Home / ಲೇಖನ / ವಿಜ್ಞಾನ / ಭವಿಷ್ಯದಲ್ಲಿ ಪ್ರಪಂಚ ಹೀಗಾಗಬಹುದು

ಭವಿಷ್ಯದಲ್ಲಿ ಪ್ರಪಂಚ ಹೀಗಾಗಬಹುದು

“ಕಲ್ಲುಕೋಳಿ ಕೂಗ್ಯಾವೋ, ಬೆಂಕಿ ಮಳೆ ಸುರಿದೀತೋ ….. ..?” ಹೀಗೆ ಕಾಲಜ್ಞಾನ
ಭವಿಷ್ಯ ನುಡಿದಿತ್ತು. ಈಗ್ಗೆ 50 ವರ್ಷಗಳ ಹಿಂದೆ ಕಾಲಜ್ಞಾನವೆಲ್ಲ ಬೊಗಳೆ ಎಂಬಂತಹ
ಮಾತುಗಳನ್ನು ಆಡಿದ್ದೆವು. ಆದರೆ ಕಾಲಜ್ಞಾನದ ಅಂತರಂಗದ ಅರ್ಥವನ್ನು ಬಿಡಿಸಿದಾಗ
ಘನವಸ್ತುಗಳು ವಿಜ್ಞಾನದ ಆವಿಷ್ಕಾರದಿಂದ ಜೀವಪಡೆಯುತ್ತವೆ, ಅತ್ಯಂತ ತೀಕ್ಷ್ಣವಾದ ಆಮ್ಲ
ಸುರಿಯುತ್ತದೆ ಎಂದು ಅರ್ಥಮಾಡಿಕೊಂಡಾಗ ಇದೆಲ್ಲ ಒಂದು ಬಗೆಯಲ್ಲಿ ನಿಜವಾಗಿವೆ ಮತ್ತು
ಆಗಲಿವೆ, ಆಗಬಹುದು, ಎಂಬ ಅಭಿಪ್ರಾಯಕ್ಕೆ ಎಲ್ಲರೂ ಬರುವಂತಾಗಿದೆ. ಮುಂದಿನ ಹತ್ತಾರು
ವರ್ಷಗಳಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನವು ತನ್ನ ಶೋಧನೆಗಳನ್ನು ಒರೆಹಚ್ಚಿ ಅಸಾಧ್ಯವಾದುದನ್ನು ಸಾಧ್ಯಗೊಳಿಸುತ್ತಲಿದೆ.

ಆಹಾರ, ಔಷಧಿ, ಕಾರು, ವಿಮಾನ ಇನ್ನೂ ಮುಂತಾದ ವಸ್ತುಗಳು ವಿಸ್ಮಯವಾದ
ರೂಪತಾಳಿ ಅಚ್ಚರಿಯ ಫಲಿತಾಂಶವನ್ನು ನೀಡುತ್ತವೆ. ಈಗಿನ ಆಹಾರ ಪದಾರ್ಥಗಳನ್ನೇ
ತೆಗೆದುಕೊಂಡರೆ ಇಂದಿನ ಅಕ್ಕಿ, ಗೋಧಿ, ರಾಗಿ, ಜೋಳ ಎಲ್ಲದರಲ್ಲಿಯೂ ಅನೇಕ ಗೊಬ್ಬರಗಳ
ಸಮೀಕರಣದ ಕಾರಣ ವಿಟ್ಯಾಮಿನ್ ರಹಿತವಾಗಿ ದೊರೆಯುತ್ತಿದ್ದು ಅಂತರಂಗದಲ್ಲಿ
ನಿಧಾನವಾಗಿ ವಿಷಯುಕ್ತವಾಗಿವೆ. ಈ ಕಾರಣವಾಗಿ ಮನುಷ್ಯನಿಗೆ ಹೃದ್ರೋಗ, ಕ್ಯಾನ್ಸರ್,
ಹೊಟ್ಟೆನೋವು, ಅಶಕ್ತತೆಗಳು ಉಂಟಾಗಿ ಬೇಗನೇ ವೃದ್ಧಾಪ್ಯ ಬರುತ್ತದೆ.ಅಥವಾ ಕಾಯಿಲೆಗಳ
ಪರಿಣಾಮವಾಗಿ ಆಯುಷ್ಯದ ಮುಂಚೆಯೇ ಆಂತ್ಯಗೊಳ್ಳುವ ಸೂಚನೆಗಳೂ ಕಂಡಿವೆ. ಇಂತಹ
ನಿಶಕ್ತವಾದ, ಅನಾರೋಗ್ಯಕ್ಕೆ ಕಾರಣವಾಗುವ ಆಹಾರ ಪದಾರ್ಥಗಳು ಭವಿಷ್ಯದಲ್ಲಿ
ಆರೋಗ್ಯವನ್ನು ವರ್ಧಿಸುವ ಔಷಧಿಯುಕ್ತ ಆಹಾರ ಪದಾರ್ಥಗಳು ಮಾರುಕಟ್ಟೆಯಲ್ಲಿ
ಹೇರಳವಾಗಿ ದೊರೆಯುವ ದಿನಗಳು ದೂರವಿಲ್ಲ. ಆಹಾರದ ಒಂದೊಂದು ತುತ್ತು ಕೂಡ
ಶಕ್ತಿವರ್ಧಕವಾಗಿರುತ್ತದೆ. ಸಾಮಾನ್ಯವಾಗಿ ವಯಸ್ಸಾದವರು ಹೃದ್ರೋಗ, ರಕ್ತದೊತ್ತಡ ಕಡಿಮೆ
ಸಾಂದ್ರತೆಯ ಲೈವೋಪ್ರೋಟಿನ್ಸ್ (L.D.L..) ಮುಂತಾದ ಸಮಸ್ಯೆಗಳಿಂದ ಮರಣ
ಹೊಂದುತ್ತಿರುವುದನ್ನು ಕಾಣುತ್ತಿದ್ದೇವೆ. ಈ ಪರಿಸ್ಥಿತಿಯನ್ನು ಎದುರಿಸಲು, ಕೊಲೆಸ್ಟರಾಲ್ ‌ಅನ್ನು
ನಿಯಂತ್ರಿಸಲು ಸಾಮಾನ್ಯವಾಗಿ ನಾವು ಉಪಯೋಗಿಸುವ ಆಹಾರದಲ್ಲಿ ಬದಲಾವಣೆಯನ್ನು
ಮಾಡಿಕೊಳ್ಳಲಾಗುತ್ತದೆ. ಆದರೆ ಮುಂದೆ ಈ ಹೊಂದಾಣಿಕೆಯ ಗೂಡವೆಗೆ ಹೋಗಬೇಕಿಲ್ಲ
ಏಕೆಂದರೆ ಐಸೋಪ್ಲೇವೋನ್ಸ್ (Isoflavones) ಎಂಬ ಕೆಲವು ಪ್ರತ್ಯೇಕ ರಾಸಾಯನಿಕ
ಪದಾರ್ಥಗಳನ್ನು ಸೇವಿಸಿದರೆ ಸಾಕು. ಇದರಿಂದ ಹೃದ್ರೋಗ, ಬಿ.ಪಿ. ಮುಂತಾದ ರೋಗಗಳು
ಜಾಗ್ರತೆಯಾಗಿ ನಿಯಂತ್ರಣಗೊಳ್ಳುತ್ತವೆ ಎಂದು ಉತ್ತರ ಕೆನಡಾದ ವೆಟ್‌ಫಾರ್‌ಹ್ಟ ವಿಶ್ವ
ವಿದ್ಯಾಲಯದ ಬ್ಯಾಪ್ಟಿಸ್ಟ್ ಮೆಡಿಕಲ್ಸ್‌ ಕೇಂದ್ರಕ್ಕೆ ಸೇರಿದ ವಿಜ್ಞಾನಿಗಳು ಅಭಿಪ್ರಾಯಪಟ್ಟಿದ್ದಾರೆ.

ಸೋಯಪ್ರೋಟಿನನ್ನು ಹೆಚ್ಚಿನ ಪ್ರಮಾಣ ಐಸೋಪ್ಲೇವೋನ್ಸ್ ಜತೆಗೆ ಸೇರಿಸಿಕೊಡು
ವುದರಿಂದ ಬೊಜ್ಜಿನ ಪ್ರಮಾಣವನ್ನು ಕುಗ್ಗಿಸಬಹುದೆಂದು ಅಧ್ಯಯನವೊಂದರಲ್ಲಿ ಜಾನ್ ಆರ್
ಕ್ರೂಯಿಸ್ III ಎಂಬ ವಿಜ್ಞಾನಿ ಹೇಳುತ್ತಾರೆ. ಅಲ್ಲದೆ ಐಸೋಪ್ಲೇರ್ವೊನ್ಸ್ ಪ್ರಮಾಣವನ್ನು
ಹೆಚ್ಚಿಸಿದಾಗ ಅದು ಮಹಿಳೆಯರಲ್ಲಿ ರಕ್ತದ ಒತ್ತಡವನ್ನು ಕಡಿಮೆ ಮಾಡುವುದನ್ನು ಅವರು
ಕಂಡುಕೊಂಡಿದ್ದಾರೆ. ವೈದ್ಯಕೀಯ ಸಂಶೋಧನಾ ಸಂಸ್ಥೆಗಳು ನಡೆಸುವ ಸಂಶೋಧನೆಗಳ
ಫಲಿತಾಂಶಗಳನ್ನು ಅನುಸರಿಸಿ ಸಿದ್ಧ ಆಹಾರವನ್ನು ತಯಾರಿಸಿ ಸಂಸ್ಥೆ ಹೆಚ್ಚಿನ ಪೋಶಕಾಂಶಗಳುಳ್ಳ
ಆಹಾರವನ್ನು ತಯಾರಿಸುತ್ತವೆ. ಆಹಾರದ ಬೇಡಿಕೆಗೆ ತಕ್ಕಂತೆ ಸಿದ್ಧ ಆಹಾರ ತಯಾರಿಸಿ ಕೊಡುವ
ಕಂಪನಿಗಳು ತಮ್ಮಉತ್ಪನ್ನವನ್ನು ಹೆಚ್ಚಿಸಿಕೊಳ್ಳುತ್ತವೆ. ಪ್ರಾಯಶ: 2050ರ ಹೊತ್ತಿಗೆ ಆರೋಗ್ಯಕ್ಕೆ
ಹಾನಿಯುಂಟು ಮಾಡುವ ಪದಾರ್ಥಗಳು ದೊರೆಯಲಾರವೆನಿಸುತ್ತದೆ.
೦೦೦

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...