Home / ಕವನ / ಕವಿತೆ / ಒಬ್ಬೊಬ್ಬ ಸೂರ್ಯನ ಕೊಡಿ

ಒಬ್ಬೊಬ್ಬ ಸೂರ್ಯನ ಕೊಡಿ

ಅಕ್ಕ ತಂಗಿಯರೇ!
ಪ್ರತಿಯೊಬ್ಬರೂ ಒಬ್ಬೊಬ್ಬ ಸೂರ್ಯನನ್ನು ದೇಶಕ್ಕೆ ಕೊಡಿ
ಕನಿಷ್ಟ ಪಕ್ಷ ನಕ್ಷತ್ರವನ್ನಾಗಲೀ ಕೊನೆಗೆ ಹಣತೆಯನ್ನಾಗಲೀ ಕೊಡಿ

ಎರವಲು ಬೆಳಕಿನಿಂದ ಮೆರೆವ
ಗ್ರಹ ಉಪಗ್ರಹಗಳನ್ನೋ
ಉಲ್ಕೆಗಳನ್ನೋ ಕೊಡಬೇಡಿ

ಒಂದರೊಳಗೊಂದು ಸಿಕ್ಕಾ ಸಿಕ್ಕಾಗಿ ಗೋಜಲುಗೊಂಡು
ಒಂದನೊಂದು ಕಿತ್ತು ತಿನ್ನುವ ಕೆಲವು
ಹೆಗ್ಗಣ ಹದ್ದು ನಾಯಿ ನರಿಗಳಿಗಂಜಿ
ಪುತು ಪುತು ತಿಪ್ಪೆ ಸೇರಿಕೊಳ್ಳುವ
ಅಲ್ಲೇ ಕೈಲಾಸ ವೈಕುಂಠಗಳ ತೇಲುಗಣ್ಣಿನಲ್ಲಿ ಕಾಣುವ
ಬರೀ ಹುರುಳಿಲ್ಲದ ನರಳಾಟದ ನರಸತ್ತ
ನರಹುಳಗಳನ್ನು ಮಾತ್ರ ಕೊಡಬೇಡಿ

ತಮ್ಮ ತಮ್ಮೊಳಗೆ ಹೆಣೆದುಕೊಂಡ
ಬೇಲಿಗಳಿಗಾಗಿ ಇರಿದಾಡಿ ಸಾಯುವುದರಲ್ಲೇ
ತಮ್ಮ ಪೌರುಷ ಶೌರ್ಯಗಳನ್ನೆಲ್ಲ ಕಳೆದುಕೊಳ್ಳುತ್ತಿರುವ
ಮೃಗಗಳನ್ನು ಮಾತ್ರ ಕೊಡಬೇಡಿ
ಹೆಗ್ಗಣ ಹದ್ದು ನಾಯಿ ನರಿಗಳೇನಾದರೂ
ನಿಮ್ಮೊಡಲಿಂದ ಹುಟ್ಟಿದರೆ
ಹೆತ್ತವರಿಗೆ ಹೆಗ್ಗಣ ಮುದ್ದೆಂದು ಮುದ್ದಾಡಬೇಡಿ
ಪಾಪ ಎಂದು ಕರುಣೆ ತೋರಿಸಬೇಡಿ
ಬಲಿತಂತೆಲ್ಲ ಅವು ನಿಮ್ಮನ್ನೇ |
ಅಥವಾ ನಿಮ್ಮಂಥ ಎಷ್ಟೋ ತಾಯಿ ಅಕ್ಕ ತಂಗಿಯರನ್ನೇ
ಹರಿದು ಕಿತ್ತು ತಿನ್ನುತ್ತ ಹೋದರೆ
ಅಂಥ ರಕ್ಕಸಗಳ್ಳಿಗಳನ್ನು ಹಡೆದ ನಿಮ್ಮನ್ನು
ದೇಶದ ಹೆತ್ತಮ್ಮ ಕ್ಷಮಿಸಳು
*****
೧೦.೬.೮೬

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...