Home / ಕವನ / ಕವಿತೆ / ಬುಡು ಬುಡುಕಿ ಹಾಡು

ಬುಡು ಬುಡುಕಿ ಹಾಡು

ಟಿಂವ್ ಟಿವಕು ಟಿವಕು ಟಿಂವ್ ಟಿವಕು ಟಿವಕು
ಟಿಂವ್ ಟಿವಕು ಟಿವಕು ಟಿಂವ್ ಟಿಂವ್ ||ಪ||

ಐತೆ ಐತೆ ಶುಭವಾಗತ್ಯೆತೆ ಬಲವಾಗತ್ಯೆತೆ ತಂಗೀ
ಹಕ್ಕಿ ಹಾಡುತದ ಶಕುನ ನುಡಿಯುತದೆ ಶುಭವು ನಿನಗೆ ತಂಗೀ ||೧||

ಮೂಡಲ ದೇಶದ ಬುಡುಬುಡುಕ್ಯಾನಾ
ಹಾಡನು ಹಾಡುತ ಬಂದೀನಮ್ಮಾ
ಮೂಡುವ ಸೂರ್ಯನ ಹಾಡನು ತಂದೆ
ಓಡಿಸು ಕತ್ತಲ ತಂಗೆಮ್ಮಾ ||೨||

ಹೊಟ್ಟೆಯ ಪಾಡಿಗೆ ದುಡಿಯುತ ಉಣ್ಣುತ
ಕಷ್ಟದಿ ಬದುಕಿರೆ ಸಾಲ್ದಮ್ಮ
ಇಷ್ಟಾನಿಷ್ಟವ ತಿಳಿದೂ ನೋಡೀ
ಗಟ್ಟಿಯ ಬಾಳನ್ನು ಬಾಳಮ್ಮಾ ||೩||

ಹೊಸ ಹೊಸ ಜೀವನ ವಿಧಾನ ಬಂದಿದೆ
ಕಸಮಳ ಕಳೆಯೇ ತಂಗೆಮ್ಮಾ
ಹೊಸಾ ಕಾಲವಿದು ಓದು ಬರೆಯುವುದು
ಹಸನಾಗಿರಲಿಕೆ ಮೂಲಮ್ಮಾ ||೪||

ಓದಿಲ್ಲದ ಮನೆ ಕತ್ತಲೇ ಕಾಣೇ
ಓದನು ಸಾಧಿಸಬೇಕಮ್ಮಾ
ಬಾಧಗಳೆಲ್ಲಕೆ ದಾರಿ ತೋರುವುದು
ವೇದನೆ ಕಳೆಯೇ ತಂಗೆಮ್ಮಾ ||೫||

ಹೆಣ್ಣೊಬ್ಬಳು ನೀ ವಿದ್ಯೆಯ ಕಲಿತರೆ
ಕಣ್ಣೇ ಬಂದಂಗೆ ಮನೆಗೆಲ್ಲಾ
ಪುಣ್ಯವಂತರು ಮುಂದಿನ ಪೀಳಿಗೆ
ಕಣ್ಮಣಿ ಲೋಕಕೆ ನೀನಮ್ಮಾ ||೬||

ನಿನ್ನಾರೋಗ್ಯಾ ಗಂಡನ ಮಕ್ಕಳ
ಚೆನ್ನಾದ ಸ್ಥಿತಿ ನಿನ್ನ ಕೈಲಿ
ಬಿನ್ನಾಣಿಂದಲಿ ಪೇಳುವೆನಮ್ಮಾ
ಚಿನ್ನದ ಕನ್ನಡ ಕಲಿಯಮ್ಮಾ ||೭||

ಮನೆಯೇ ಮೊದಲನೆ ಶಾಲೆಯು ಲೋಕದಿ
ಮನೆ ಮನೆ ಬೆಳಕು ನಿನ್ನಿಂದಾ
ಕನಸುಗಳೆಲ್ಲಾ ಗೂಡು ಕಟ್ಟುವವು
ನನಸಾಗುವವು ನಿನ್ನಿಂದಾ ||೮||

ಹೆಣ್ಣಿಗೆ ಸ್ವಾತಂತ್ರಿಲ್ಲಿನ್ನುವ ಜನ
ಹುಣ್ಣು ರೋಗಮಯವಾಗುವರು
ಹೆಣ್ಣು ಗಂಡುಗಳು ಸಮಬಲವಾದರೆ
ಗಣ್ಯ ಬಲಾಢ್ಯರು ಆಗುವರು ||೯||

ಹುಟ್ಟಿದ ಮನೆಯನು ಬಿಟ್ಟು ಬಂದರೂ
ಕೊಟ್ಟ ಮನೆಯು ನಿನದಾಗುವುದು
ನೆಟ್ಟಗೆ ಎರಡೂ ಮನೆಗಳ ಬೆಸೆದು
ದಿಟ್ಟ ಕೀರ್ತಿ ನಿನಗಾಗುವುದು ||೧೦||

ನಿನ್ನಯ ಜೋಗುಳ ದನಿಯಲಿ ನಾಡಿನ
ಉನ್ನತಿ ಒಲವು ಮೊಳಗುವುದು
ನಿನ್ನೆದೆ ಹಾಲಲಿ ಮಾನವತೆಯ ಹೊಳೆ
ಚೆನ್ನಾಗೆಲ್ಲೆಡೆ ಹರಿಯುವುದು ||೧೧||

ಸದ್ಗುಣ ಎಂಬುದು ನಿನ್ನಾಭರಣ
ಮುದ್ದಿನ ಪ್ರೀತಿಯ ಮೂಗುತಿಯು
ಶುದ್ಧದ ನಗುವೇ ನಂದಾದೀಪವು
ಸದ್ಗತಿ ಮನೆಗದು ನೋಡಮ್ಮಾ ||೧೨||

ಅಕ್ಷರ ಕಲಿಯುತ ಮಕ್ಕಳ ತಿದ್ದುತ
ಶಿಕ್ಷಕಿ ಲೋಕಕೆ ಆಗಮ್ಮಾ
ನಕ್ಕರೆ ನೀನೀ ಜಗವೇ ನಗುವುದು
ಅಕ್ಕರೆಯಲಿ ನೀ ಬೆಳೆಸಮ್ಮಾ ||೧೩||

ಬಂಗಾರೆನ್ನುವ ಆಶೆಯು ಬ್ಯಾಡಾ
ಬಂಗಾರವು ಮನಸಿರಿಯಮ್ಮಾ
ಸಿಂಗಾರೆನ್ನುವ ಪಾಶವು ಬ್ಯಾಡಾ
ಸಿಂಗಾರವು ನಿಜ ವಿದ್ಯಮ್ಮಾ ||೧೪||

ಮೌಢ್ಯದ ಹುಳುಗಳ ನಿನ್ನ ಸೆರಗಿನಲಿ
ಹೊದ್ದಿಸಿ ಪೋಷಿಸಬ್ಯಾಡಮ್ಮಾ
ಆಢ್ಯದಿ ಮೆರೆಯುವ ಬೊಜ್ಜು ಮೈಗಳಿಗೆ
ಕೂಡಿಸಿ ಕೂಳಿಡ ಬ್ಯಾಡಮ್ಮಾ ||೧೫||

ವರದಕ್ಷಣೆಯನು ತೆಗೆದುಕೊಳ್ಳುವ
ಕುರಿ ಮಕ್ಕಳ ಹಡಿಬ್ಯಾಡಮ್ಮಾ
ಪರಿ ಪರಿ ಲಂಚದ ಬೆಂಕಿಯ ಬೆಳೆಸುವ
ನರಿಗಳ ನೀ ಕೊಡಬ್ಯಾಡಮ್ಮಾ ||೧೬||

ಅಬಲೆಯಲ್ಲವೇ ತಂಗೆಮ್ಮಾ ನೀ
ದುರ್ಬಲೆ ಎಂಬುದ ಮರೆಯಮ್ಮಾ
ಸಬಲ ಸಮಾಜದ ನಿರ್ಮಾಣಕೆ ನೀ
ಪ್ರಬಲೆಯಾಗು ನೀ ಏಳಮ್ಮಾ ||೧೭||

ಕೇಳೇ ಅಕ್ಕಾ ಕೇಳೇ ತಂಗೀ
ಕೇಳೇ ಅವ್ವಾ ನಮ್ಮಮ್ಮಾ
ಹೇಳುವೆ ನಿನ್ನದೆ ಒಳಗಿನ ಮಾತಾ
ಬಾಳುವೆ ನುಡಿ ಬುಡುಬುಡಿಕೆಮ್ಮ ||೧೮||

*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...