Home / ಕವನ / ಕವಿತೆ / ಡೊಳ್ಳನ ಪದ

ಡೊಳ್ಳನ ಪದ

ಗುರುವೇ ನಮ್ಮಾಯ ದೇವಾರ್ ಬಂದಾವ ಬನ್ನಿರೂ
ಹರನೇ ನಮ್ಮಾಯ್ ದೇವರಿಗೆ ಶರಣೆನ್ನಿರೋ
ಸ್ವಾಮಿ ನಮ್ಮಾಯ್ ದೇವಾರ್ ಬಂದಾವ ಬನ್ನಿರೋ ||ಪ||

ದೇವರು ಊರಿಗೆ ಬಂದಾವೇ ಅಕ್ಷರ ವರವಾ ತಂದಾವೆ
ಸಾವಿರದಂಥ ನೋವಿರದಂಥ ವಿದ್ಯೆಯ ಅಮೃತ ತಂದಾವೆ ||೧||

ವಿದ್ಯೆಯ ಕಲಿಯಿರಿ ಬುದ್ದಿಯ ಬೆಳೆಸಿರಿ ಅದುವೇ ಸಂಪತ್ತು ಅಂದಾವೆ
ನಿಮ್ಮ ಉದ್ದಾರ ನಿಮ್ಮ್ಮ ಕೈಯಾಗೆ ಎನ್ನುತ ಕತ್ತಲೆ ಕೊಂದಾವೆ ||೨||

ಹೆಬ್ಬಟ್ಟು ಗುರುತು ನರನಿಗೆ ಶಾಪಾ
ಶಾಪವ ಬಿಡಿಸಾಕೆ ಬಂದಾವೆ
ದೇವರ ಲೋಕದ ಒಳಗಡೆ ಪರವೇಶ
ಅಂಥಾವ್ರಿಗಿಲ್ಲಂತ ಸಾರ್ಯಾವೆ ||೩||

ಇಲ್ಲಿಯವರೆಗೆಲ್ಲ ಓದಿದ್ದ ತಲೆಗಳು
ನಮ್ಮನ್ನ ಕಾಲಾಗೆ ತುಳಿದಾವೆ
ಕೆಳಗೆ ಬಿದ್ದವರೆಲ್ಲ ಮ್ಯಾಲೆದ್ದು ನಿಲ್ಲಾಕ
ಆಸರೆ ಒಂದಾ ತಂದಾವೆ ||೪||

ಮಕ್ಕಳು ಭಾಳಾ ದೇಶಕೆ ಭಾರಾ
ಭಾರತ ಮಾತೆಯ ಕೊಂದಾವೆ
ಒಂದೊಂದು ಮನಿಯಾಗೆ ಇಬ್ಬರು ಮಕ್ಕಳು
ಸಾಕೇ ಸಾಕು ಅಂದಾವೆ ||೫||

ಆರೋಗ್ಯ ಜೀವನ ಸ್ವಚ್ಛತೆ ಜೀವನ
ಅದುವೇ ಸ್ವರ್ಗಾ ಅಂದಾವೆ
ಕಾಯಿಲೆಗಳಿಗೆಲ್ಲ ದೇವರ ಗುರಿ ಮಾಡಿ
ಮೂಢರಾಗಬೇಡಿ ಅಂದಾವೆ ||೬||

ಹೆಣ್ಣು ಗಂಡೂ ಒಲವಿನ ಬಾಳಿಗೆ
ಸರಳ ವಿವಾಹವೆ ಸರಿ ನೋಡ್ರಿ
ಅದ್ದೂರಿ ಗದ್ದಲ ವೈಭವದ ಮದುವೆಯ
ಮಾಡುತ ಸಾಲದಿ ಕೊಳಿಬ್ಯಾಡ್ರಿ ||೭||

ಗಂಡೂ ಹೆಣ್ಣೂ ಎರಡೂ ಕಣ್ಣು
ದೇವರ ಲೀಲ್ಯಾಗ ಅಂದಾವೆ
ಹೆಣ್ಣನು ತುಳಿಯುತ ಬದುಕುವ ಗಂಡು
ಗಂಡಲ್ಲ ಭಂಡಾ ಅಂದಾವೆ ||೮||

ಪುರಾಣ ಕತೆಗಳ ಕತೆಯಂತೆ ನೋಡಿರಿ
ನೂರಕ್ಕೆ ನೂರು ನಿಜವಲ್ಲ
ಧರ್ಮದ ಮರ್ಮವ ಸರಿಯಾಗಿ ತಿಳಿಯಿರಿ
ಧರ್ರ್ಮಾಂಧತೆಯಿಂದ ಉಳಿವಿಲ್ಲ ||೯||

ಮಾನವರೆಲ್ಲ ಒಂದೇ ಎನ್ನಿರಿ
ಭೇದವ ಮಾಡೋದು ಮಹಾಪಾಪ
ಮೇಲು ಕೀಳೆನ್ನುತ ಮೆರೆಯುವ ಮೂರ್ಖರಿಗೆ
ದೇವರು ಕೊಡತಾವ ಹಿಡಿಶಾಪ ||೧೦||

ಎಲ್ಲರು ಕೂಡುತ ದುಡಿಯುತ ಹಾಡುತ
ಬಾಳಿರಿ ಎನ್ನುತ ಹರಸ್ಯಾವೆ
ಎಲ್ಲರಿಗಾಗಿಯೆ ಎಲ್ಲರು ಇದುವೇ
ಮಾನವ ಧರ್ಮೆಂದು ಸಾರ್ಯಾವೆ ||೧೧||

******

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...