Home / ಲೇಖನ / ವಿಜ್ಞಾನ / ಭವಿಷ್ಯದ ಕ್ರಾಂತಿಕಾರದ ಔಷಧಿಗಳು

ಭವಿಷ್ಯದ ಕ್ರಾಂತಿಕಾರದ ಔಷಧಿಗಳು

ಮಾನವನ ವಂಶವಾಹಿನಿಯಲ್ಲಿರುವ ಸುಮಾರು 3 ಬಿಲಿಯನ್ D.N.A. ಗಳಲ್ಲಿ ಶೇ.25 ರಷ್ಟು ವ್ಯಾಧಿಕಾರಕವೆ೦ದು ಗುರುತಿಸಲಾಗಿದೆ.. ಇದನ್ನೇ ಆಧಾರವಾಗಿಟ್ಟುಕೊ೦ಡು ಆಯಾ ವ೦ಶವಾಹಿನಿಗಳು ಉಂಟುಮಾಡುವ ರೋಗಗಳನ್ನು ತಡೆಗಟ್ಟಲು ಸಮರ್ಥವಾದ ಔಷಧಿಗಳನ್ನು ವಿಜ್ಞಾನಿಗಳು ಕಂಡುಹಿಡಿಯಲಿದ್ದಾರೆ. ಇದರಿ೦ದ ರೋಗಿಯ ‘ಬಯೋಕೆಮಿಸ್ಟ್ರಿ’ ತಿಳಿದುಕೊಳ್ಳಲು ಅನುಕೂಲವಾಗುತ್ತದೆ. ಚುಚ್ಚುಮದ್ದಿನ ಪ್ರಾಮುಖ್ಯತೆ ಕಡಿಮೆಯಾಗುತ್ತದೆ. ಅಸ್ತಮಾಗೆ ಉಪಯೋಗಿಸುವ ‘ಇನ್‌ಹೇಲರ್’ ಗಳಂತೆ ಉಸಿರಿನೊಂದಿಗೆ ಎಳೆದುಕೊಳ್ಳುವ ರೂಪದಲ್ಲಿ ಹಲವಾರು ಔಷಧಿಗಳು ಮಾರುಕಟ್ಟೆಗೆ ಬರಲಿದೆ. ನಾವು ಪ್ರತಿದಿನ ತಿನ್ನುವ ಆಹಾರದೂ೦ದಿಗೆ ದೇಹದೊಳಗೆ ಸೇರುವ ಔಷಧಿಗಳು ನಿರ್ದಿಷ್ಟ ಸಮಯದಲ್ಲಿ ಮಾತ್ರ ಕೆಲಸ ಮಾಡುವ ಮಾತ್ರೆಗಳು ಬರುತ್ತವೆ. ಗಂಭೀರ ಆಹಾರ ಸಮಸ್ಯೆಗಳಿಂದ ಬಳಲುತ್ತಿರುವವರಿಗೆ ಸುಲಭವಾಗಿ ಉಪಯೋಗಿಸಲು ಮತ್ತು ಶೀಘ್ರ ಉಪಶಮನವನ್ನು ನೀಡುವ ಔಷಧಿಗಳು ಅಂಗಡಿಗಳಿಗೆ ಬರಲಿದೆ. ಮುಖ್ಯವಾಗಿ ಟಿ.ಬಿ., ಏಡ್ಸ್‌ನಂತಹ ಭಯ೦ಕರ ವ್ಯಾಧಿಗಳಿಗೂ ಕೂಡ ದಿನಕ್ಕೊಂದು ಮಾತ್ರೆ ಸಾಕು, ಎಂಬ ಕಾಲ ಬರಲಿದೆ.

ಕೆಲವು ಔಷಧಿಗಳು ಬಕ್ಕತಲೆಯ ಮೇಲೆ ಕೂದಲು ಬೆಳೆಸಲು ಉಪಯೋಗವಾದರೆ, ಕೂದಲು ಉದುರುವುದನ್ನು ತಡೆಗಟ್ಟುವಂಥಹ ಔಷಧಿಗಳನ್ನು ಚಿಕಾಗೋ ವಿಶ್ವವಿದ್ಯಾನಿಲಯದ ಸ೦ಶೋಧನಾವೃಂದವು ವಿಧಾನವನ್ನು (ಹೊಸ) ಕಂಡುಹಿಡಿದಿದೆ. ಪೆನ್ಸಿಲ್ವೇನಿಯಾ ವಿಶ್ವವಿದ್ಯಾನಿಲಯಕ್ಕೆ ಸೇರಿದ ಹೆಚ್.ಲೀ. ಸ್ಟೀನಿ ಎ೦ಬ ವಿಜ್ಞಾನಿ ಕಾಸ್ಮೆಟಿಕ್‌ಡ್ರಗ್ ಅನ್ನು ಕಂಡು ಹಿಡಿದಿದ್ದಾರೆ. ಇವರು ಕೂದಲು ಬೆಳೆಸಲು ಮತ್ತು ಜ್ಞಾಪಕಶಕ್ತಿಯನ್ನು, ಬುದ್ಧಿವಂತಿಕೆಯನ್ನು ಹೆಚ್ಚಿಸಲು  ಕೂಡ ಔಷಧಿಯನ್ನು ಕಂಡುಹಿಡಿಯುತ್ತಲಿದ್ದಾರೆ. ಇತ್ತೀಚೆಗೆ ವಿಜ್ಞಾನಿಗಳು ಉದ್ರೇಕ, ಮಾನಸಿಕ ಒತ್ತಡಗಳಿಗೆ ಕಾರಣವಾದ ವ೦ಶವಾಹಿನಿಯನ್ನು ಗುರುತಿಸಿದ್ದಾರೆ. ಮಧ್ಯಪಾನ, ಮಾದಕ ದ್ರವಗಳ ಚಟಕ್ಕೆ ಕಾರಣವಾಗುವ ವ೦ಶವಾಹಿನಿಯನ್ನು ಗುರುತಿಸಲಾಗಿದೆ.

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...