Home / ಲೇಖನ / ವಿಜ್ಞಾನ / ನಿಬ್ಬೆರಗಿನ ನಿವಾಸಿಗಳು !!

ನಿಬ್ಬೆರಗಿನ ನಿವಾಸಿಗಳು !!

ಇಂದಿನ ನಮ್ಮ ಮನೆಗಳಿಗೆ ಡೋರ್ ಲಾಕ್‌ಗಳನ್ನೂ ಹಾಕಿ ಮುಟ್ಟಿ ನೋಡಿ ಹೊರ
ಹೋಗುತ್ತೇವೆ. ಮುಂದೊಂದು ದಿನ ಈ ಕೀಲಿ ಜಡಿಯುವ ಸಮಸ್ಯೆಗಳೇ ಇರುವುದಿಲ್ಲವೆಂದು
ವಿಜ್ಞಾನಿಗಳು ಹೇಳುತ್ತಾರೆ. ಮನೆಯ ಯಜಮಾನ ಮನೆಯ ಬಾಗಿಲ ಬಳಿ ಬಂದಾಗ
ಸೆನ್ಸಾರ್‌ಗಳಿಂದ ಮುಖವನ್ನು ಅಥವಾ ಕಣ್ಣಿನ ಐರಸ್ ಅನ್ನು ಪರೀಕ್ಷೆ ಮಾಡಿ ಗುರ್ತನ್ನು
ಖಚಿತಗೊಳಿಸಿಕೊಂಡು ಸ್ವಯಂ ಚಾಲಿತವಾಗಿ ಬಾಗಿಲುಗಳು ತಮ್ಮಿಂದ ತಾವೇ
ತೆರೆದುಕೊಳ್ಳುತ್ತವೆ. ಈ ತಂತ್ರಜ್ಞಾನ ಮುಂದೊಂದು ದಿನ ಬರಲಿದೆ, ಎಂದು ವಿಜ್ಞಾನಿಗಳ
ವ್ಯಾಖ್ಯಾನವಾಗಿದೆ. ಇದರಂತೆ ಆಹಾರ ಪದಾರ್ಥಗಳ ಅವಶ್ಯಕತೆಯನ್ನು”ರೆಫ್ರಿಜಿರೇಟರ್’ಗಳು
ಗುರುತಿಸುತ್ತವೆ. ಭವಿಷ್ಯದಲ್ಲಿ ತಂಗಳು ಪೆಟ್ಟಿಗೆಯಲ್ಲಿ ತರಕಾರಿ ಮುಗಿದು ಹೋದಾಗ ಆದು
ತನ್ನಿಂದ ತಾನೆ ಸ್ವಯಂಚಾಲಿತಗೊಂಡು ತರಕಾರಿ ಮಾರ್ಕೆಟ್ಟಿಗೆ ಸಂದೇಶವನ್ನು ರವಾನಿಸುತ್ತವೆ.
ಮೈಕ್ರೋ ಓವನ್ ಆಹಾರ ಪದಾರ್ಥಗಳ ತಯಾರಿಕೆಯನ್ನು ಪರಿಶೀಲಿಸುತ್ತದೆ.
ವಾಷಿಂಗ್‌ಮಿಷನ್ ಕೂಡ ತನಗೆ ಬೇಕಾದ ಡಿಟರ್ಜಂಟ್ ಫಾಬ್ರಿಕ್ ಸಾಫ್ಟ್‌ನರ್‌ಗಳನ್ನೂ
ಅಂಗಡಿಯಿಂದ ತರಿಸಿಕೊಳ್ಳುವ ಏರ್ಪಾಡು ಮಾಡುತ್ತದೆ.

ಮನೆಯ ಕಿಟಕಿಗಳಲ್ಲಿಯೂ ಕೂಡ ಕ್ರಾಂತಿಕಾರಕ ಬದಲಾವಣೆಯಾಗುತ್ತದೆ.
‘ಸಾಸ್ಮಾರ್ಟ್‌ಗ್ಲಾಸ್’ ಎಂಬ ತಿರುಗುವ ರೆಕ್ಕೆಗಳು ಆಕ್ಟಿವ್ ಎಲಿಮೆಂಟ್ಸ್ ಆಗಿ
ಕಾರ್ಯನಿರ್ವಹಿಸುತ್ತವೆ. ಅಂದರೆ ಸೂರ್ಯ ಕಿರಣಗಳ ಉಷ್ಟತೆ ಮತ್ತು ಬೆಳಕಿನ ತೀವ್ರತೆಗೆ
ತಕ್ಕಂತೆ ಸ್ವಯಂ ಚಾಲನೆಗೊಂಡು ನಮಗೆ ಅಗತ್ಯವಿದ್ದಷ್ಟು ಸೂರ್ಯರಶ್ಮಿಗಳನ್ನು ಒಳಗೆ
ಬರುವಂತೆ ಏರ್ಪಾಡು ಇರುತ್ತದೆ. ಹಾಗೆಯೇ ರಾತ್ರಿ ಸಮಯದಲ್ಲಿ ನಮ್ಮ ಏಕಾಂತಕ್ಕೆ
ಭಂಗವಾಗದಂತೆ ಕಿಟಕಿಗಳೆ ಹೊಂದಾಣಿಕೆಯಾಗುತ್ತವೆ. ಹೊರಗಿನಿಂದ ನೋಡಿದರೆ ಕಿಟಕಿಗಳು
ಗಾತ್ರದಲ್ಲಿ ಚಿಕ್ಕವು ಎನಿಸಿದರೂ ಮನೆಯೊಳಗಿಂದ ನೋಡಿದರೆ ಅವು ಎರಡು ಪಟ್ಟು ದೊಡ್ದ
ಟಿ.ವಿ.ಯ ಚಪ್ಪಟೆ ಸ್ಕ್ರೀನಿನಂತೆ ಕಾಣಿಸುತ್ತವೆ. ಮುಂದೊಂದು ದಿನ ಮನೆಯೊಳಗೆ ನಿಮ್ಮ ಸ್ವಂತ
ಸ್ಯಾಟ್ ಲೈಟ್ ಲಿಂಕ್, ನಿಮ್ಮ ಮನರಂಜನೆ, ವಿಜ್ಞಾನ ಹಾಗೂ ಸುದ್ದಿ ಸಮಾಚಾರವನ್ನು
ಸಾದರಪಡಿಸುತ್ತದೆ. ಈಗ ಆಗಿರುವ ಫೈಬರ್ ಆಪ್ಟಿಕಲ್ ಕೇಬಲ್ ಸಂಪರ್ಕಗಳಿಗೆ ಮುಂದೆ
ಮೌಲ್ಯವಿರಲಾರದು. 2020 ಸುಮಾರಿಗೆ ಟಿ.ವಿ. ಯೂ ಸಹ ಹಳೆಯ ಸರಕಾಗಬಹುದು.
ಸೋಫಾದಲ್ಲಿ ಆರಾಮಾಗಿ ಮಲಗಿಕೊಂಡು ನಿಮ್ಮ ನೆಚ್ಚಿನ ತಾರೆಗಳ ಕಾರ್ಯಕ್ರಮಗಳನ್ನು 3D
ಹಲೋಗ್ರಾಂಮ್ ತಾಂತ್ರಿಕತೆಯ ಮೂಲಕ ವೀಕ್ಷಿಸಬಹುದು.

೦೦೦

Tagged:

Leave a Reply

Your email address will not be published. Required fields are marked *

ತೆಂಕಣದಿ ಹದಿನಾರು ಮೈಲಿಗಳಾಚಿ ಬಾಂದಳಕೆ ಭುಜಗೊಟ್ಟು ನಿಂತಿರುವ ಸಿಂಹಗಡವೇ-ಇದೋ ನಿನಗೆ ತಲೆಬಾಗುವೆನು. ಶತಮಾನಗಳ ಹಿಂದೆ, ನರಜಾತಿಯಲಿ ಹರಿಯಂತೆ ಮೆರೆದ ವೀರಲೀಲಾಲೋಲ ಶಿವಪ್ರಭುವನು ಶಿರದಲಿ ಹೊತ್ತು ಮೆರೆಯಿಸಿದ ಸಿಂಹಗಡವೇ ಇದೋ-ನಿನಗೆ ವಂದಿಸುವೆನು. ಅಂದು ನಮ್ಮ ನಾಡಿನ ಧರ್‍ಮ-ನಮ್ಮ ಹ...

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...