Home / ಕವನ / ಕವಿತೆ / ಮರಣಂ ಶರಣಂ

ಮರಣಂ ಶರಣಂ

ದಿನಪತ್ರಿಕೆಯ ಪುಟವ ತಿರುಗಿಸಲು
ಕಾಣುತಿಹವು ಸಾವು
ರೈತರ ಆತ್ಮಹತ್ಯೆ ಸಾವು
ಅಲ್ಲಿ ಸಾಯುವನು ಇಲ್ಲಿ ಸಾಯುವನು
ದಿನವು ಸಾಯುವರು ಮಣ್ಣಿನ ಮಕ್ಕಳು
ದಿನವು ಸಾಯುತಿದೆ ದೇಶದೊಕ್ಕಲು
ಬೆನ್ನೆಲುಬು ಬಾನು ಬಿಕ್ಕಲು
ಬೀಜ ಬಂಜೆಯಾಯಿತೋ ರೋಗ ಮುತ್ತಿತೋ
ಮಳೆಯು ಬಾರದೆ ಒಣಗಿ ಹೋಯಿತೋ
ಅಂತೂ ಇಂತೂ ನೆಲದ ಕಂದರಿಗೆ ಉಳಿವಿಲ್ಲವಾಯಿತೋ
ಸಣ್ಣ ಮಕ್ಕಳಿಗೆ ಕೂಳು ಇಲ್ಲವೋ
ಮನೆಯಲೆಲ್ಲರಿಗೆ ಕಾಳು ಇಲ್ಲವೋ
ಹರಕು ಬಟ್ಟೆಗಳೊ ಮುರುಕು ಜೋಪಡಿಯೋ
ಹೇಗೋ ಏನೊ ರೂಢಿಯಾಯಿತೊ
ಸಾಲ ಶೂಲವದು ಬಂದು ಇರಿವಾಗ
ಹೇಗಿದ್ದರೇನು ಸತ್ತರೇನು
ಸರಿ ಮರಣಂ ಶರಣಂ ಗಚ್ಛಾಮಿ

ಕೇಳದಾಗಿದೆ ಕಿವುಡು ಸರಕಾರ
ಕಾಣದಾಗಿದೆ ಕುರುಡು ದರಬಾರ
ಕೋಟಿಗಟ್ಟಲೆ ಬರ ಪರಿಹಾರ
ಹರಿದು ಬರುತಿದೆ ಯಾರ ಬಾಯಿಗೊ ಯಾರ ಜೇಬಿಗೊ
ಎಲ್ಲಿ ಹೋಗುವುದೊ ಯಾರು ಬಲ್ಲರು?
ಬೆವರ ಹನಿ ಹನಿ ಆವಿಯಾಯಿತು
ಸಾಯುವ ಜೀವಕೆ ಬಾಯಿಯೆ ಇಲ್ಲ
ಅಳುವ ಬಾಯಿಗೆ ದನಿಯೆ ಇಲ್ಲ
ರಾಜಧಾನಿಯಲ್ಲಿ ಹವಾನಿಯಂತ್ರದಿ
ನಿದ್ದೆ ಹೋಗಿಹರು ಮಂತ್ರಿ ದಾನವರು
ದಿನವೂ ಸಾರುತಿದೆ ಪತ್ರಿಕೆ
ರೈತನ ಸಾವು, ಸಾಯುವರು ಸಾಯುವರು

ನೆಲದ ನಿಟ್ಟುಸಿರು ಭೋರೆಂಬ ಗಾಳಿ
ಬರಿದೆ ಬೀಸೇ ಬೀಸುತಿರುವುದು
ಮೋಡದೊಡಲು ಗಡಬಡಿಸುತಿದೆ
ಒಂದೆರಡು ಹನಿ ಉದುರಿಸುತಿದೆ
ಅಶ್ರುತರ್ಪಣ ನಿಷ್ಕಾರಣ |
ಸುದ್ದಿ ಸಾರುವುದು ಪತ್ರಿಕೆ
ಮರುದಿನ ರದ್ದಿ ಅದೇ ಹಳೆ ಸುದ್ದಿ
ದಿನವೂ ಸಾಯುವವರಿಗೆ ಅಳುವವರು ಯಾರು
ಯಾರು ಕೆಡಿಸಿಕೊಳ್ಳುತ್ತಾರೆ ನಿದ್ದಿ
ಮರಣಂ ಶರಣಂ ಗಚ್ಛಾಮಿ

*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...