Home / ಕವನ / ಕವಿತೆ / ಎಲ್ಲರಂಥವನಲ್ಲ ನನ ಗಂಡ

ಎಲ್ಲರಂಥವನಲ್ಲ ನನ ಗಂಡ

ಎಲ್ಲರಂಥವನಲ್ಲ ನನ ಗಂಡ
ಬಲ್ಲಿದನು ಪುಂಡ
ಎಲ್ಲರಂಥವನಲ್ಲ ನನ ಗಂಡ         || ಪ ||

ಸೊಲ್ಲು ಸೊಲ್ಲಿಗೆ ಬಯ್ದು ನನ್ನ
ಎಲ್ಲಿಗೋಗದ್ಹಾಂಗ ಮಾಡಿಟ್ಟಾ
ಕಾಲ್ಮುರಿದು ಬಿಟ್ಟಾ           || ಅ.ಪ ||

ಮಾತಾಪಿತರು ಮನೆಯೊಳಿರುತಿರಲು
ಮನಸೋತು ಮೂವರು
ಪ್ರೀತಿಗೆಳೆತನ ಮಾತಿನೊಳಿರುತಿರಲು
ಮೈನೆರೆತು ಮಾಯದಿ
ಘಾತವಾಯಿತು ಯವ್ವನವು ಬರಲು
ಹಿಂಗಾಗುತಿರಲು
ದೂತೆ ಕೇಳ್ನಿಮ್ಮವರು ಶೋಭನ
ರೀತಿಚಾರವನೆಲ್ಲ ತೀರಿಸಿ
ಆತನೊಳು ಮೈಹೊಂದಿಕೆಯ ಮಾಡಿ
ಮಮತೆಯಲ್ಲಿ ಕೂಡಿ               || ೧ ||

ಅಕ್ಕತಂಗಿಯರಾರು ಮಂದಿಗಳಾ
ಅಗಲಿಸಿದನೈವರ
ಕಕ್ಕುಲಾತಿಯ ಅಣ್ಣತಮ್ಮಗಳಾ
ನೆದರೆತ್ತಿ ಮ್ಯಾಲಕ
ನೋಡಗೊಡದೇ ಹತ್ತು ದಿಕ್ಕುಗಳಾ
ಮಾಡಿದನೆ ಮರುಳಾ
ತೆಕ್ಕೆಯೊಳು ಬಿಗಿದಪ್ಪಿ ಸುರತಾ-
ನಂದಸುಖ ತಾಂಬೂಲ ರಸಗುಟ-
ಗಿಕ್ಕಿ ಅಕ್ಕರತಿಯಲಿ ನಗುವನು ತಾ
ಬಹು ಸುಗುಣನೀತಾ            || ೨ ||

ತುಂಟ ಸವತಿಯ ಸೊಂಟಮುರಿ ಹೊಡೆದಾ
ಒಣ ಪಂಟಮಾತಿನ
ಗಂಟಗಳ್ಳರ ಮನೆಗೆ ಬರಗೊಡದಾ
ಹದಿನೆಂಟು ಮಂದಿ
ಕುಂಟಲಿಯರ ಹಾದಿಯನು ಕಡಿದಾ
ಎನ್ನ ಕರವ ಪಿಡಿದಾ
ಕುಂಟಕುರುಡಾರೆಂಟು ಮಂದಿ
ಗಂಟುಬಿದ್ದರೆ ಅವರ ಕಾಣುತ
ಗಂಟಲಕೆ ಗಾಣಾದನೇಳಕ್ಕಾ
ತಕ್ಕವನೇ ಸಿಕ್ಕಾ           || ೩ ||

ಅತ್ತೆಮಾವರ ಮನೆಯ ಬಿಡಿಸಿದನೇ
ಮತ್ತೆಲ್ಲಿ ಮೂವರ
ಮಕ್ಕಳೈವರು ಮಮತೆಯ ಕೆಡಿಸಿದನೇ
ಎನ್ನನ್ನು ತಂದು
ರತ್ನಜ್ಯೋತಿಯ ಪ್ರಭೆಯೊಳಿರಿಸಿದನೇ
ಎನಗೊತ್ತಿನವನು
ಎತ್ತ ಹೋಗದೆ ಚಿತ್ತವಗಲದೆ
ಗೊತ್ತಿನಲ್ಲಿ ಇಟ್ಟು ಎನ್ನನು
ಮುತ್ತಿನಾ ಮೂಗುತಿಯ ಕೊಟ್ಟಾನೇ
ಅವನೇನು ದಿಟ್ಟನೇ           || ೪ ||

ಕಾಂತೆ ಕೇಳೆ ಕರುಣ ಗುಣದಿಂದ
ಎನಗಿಂಥ ಪುರುಷನು
ಬಂದು ದೊರಕಿದ ಪುಣ್ಯಫಲದಿಂದಾ
ಎನ್ನಂತರಂಗದ
ಕಾಂತ ಶ್ರೀ ಗುರುನಾಥ ಗೋವಿಂದಾ
ಶಿಶುನಾಳದಿಂದ
ಕಾಂತೆ ಬಾರೆಂತೆಂದು ಕರೆದೇ-
ಕಾಂತ ಮಂದಿರದೊಳಗೆ ಒಯ್ದು
ಭ್ರಾಂತಿ ಭವ ದುರಿತವನು ಪರಿಹರಿಸಿ
ಚಿಂತೆಯನು ಮರಸಿ            || ೫ ||
***

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...