Home / ಕವನ / ಕವಿತೆ / ಮರಣಂ ಶರಣಂ

ಮರಣಂ ಶರಣಂ

ದಿನಪತ್ರಿಕೆಯ ಪುಟವ ತಿರುಗಿಸಲು
ಕಾಣುತಿಹವು ಸಾವು
ರೈತರ ಆತ್ಮಹತ್ಯೆ ಸಾವು
ಅಲ್ಲಿ ಸಾಯುವನು ಇಲ್ಲಿ ಸಾಯುವನು
ದಿನವು ಸಾಯುವರು ಮಣ್ಣಿನ ಮಕ್ಕಳು
ದಿನವು ಸಾಯುತಿದೆ ದೇಶದೊಕ್ಕಲು
ಬೆನ್ನೆಲುಬು ಬಾನು ಬಿಕ್ಕಲು
ಬೀಜ ಬಂಜೆಯಾಯಿತೋ ರೋಗ ಮುತ್ತಿತೋ
ಮಳೆಯು ಬಾರದೆ ಒಣಗಿ ಹೋಯಿತೋ
ಅಂತೂ ಇಂತೂ ನೆಲದ ಕಂದರಿಗೆ ಉಳಿವಿಲ್ಲವಾಯಿತೋ
ಸಣ್ಣ ಮಕ್ಕಳಿಗೆ ಕೂಳು ಇಲ್ಲವೋ
ಮನೆಯಲೆಲ್ಲರಿಗೆ ಕಾಳು ಇಲ್ಲವೋ
ಹರಕು ಬಟ್ಟೆಗಳೊ ಮುರುಕು ಜೋಪಡಿಯೋ
ಹೇಗೋ ಏನೊ ರೂಢಿಯಾಯಿತೊ
ಸಾಲ ಶೂಲವದು ಬಂದು ಇರಿವಾಗ
ಹೇಗಿದ್ದರೇನು ಸತ್ತರೇನು
ಸರಿ ಮರಣಂ ಶರಣಂ ಗಚ್ಛಾಮಿ

ಕೇಳದಾಗಿದೆ ಕಿವುಡು ಸರಕಾರ
ಕಾಣದಾಗಿದೆ ಕುರುಡು ದರಬಾರ
ಕೋಟಿಗಟ್ಟಲೆ ಬರ ಪರಿಹಾರ
ಹರಿದು ಬರುತಿದೆ ಯಾರ ಬಾಯಿಗೊ ಯಾರ ಜೇಬಿಗೊ
ಎಲ್ಲಿ ಹೋಗುವುದೊ ಯಾರು ಬಲ್ಲರು?
ಬೆವರ ಹನಿ ಹನಿ ಆವಿಯಾಯಿತು
ಸಾಯುವ ಜೀವಕೆ ಬಾಯಿಯೆ ಇಲ್ಲ
ಅಳುವ ಬಾಯಿಗೆ ದನಿಯೆ ಇಲ್ಲ
ರಾಜಧಾನಿಯಲ್ಲಿ ಹವಾನಿಯಂತ್ರದಿ
ನಿದ್ದೆ ಹೋಗಿಹರು ಮಂತ್ರಿ ದಾನವರು
ದಿನವೂ ಸಾರುತಿದೆ ಪತ್ರಿಕೆ
ರೈತನ ಸಾವು, ಸಾಯುವರು ಸಾಯುವರು

ನೆಲದ ನಿಟ್ಟುಸಿರು ಭೋರೆಂಬ ಗಾಳಿ
ಬರಿದೆ ಬೀಸೇ ಬೀಸುತಿರುವುದು
ಮೋಡದೊಡಲು ಗಡಬಡಿಸುತಿದೆ
ಒಂದೆರಡು ಹನಿ ಉದುರಿಸುತಿದೆ
ಅಶ್ರುತರ್ಪಣ ನಿಷ್ಕಾರಣ |
ಸುದ್ದಿ ಸಾರುವುದು ಪತ್ರಿಕೆ
ಮರುದಿನ ರದ್ದಿ ಅದೇ ಹಳೆ ಸುದ್ದಿ
ದಿನವೂ ಸಾಯುವವರಿಗೆ ಅಳುವವರು ಯಾರು
ಯಾರು ಕೆಡಿಸಿಕೊಳ್ಳುತ್ತಾರೆ ನಿದ್ದಿ
ಮರಣಂ ಶರಣಂ ಗಚ್ಛಾಮಿ

*****

Tagged:

Leave a Reply

Your email address will not be published. Required fields are marked *

ತೆಂಕಣದಿ ಹದಿನಾರು ಮೈಲಿಗಳಾಚಿ ಬಾಂದಳಕೆ ಭುಜಗೊಟ್ಟು ನಿಂತಿರುವ ಸಿಂಹಗಡವೇ-ಇದೋ ನಿನಗೆ ತಲೆಬಾಗುವೆನು. ಶತಮಾನಗಳ ಹಿಂದೆ, ನರಜಾತಿಯಲಿ ಹರಿಯಂತೆ ಮೆರೆದ ವೀರಲೀಲಾಲೋಲ ಶಿವಪ್ರಭುವನು ಶಿರದಲಿ ಹೊತ್ತು ಮೆರೆಯಿಸಿದ ಸಿಂಹಗಡವೇ ಇದೋ-ನಿನಗೆ ವಂದಿಸುವೆನು. ಅಂದು ನಮ್ಮ ನಾಡಿನ ಧರ್‍ಮ-ನಮ್ಮ ಹ...

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...