Home / ಲೇಖನ / ವಿಜ್ಞಾನ / ಭವಿಷ್ಯದ ಕ್ರಾಂತಿಕಾರದ ಔಷಧಿಗಳು

ಭವಿಷ್ಯದ ಕ್ರಾಂತಿಕಾರದ ಔಷಧಿಗಳು

ಮಾನವನ ವಂಶವಾಹಿನಿಯಲ್ಲಿರುವ ಸುಮಾರು 3 ಬಿಲಿಯನ್ D.N.A. ಗಳಲ್ಲಿ ಶೇ.25 ರಷ್ಟು ವ್ಯಾಧಿಕಾರಕವೆ೦ದು ಗುರುತಿಸಲಾಗಿದೆ.. ಇದನ್ನೇ ಆಧಾರವಾಗಿಟ್ಟುಕೊ೦ಡು ಆಯಾ ವ೦ಶವಾಹಿನಿಗಳು ಉಂಟುಮಾಡುವ ರೋಗಗಳನ್ನು ತಡೆಗಟ್ಟಲು ಸಮರ್ಥವಾದ ಔಷಧಿಗಳನ್ನು ವಿಜ್ಞಾನಿಗಳು ಕಂಡುಹಿಡಿಯಲಿದ್ದಾರೆ. ಇದರಿ೦ದ ರೋಗಿಯ ‘ಬಯೋಕೆಮಿಸ್ಟ್ರಿ’ ತಿಳಿದುಕೊಳ್ಳಲು ಅನುಕೂಲವಾಗುತ್ತದೆ. ಚುಚ್ಚುಮದ್ದಿನ ಪ್ರಾಮುಖ್ಯತೆ ಕಡಿಮೆಯಾಗುತ್ತದೆ. ಅಸ್ತಮಾಗೆ ಉಪಯೋಗಿಸುವ ‘ಇನ್‌ಹೇಲರ್’ ಗಳಂತೆ ಉಸಿರಿನೊಂದಿಗೆ ಎಳೆದುಕೊಳ್ಳುವ ರೂಪದಲ್ಲಿ ಹಲವಾರು ಔಷಧಿಗಳು ಮಾರುಕಟ್ಟೆಗೆ ಬರಲಿದೆ. ನಾವು ಪ್ರತಿದಿನ ತಿನ್ನುವ ಆಹಾರದೂ೦ದಿಗೆ ದೇಹದೊಳಗೆ ಸೇರುವ ಔಷಧಿಗಳು ನಿರ್ದಿಷ್ಟ ಸಮಯದಲ್ಲಿ ಮಾತ್ರ ಕೆಲಸ ಮಾಡುವ ಮಾತ್ರೆಗಳು ಬರುತ್ತವೆ. ಗಂಭೀರ ಆಹಾರ ಸಮಸ್ಯೆಗಳಿಂದ ಬಳಲುತ್ತಿರುವವರಿಗೆ ಸುಲಭವಾಗಿ ಉಪಯೋಗಿಸಲು ಮತ್ತು ಶೀಘ್ರ ಉಪಶಮನವನ್ನು ನೀಡುವ ಔಷಧಿಗಳು ಅಂಗಡಿಗಳಿಗೆ ಬರಲಿದೆ. ಮುಖ್ಯವಾಗಿ ಟಿ.ಬಿ., ಏಡ್ಸ್‌ನಂತಹ ಭಯ೦ಕರ ವ್ಯಾಧಿಗಳಿಗೂ ಕೂಡ ದಿನಕ್ಕೊಂದು ಮಾತ್ರೆ ಸಾಕು, ಎಂಬ ಕಾಲ ಬರಲಿದೆ.

ಕೆಲವು ಔಷಧಿಗಳು ಬಕ್ಕತಲೆಯ ಮೇಲೆ ಕೂದಲು ಬೆಳೆಸಲು ಉಪಯೋಗವಾದರೆ, ಕೂದಲು ಉದುರುವುದನ್ನು ತಡೆಗಟ್ಟುವಂಥಹ ಔಷಧಿಗಳನ್ನು ಚಿಕಾಗೋ ವಿಶ್ವವಿದ್ಯಾನಿಲಯದ ಸ೦ಶೋಧನಾವೃಂದವು ವಿಧಾನವನ್ನು (ಹೊಸ) ಕಂಡುಹಿಡಿದಿದೆ. ಪೆನ್ಸಿಲ್ವೇನಿಯಾ ವಿಶ್ವವಿದ್ಯಾನಿಲಯಕ್ಕೆ ಸೇರಿದ ಹೆಚ್.ಲೀ. ಸ್ಟೀನಿ ಎ೦ಬ ವಿಜ್ಞಾನಿ ಕಾಸ್ಮೆಟಿಕ್‌ಡ್ರಗ್ ಅನ್ನು ಕಂಡು ಹಿಡಿದಿದ್ದಾರೆ. ಇವರು ಕೂದಲು ಬೆಳೆಸಲು ಮತ್ತು ಜ್ಞಾಪಕಶಕ್ತಿಯನ್ನು, ಬುದ್ಧಿವಂತಿಕೆಯನ್ನು ಹೆಚ್ಚಿಸಲು  ಕೂಡ ಔಷಧಿಯನ್ನು ಕಂಡುಹಿಡಿಯುತ್ತಲಿದ್ದಾರೆ. ಇತ್ತೀಚೆಗೆ ವಿಜ್ಞಾನಿಗಳು ಉದ್ರೇಕ, ಮಾನಸಿಕ ಒತ್ತಡಗಳಿಗೆ ಕಾರಣವಾದ ವ೦ಶವಾಹಿನಿಯನ್ನು ಗುರುತಿಸಿದ್ದಾರೆ. ಮಧ್ಯಪಾನ, ಮಾದಕ ದ್ರವಗಳ ಚಟಕ್ಕೆ ಕಾರಣವಾಗುವ ವ೦ಶವಾಹಿನಿಯನ್ನು ಗುರುತಿಸಲಾಗಿದೆ.

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...