Home / ಲೇಖನ / ವಿಜ್ಞಾನ / ನಿಬ್ಬೆರಗಿನ ನಿವಾಸಿಗಳು !!

ನಿಬ್ಬೆರಗಿನ ನಿವಾಸಿಗಳು !!

ಇಂದಿನ ನಮ್ಮ ಮನೆಗಳಿಗೆ ಡೋರ್ ಲಾಕ್‌ಗಳನ್ನೂ ಹಾಕಿ ಮುಟ್ಟಿ ನೋಡಿ ಹೊರ
ಹೋಗುತ್ತೇವೆ. ಮುಂದೊಂದು ದಿನ ಈ ಕೀಲಿ ಜಡಿಯುವ ಸಮಸ್ಯೆಗಳೇ ಇರುವುದಿಲ್ಲವೆಂದು
ವಿಜ್ಞಾನಿಗಳು ಹೇಳುತ್ತಾರೆ. ಮನೆಯ ಯಜಮಾನ ಮನೆಯ ಬಾಗಿಲ ಬಳಿ ಬಂದಾಗ
ಸೆನ್ಸಾರ್‌ಗಳಿಂದ ಮುಖವನ್ನು ಅಥವಾ ಕಣ್ಣಿನ ಐರಸ್ ಅನ್ನು ಪರೀಕ್ಷೆ ಮಾಡಿ ಗುರ್ತನ್ನು
ಖಚಿತಗೊಳಿಸಿಕೊಂಡು ಸ್ವಯಂ ಚಾಲಿತವಾಗಿ ಬಾಗಿಲುಗಳು ತಮ್ಮಿಂದ ತಾವೇ
ತೆರೆದುಕೊಳ್ಳುತ್ತವೆ. ಈ ತಂತ್ರಜ್ಞಾನ ಮುಂದೊಂದು ದಿನ ಬರಲಿದೆ, ಎಂದು ವಿಜ್ಞಾನಿಗಳ
ವ್ಯಾಖ್ಯಾನವಾಗಿದೆ. ಇದರಂತೆ ಆಹಾರ ಪದಾರ್ಥಗಳ ಅವಶ್ಯಕತೆಯನ್ನು”ರೆಫ್ರಿಜಿರೇಟರ್’ಗಳು
ಗುರುತಿಸುತ್ತವೆ. ಭವಿಷ್ಯದಲ್ಲಿ ತಂಗಳು ಪೆಟ್ಟಿಗೆಯಲ್ಲಿ ತರಕಾರಿ ಮುಗಿದು ಹೋದಾಗ ಆದು
ತನ್ನಿಂದ ತಾನೆ ಸ್ವಯಂಚಾಲಿತಗೊಂಡು ತರಕಾರಿ ಮಾರ್ಕೆಟ್ಟಿಗೆ ಸಂದೇಶವನ್ನು ರವಾನಿಸುತ್ತವೆ.
ಮೈಕ್ರೋ ಓವನ್ ಆಹಾರ ಪದಾರ್ಥಗಳ ತಯಾರಿಕೆಯನ್ನು ಪರಿಶೀಲಿಸುತ್ತದೆ.
ವಾಷಿಂಗ್‌ಮಿಷನ್ ಕೂಡ ತನಗೆ ಬೇಕಾದ ಡಿಟರ್ಜಂಟ್ ಫಾಬ್ರಿಕ್ ಸಾಫ್ಟ್‌ನರ್‌ಗಳನ್ನೂ
ಅಂಗಡಿಯಿಂದ ತರಿಸಿಕೊಳ್ಳುವ ಏರ್ಪಾಡು ಮಾಡುತ್ತದೆ.

ಮನೆಯ ಕಿಟಕಿಗಳಲ್ಲಿಯೂ ಕೂಡ ಕ್ರಾಂತಿಕಾರಕ ಬದಲಾವಣೆಯಾಗುತ್ತದೆ.
‘ಸಾಸ್ಮಾರ್ಟ್‌ಗ್ಲಾಸ್’ ಎಂಬ ತಿರುಗುವ ರೆಕ್ಕೆಗಳು ಆಕ್ಟಿವ್ ಎಲಿಮೆಂಟ್ಸ್ ಆಗಿ
ಕಾರ್ಯನಿರ್ವಹಿಸುತ್ತವೆ. ಅಂದರೆ ಸೂರ್ಯ ಕಿರಣಗಳ ಉಷ್ಟತೆ ಮತ್ತು ಬೆಳಕಿನ ತೀವ್ರತೆಗೆ
ತಕ್ಕಂತೆ ಸ್ವಯಂ ಚಾಲನೆಗೊಂಡು ನಮಗೆ ಅಗತ್ಯವಿದ್ದಷ್ಟು ಸೂರ್ಯರಶ್ಮಿಗಳನ್ನು ಒಳಗೆ
ಬರುವಂತೆ ಏರ್ಪಾಡು ಇರುತ್ತದೆ. ಹಾಗೆಯೇ ರಾತ್ರಿ ಸಮಯದಲ್ಲಿ ನಮ್ಮ ಏಕಾಂತಕ್ಕೆ
ಭಂಗವಾಗದಂತೆ ಕಿಟಕಿಗಳೆ ಹೊಂದಾಣಿಕೆಯಾಗುತ್ತವೆ. ಹೊರಗಿನಿಂದ ನೋಡಿದರೆ ಕಿಟಕಿಗಳು
ಗಾತ್ರದಲ್ಲಿ ಚಿಕ್ಕವು ಎನಿಸಿದರೂ ಮನೆಯೊಳಗಿಂದ ನೋಡಿದರೆ ಅವು ಎರಡು ಪಟ್ಟು ದೊಡ್ದ
ಟಿ.ವಿ.ಯ ಚಪ್ಪಟೆ ಸ್ಕ್ರೀನಿನಂತೆ ಕಾಣಿಸುತ್ತವೆ. ಮುಂದೊಂದು ದಿನ ಮನೆಯೊಳಗೆ ನಿಮ್ಮ ಸ್ವಂತ
ಸ್ಯಾಟ್ ಲೈಟ್ ಲಿಂಕ್, ನಿಮ್ಮ ಮನರಂಜನೆ, ವಿಜ್ಞಾನ ಹಾಗೂ ಸುದ್ದಿ ಸಮಾಚಾರವನ್ನು
ಸಾದರಪಡಿಸುತ್ತದೆ. ಈಗ ಆಗಿರುವ ಫೈಬರ್ ಆಪ್ಟಿಕಲ್ ಕೇಬಲ್ ಸಂಪರ್ಕಗಳಿಗೆ ಮುಂದೆ
ಮೌಲ್ಯವಿರಲಾರದು. 2020 ಸುಮಾರಿಗೆ ಟಿ.ವಿ. ಯೂ ಸಹ ಹಳೆಯ ಸರಕಾಗಬಹುದು.
ಸೋಫಾದಲ್ಲಿ ಆರಾಮಾಗಿ ಮಲಗಿಕೊಂಡು ನಿಮ್ಮ ನೆಚ್ಚಿನ ತಾರೆಗಳ ಕಾರ್ಯಕ್ರಮಗಳನ್ನು 3D
ಹಲೋಗ್ರಾಂಮ್ ತಾಂತ್ರಿಕತೆಯ ಮೂಲಕ ವೀಕ್ಷಿಸಬಹುದು.

೦೦೦

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...