ಭೂತ

ಕಾಡುತಿದೆ ಭೂತ
ಅನೇಕ ರೂಪಗಳಲ್ಲಿ
ಅನೇಕ ಪರಿಗಳಲ್ಲಿ

ಮನೆ ಬಾಗಿಲು ಕಿಟಕಿಗಳ
ಕೊನೆಗೆ ಕೋಣೆ, ಮೆಟ್ಟಲುಗಳ
ದಿಕ್ಕ ದೆಸೆಗಳ ನಿರ್ಧರಿಸುತ್ತದೆ

ಸಾಯುವ ಹುಟ್ಟುವ
ಕ್ಷಣ ಗಣನೆಗಳ ಗುಣುಗುಣಿಸಿ
ಪೂಜೆ ಬಲಿದಾನಗಳ ಮಾಡಿಸುತ್ತದೆ
ಗಂಡು ಹೆಣ್ಣು ಕೂಡಿಸಲು
ಓಡಿ ಹೋದ ದಿಕ್ಕು
ಮುಹೂರ್ತಗಳ ಗುರುತಿಸುತ್ತದೆ

ಕೆಲಸ ಮಾಡಲು ಕೆಲಸಕ್ಕೆ ಸೇರಲು
ಕೆಲಸ ಶುರು ಮಾಡಲು
ಎಲ್ಲ ಸಮಯಗಳಲ್ಲಿ
ಭೂತ ಆಳುತ್ತದೆ

ಹಲ್ಲಿಗಳ ಬೀಳಿಸುತ್ತದೆ
ಬೆಕ್ಕುಗಳ ಅಡ್ಡ ಬರಿಸುತ್ತದೆ
ಬಿಕ್ಕಳಿಕೆ ಆಕಳಿಕೆಗಳಲ್ಲೂ
ಧ್ವನಿ ಮಾಡುತ್ತದೆ

ಸೀನುಗಳ ಸಂಖ್ಯೆಗಳಿಗೆ ಅರ್ಥ ಕೊಡುತ್ತದೆ
ಕಣ್ಣು ಅದುರಿದರೂ ಬೆದರುತ್ತದೆ ಜೀವ
ಗುಡಿಗಳ ಕಟ್ಟಿಸುತ್ತದೆ ಮೂರ್ತಿಗಳ ಸ್ಥಾಪಿಸುತ್ತದೆ
ಮಂತ್ರ ತಂತ್ರ ಪುರಾಣಗಳ ಕಟ್ಟುತ್ತದೆ
ಷೋಡಶೋಪಚಾರಗಳ ನೇಮಿಸುತ್ತದೆ
ಮೌಢ್ಯದ ಬಂಡವಾಳ ವ್ಯಾಪಾರದ ಸರಕು

ಭಕ್ತರ ಸಾಲು ಸಾಲು
ಅಡ್ಡ ಬೀಳುತ್ತವೆ ತಲೆ ಬೋಳಿಸಿಕೊಳ್ಳುತ್ತವೆ
ದಿಂಡುರುಳಿ ದೇಹ ದಂಡಿಸುತ್ತವೆ
ಕಾಣದ ಕೈವಾಡಕ್ಕೆ ಶರಣಾಗುತ್ತವೆ

ಕಾವಿ ಗಡ್ಡ ನಾಮ ವರದ ಹಸ್ತಗಳ ಮುಂದೆ
ಸಾವಿರ ಸಾವಿರ ಸನ್ನಿಬಡಕ ತಲೆಗಳು
ಬಾಗಿ ನೆಲ ಮುಟ್ಟುತವೆ

ಅವರ ನೋಡಿ ಇವರು ಮತ್ತಿವರ ನೋಡಿ ಅವರು
ಎಲ್ಲರೂ ನೆಲಕಪ್ಪಚ್ಚಿ ಬಕ್ಕ ಬಾರಲು
ಬುದ್ದಿ ಜೀವಿಗಳು ಕೂಡಾ ಅರಲು ಬರಲು

ವರ್ತಮಾನದ ದೀಪ ಭವಿಷ್ಯದ ತಾಪ
ತಣ್ಣಗಾಗಿ ಭೂತದ ಪೆಡಂಭೂತ ತೆಕ್ಕೆಯೊಳಗೆ
ನಲುಗುತ್ತದೆ ಮುಲುಮುಲುಗಿ

*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...