Home / ಕವನ / ಕವಿತೆ / ಹಾಡಬೇಕು

ಹಾಡಬೇಕು

ಹಾಡು ಹಾಡಬೇಕು ಹೀಗೆ ಹಾಡು ಹಾಡಬೇಕು
ಮನಸಿನ ಮೂಸೆಯ ಭಾವದ ಕುದಿಗಳು
ಉಕ್ಕಿ ಹರಿಯಬೇಕು ಹಾಡಿನ ಪಾಡು ಪಡೆಯಬೇಕು      ||ಪ||

ಅಂತರಂಗದಲಿ ರಿಂಗಣಗುಣಿಯುತ
ಒಲವು ಉಲಿಯಬೇಕು ಸಹಜದ ಲಯವು ನಲಿಯಬೇಕು
ಒಳ ತಲ್ಲಣಗಳ ಪಲ್ಲವಿ ನರಳುತ
ಹೂವು ಅರಳಬೇಕು ಸುಗಂಧ ಸುತ್ತ ಹರಡಬೇಕು        ||೧||

ಎಲ್ಲ ದಿಕ್ಕುಗಳ ಎಲೆ ಕಡ್ಡಿಗಳನು
ತಂದು ಹೆಣೆಯಬೇಕು ಕನಸಿನ ಗೂಡು ಕಟ್ಟಬೇಕು
ಆಶೆಯ ಮರಿಗಳ ಹಸಿವು ನೋವುಗಳ
ಅಳುವು ನಿಲ್ಲಬೇಕು ನಗುವಿನ ಹಕ್ಕಿ ಹಾಡಬೇಕು          ||೨||

ಛಿದ್ರ ಭಿದ್ರ ತುಂಡುಗಳ ಜೋಡಿಸುತ
ಕನ್ನಡಿ ನಗಬೇಕು ತಿಳಿವಿನ ಬಿಂಬ ಕಾಣಬೇಕು
ಸಂದು ಗೊಂದುಗಳ ಕಂದಕ ಸೆರೆಗಳ
ತೂರಿ ಚಿಮ್ಮಬೇಕು ಹಾಡಿನ ಹೊಳೆಯು ಹೊಮ್ಮಬೇಕು  ||೩||

ಹರಿದು ಕೊಳೆಯುವೀ ಎಳೆಗಳ ಕಲೆಸುತ
ಬಟ್ಟೆ ನೇಯಬೇಕು ಬಾಳಿಗೆ ಬಟ್ಟೆದೋರಬೇಕು
ಗೊಬ್ಬರ ಕೊಳೆಗಳ ಈ ನೆಲದಿಂದಲೆ
ಗಿಡವು ಮೂಡಬೇಕು ಜೀವನ ರಸಫಲ ಬಿಡಬೇಕು       ||೪||

ದಿನ ದಿನ ಸಾಗುವ ಸಂಜೆ ಬೆಳಗುಗಳ
ಬಣ್ಣ ಬಳಸಬೇಕು ಸಂಧ್ಯಾ ರಾಗ ಹರಿಯಬೇಕು
ಮುದಿ ಸಂಜೆಗೆ ಹಸುಗಂದನ ಎಳೆ ನಗೆ
ಬೆಸುಗೆಯಾಗಬೇಕು ಚೇತನ ಸೆಲೆಯು ಸದಾ ಬೇಕು    ||೫||

ಹೇಡಿತನದ ಹುಳು ಹತ್ತಿದ ಜೀವಕೆ
ಜೀವ ಸತ್ವ ಬೇಕು ಹಾಡಿನ ಶಕ್ತಿ ತುಂಬಬೇಕು
ದೇಶದ ಹೃದಯವು ದುಡಿಯುವ ಕೈಗಳ
ನಾಡಿ ಹಿಡಿಯಬೇಕು, ಜನಮನದಾಳ ಮಿಡಿಯಬೇಕು   ||೬||

ಕಣ್ಣೀರಿನ ಧಾರೆಗಳನು ಒರೆಸುವ
ಕೈಯಿದಾಗಬೇಕು ದುಡಿಯುವ ಕೈಗೆ ಬಾಗಬೇಕು
ಒಣಗಿದ ಮರುಭೂಮಿಗಳೆದೆಯೊಳಗಡೆ
ಒಲವು ಹರಿಯಬೇಕು ಹಿಗ್ಗಿನ ತೋಟವರಳಬೇಕು         ||೭||

ದುಷ್ಟ ಶಕ್ತಿಗಳ ಮುಳ್ಳುಕಳ್ಳಿಗಳ
ಕೊಚ್ಚಿ ಹಾಕಬೇಕು ಹಾಡಿದು ಕತ್ತಿಯಾಗಬೇಕು
ಮೋಸ ವಂಚನೆಯ ಸ್ವಾರ್ಥ ಚಿಂತನೆಯ
ಕಸವ ಸುಡಲು ಬೇಕು ಬೆಂಕಿಯು ಹಾಡಿದಾಗಬೇಕು       ||೮||

ದುರ್ಬಲರಿಗೆ ಬಲವೀಯುತ ಕೊಬ್ಬಿದ
ಖೂಳರೆದೆಗೆ ಬಾಣಾ ಸಾರ್ಥಕ ಹಾಡಿನ ಪರಿ ಕಾಣಾ
ದಿನ ದಿನ ಹೊಸ ಹೊಸ ಚೆಲುವನು ತಾಳುತ
ಹಾಡು ಕುಣಿಯಬೇಕು ಕಾಲದ ಹೆಜ್ಜೆ ಮೇಳಬೇಕು
*****************

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...