನರಿಗಳೇನಾದರೂ
ನಿಮ್ಮೊಡಲಿಂದ ಹುಟ್ಟಿದರೆ
ಹೆತ್ತವರಿಗೆ ಹೆಗ್ಗಣ ಮುದ್ದೆಂದು ಮುದ್ದಾಡಬೇಡಿ
ಪಾಪ ಎಂದು ಕರುಣೆ ತೋರಿಸಬೇಡಿ
ಬಲಿತಂತೆಲ್ಲ ಅವು ನಿಮ್ಮನ್ನೇ |
ಅಥವಾ ನಿಮ್ಮಂಥ ಎಷ್ಟೋ ತಾಯಿ ಅಕ್ಕ ತಂಗಿಯರನ್ನೇ
ಹರಿದು ಕಿತ್ತು ತಿನ್ನುತ್ತ ಹೋದರೆ
ಅಂಥ ರಕ್ಕಸಗಳ್ಳಿಗಳನ್ನು ಹಡೆದ ನಿಮ್ಮನ್ನು
ದೇಶದ ಹೆತ್ತಮ್ಮ ಕ್ಷಮಿಸಳು
*****
೧೦.೬.೮೬

Tagged:

Leave a Reply

Your email address will not be published. Required fields are marked *

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...