Home / ಕವನ / ಕವಿತೆ / ಎರಗಿ ಬಿನ್ನಾ ಮಾಡದ್ಹೋದರು

ಎರಗಿ ಬಿನ್ನಾ ಮಾಡದ್ಹೋದರು

ಎರಗಿ ಬಿನ್ನಾ ಮಾಡದ್ಹೋದರು
ಗುರುವರನ ಗಣರಿಗೆರಗಿ
ಬಿನ್ನಾ ಮಾಡದ್ಹೋದರು
ನರಗುರಿಗಳು ಪರಿಹಾಸ್ಯದಿ
ಜರಿದರು ಎನ್ನ ಕರೆಸಿದರೈ
ಹರನ ಶಾಸ್ತ್ರಕೆ ವರಪ್ರಸ್ತಕೆ
ಮರಿತರು ನಿಮಗರಿಕಿರಲೈ ||ಪ||

ಹಿಂದಕ್ಕೊಮ್ಮೆ ಪ್ರಥಮರೊಡನೆ
ದ್ವಂದ್ವ ಬಯಸಿ ರೇಚಿತಂದೆ
ಒಂದು ಕರಿಯ ಎಲಿಯ ಕೊಟ್ಟ
ಇಂದು ಪಥಕೆ ಮುಟ್ಟಲಿಲ್ಲಾ
ಅಂದಿನ ಕಥೆ ಇಂದರಿಯದೆ
ಬಂಧನಕ್ಕೊಳಗಾಗುವರೆ
ಕುಂದಿಟ್ಟರು ನಿಂದಿಸುತಲಿ
ಮಂದಾತ್ಮರು ಮಹಾಗರ್ವದಿ ||೧||

ನಿಷ್ಟಿ ಹಿಡಿದು ನಿಜಗ ನಿಲ್ಲದೆ
ಇಷ್ಟಲಿಂಗದ ಅರವು ಇಲ್ಲದೆ
ಶ್ರೇಷ್ಟ ಭಲಾ ಶಿವ ಜಂಗಮ-
ರಿಷ್ಟು ಬಳಲಿಸಿರುವರಿವರು
ಕೆಟ್ಟರು ಕುಚೇಷ್ಟರು
ಬ್ರಷ್ಟರು ಮಹಾಗರ್ವಿಷ್ಟರು
ತಟ್ಟಲೀ ಪಾಪ ಅವರಿಗೆ
ಕುಟ್ಟಲೀ ಶಿವಾ ಕುಟ್ಟಲೀಗ ||೨||

ಪೃಥ್ವಿಪಾಲ ಶಿಶುವಿನಾಳ
ಸತ್ಯಶರಣ ಸಖನ
ಕೃತ್ಯ ಕಪಟ ಬಯಸಿದವರು
ಕತ್ತಿ ಜನ್ಮಕೆ ಹೋಗುತಿಹರು ಚಿತ್ತೈಸಿರಿ
ಅರ್ತಿಯಲಿ ಚಿತ್ತೈಸಿರಿ ಇದನರಿತು
ಮತ್ತೆ ಕಳಸದ ಗ್ರಾಮಕೆ
ಪ್ರಸ್ತವಾಯಿತೋ ಭಕ್ತಿಯಲಿ ||೩||

****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...