Home / ಕವನ / ಕವಿತೆ / ಶ್ರಮದ ಹಿರಿಮೆ

ಶ್ರಮದ ಹಿರಿಮೆ

ಶ್ರಮ ಜೀವನಕೆ ಜಯವೆನ್ನಿ ಶ್ರಮಿಕರಿಗೆಲ್ಲಾ ಜಯವೆನ್ನಿ

ಶ್ರಮವೇ ಜೀವನಕಾಧಾರ ಶ್ರಮದಿಂದಲೇ ಜೀವನಸಾರ
ಶ್ರಮವೇ ಬದುಕಿನ ಬೇರು ಶ್ರಮವಿಲ್ಲದೆ ಬದುಕೇ ನಿಸ್ಸಾರ

ಮಣ್ಣಿನ ಕಣಕಣದೆಲ್ಲಿಡೆ ಮಿಡಿಯುತ ಹೂವೂ ಹಣ್ಣು ನಿತ್ಯಾ
ನಿಸರ್ಗವೆಲ್ಲಾ ಚೆಲುವಿನ ತವರು ಶ್ರಮವೇ ವಿಶ್ವದ ಸತ್ಯಾ

ರಾಜಾಧಿರಾಜರ ಕೋಟೆಕೊತ್ತಲ ಅರಮನೆ ಗುರುಮನೆಗೆಲ್ಲ
ಶ್ರಮಜೀವಿಗಳೇ ಕಾರಣಕರ್ತರು ಚರಿತ್ರೆ ಬುನಾದಿಗೆಲ್ಲ

ಹೊನ್ನರಾಶಿಗಳು ಮುತ್ತು ರತ್ನಗಳು ಬೀದಿಗಳಲ್ಲಿ ಮೆರೆದಿರಲು
ಬೆನ್ನನುಬಗ್ಗಿಸಿ ದುಡಿಯುವ ಅವನ್ನು ತಂದವರೇ ಶ್ರಮ ಜೀವಿಗಳು

ಚರಿತ್ರೆಯನ್ನೇ ಕಟ್ಟಿ ಬೆಳೆಸಿದ ಶ್ರಮಜೀವಿಗಳ ಹೆಸರೆಲ್ಲಿ
ಸಾವಿರ ವರ್ಷದ ಸಂಸ್ಕೃತಿಗಳನ್ನು ಸೃಷ್ಟಿಸಿದವರ ಗುರುತೆಲ್ಲಿ

ದೇಶಕ್ಕೆಲ್ಲ ಅನ್ನವ ಕೊಡುವುದು ದುಡಿಯುವ ರೈತನ ಶ್ರಮವು
ಉಣ್ಣುವ ಉಡುವ ಎಲ್ಲ ವಸ್ತುಗಳ ಮೂಲದಲ್ಲಿದೆ ಶ್ರಮವು

ರಸ್ತೆ ಬೀದಿಗಳ ಮಹಲು ಮನೆಗಳ ಕಟ್ಟುವುದೆಲ್ಲ ಶ್ರಮವೆ
ನಾಗರಿಕತೆಗಳ ವೈಭವಗಳನ್ನು ಬೆಳೆಸಿದೆಲ್ಲ ಶ್ರಮವೆ

ಅಣೆಕಟ್ಟುಗಳ ಕಾರಖಾನೆಗಳ ನಿರ್ಮಿಸಿರುವರು ದುಡಿವವರು
ಬೆವರು ರಕ್ತಗಳ ಹರಿಸಿ ದುಡಿವವರು ಹೆಸರಿಲ್ಲದೆಯೆ ಮಡಿವವರು

ಗುಡ್ಡ ಗಣಿಗಳಲಿ ಕಬ್ಬಿಣ ಅಗೆವರು ಕಬ್ಬಿಣದಂಥಾ ದುಡಿವವರು
ದುಡಿವರ ಬೆನ್ನಿನ ಮೇಲ್ಗಡೆ ಕುಳಿತು ಮೆರೆವವರು ಹಣವುಳ್ಳವರು
ಮಂತ್ರಿ ಶಾಸಕರ ಆರಿಸಿ ಗದ್ದುಗೆಗೇರಿಸಿ ಹೊರುವರು ದುಡಿವವರು
ಸ್ವಾಮಿ ಜಗದ್ಗುರುಗಳ ಪಲ್ಲಕಿಯಲಿ ಮೆರೆಸಿ ಸಾಯುವರು ದುಡಿವವರು

ಶ್ರಮ ಜೀವಿಗಳಿಗೆ ಮೋಸವ ಮಾಡುವ ದೇಶವು ಎಂದೂ ಬೆಳೆಯೊಲ್ಲ
ಶ್ರಮ ಗೌರವವನು ಮರೆತ ಜನಾಂಗಕೆ ಪ್ರಗತಿಯ ಭವಿಷ್ಯ ಉಳಿಯೊಲ್ಲ

ಶ್ರಮ ಜೀವಿಗಿಂತ ಶ್ರೇಷ್ಠನು ಯಾರು ಅವನಿಗೆ ಎಲ್ಲರು ಸಣ್ಣವರು
ಪವಿತ್ರ ತೀರ್ಥವು ಯಾವುದು ಇಲ್ಲ ಅದುವೇ ಶ್ರಮದಾ ಬೆವರು

ಶ್ರಮವೇ ದೇಹಾರೋಗ್ಯಕ್ಕೆ ಮೂಲ ಮನದಾರೋಗ್ಯವು ಕೂಡ
ಜಪತಪ ಪೂಜಾ ಯಜ್ಞಯೋಗಗಳು ಶ್ರಮಕ್ಕೆ ಸಣ್ಣವು ನೋಡ

ಚೆಲುವಿನ ರಹಸ್ಯ ಗೆಲುವಿನ ಗುಟ್ಟು ಶ್ರಮ ಸಾಧನೆಯಲೆ ಅಡಗಿಹುದು
ದೀರ್ಘಾಧಾಯುಷ್ಯ ಶಕ್ತಿ ಸಾಮರ್ಥ್ಯ ಶ್ರಮದಿಂದ ಸಿದ್ದಿಯಾಗುವುದು

ತಲತಲಾಂತರದ ಕರ್ಮಕೌಶಲತೆ ಕಲೆ ಜಾಣ್ಮೆ ಪ್ರತಿಭೆಯೆಲ್ಲ
ಹನಿ ಹನಿ ಕೂಡಿದ ಹೊಳೆಯು ಸಂಸ್ಕೃತಿಯು
ಎಲ್ಲ ಶ್ರಮದ ಕೊಡುಗೆಯಲಾ
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...