Home / ಲೇಖನ / ವಿಜ್ಞಾನ / ಜೈವ ತಂತ್ರಜ್ಞಾನದಿಂದ ರಕ್ತದ ಸೃಷ್ಟಿ

ಜೈವ ತಂತ್ರಜ್ಞಾನದಿಂದ ರಕ್ತದ ಸೃಷ್ಟಿ

ಅಶಕ್ತರೋಗಿಗಳಿಗೆ, ಅಥವಾ ಗಂಭೀರ ಕಾಯಿಲೆ ಇದ್ದವರಿಗೆ ರಕ್ತವನ್ನು ಕೊಡುವುದು ಅನಿವಾರ್ಯವಾಗಿರುತ್ತದೆ. ಆದರೆ ರೋಗಿಗೆ ಸರಿ ಹೊಂದುವ ರಕ್ತದ ಕೊರತೆ ಒಂದೆಡೆಯಾದರೆ ರಕ್ತದ ವಿರಳತೆಯಿಂದಾಗಿ ಕೊಡಲಾಗದೇ ರೋಗಿ ಸಾಯಬೇಕಾಗುತ್ತದೆ ಅಥವಾ ಸಹಸ್ರಾರು ರೂ.ಗಳನ್ನು ಸುರಿದು (Blood Bank) ನಲ್ಲಿ ರಕ್ತ ತಂದು ಪೂರೈಸ- ಬೇಕಾಗುತ್ತದೆ. ಇದೆಲ್ಲ ಕಷ್ಟಕರವಾದ ಕೆಲಸವೆ. ಆದರೆ ತಂತ್ರಜ್ಞಾನದಿಂದ ರಕ್ತವೂ ಸೃಷ್ಟಿಯಾಗಿ  ಬೇಕಾದವರಿಗೆ ಅಂಗಡಿಯಲ್ಲಿ ಸಿಗುವಂತಾದರೆ ಅದಕ್ಕಿಂತಲೂ ಇನ್ನೇನು ಬೇಕು. ರೋಗಿಯ ಪುಣ್ಯ ರಕ್ತಕ್ಕಾಗಿ ಅಲೆಯುವ ಸಮಸ್ಯೆಯೇ ಇರಲಾರದು. ಇಂತಹ ಪರಿಸ್ಥಿತಿಯನ್ನು ಅರ್ಥಮಾಡಿಕೊಂಡ ‘ವಿಟ್‌ವೈಸ್’ ಎಂಬ ವಿಜ್ಞಾನಿ ಜೈವ ತಂತ್ರಜ್ಞಾನ ಸಾಧನೆಯಿಂದ ರಕ್ತದ ಸೃಷ್ಟಿಯನ್ನು ಕಂಡು ಹಿಡಿದರು. ಕೆಂಬ್ರಿಡ್ಜ್ ಮಸಾಚುಸೆಟ್ಟ್‌ನಲ್ಲಿರುವ  ಆಂಟೋಜೆನಿ ಎಂಬ ಜೈವ ತಾಂತ್ರಿಕ ಸಂಸ್ಥೆಯಲ್ಲಿ ಸಂಶೋಧಕ ವ್ಶೆದ್ಯರಾಗಿ ಇವರು ಸೇವೆ ಸಲ್ಲಿಸುತ್ತಿದ್ದಾರೆ.

ಪ್ರಪಥಮವಾಗಿ ಆದಿಕೋಶಗಳನ್ನು ಗುರುತಿಸಿ, ಪ್ರತ್ಯೇಕಿಸಿ ಪ್ರಯೋಗಾಲಯದ ಪ್ಲಾಸ್ಟಿಕ್ ತಟ್ಟೆಯೊಂದರಲ್ಲಿ ಅವನ್ನು ಬಿತ್ತಿದರು. ಅವಕ್ಕೆ ಪೋಶಾಕಾಂಶಗಳನ್ನು ಒದಗಿಸಿದರು. ಸೂಕ್ತಜನಕಾಣುಗಳನ್ನು ಪೂರೈಸಿದರು. ಕೆಲವೇ ದಿನಗಳಲ್ಲಿ ನಿಬ್ಬೆರಗಿನ ಫಲಿತಾಂಶವನ್ನು ನೋಡಿ ಕುಣಿದಾಡಿದರು. ಆದಿಕೋಶವು ಕೆಂಗಣಗಳನ್ನು ಉತ್ಪಾದಿಸಲಾಂಭಿಸಿತು. ರಕ್ತವು ಸ್ಪಷ್ಟಿಯಾಯಿತು. ಈ. ಸೂತ್ರವನ್ನು ಅನುಸರಿಸಿ ಸಂಶೋಧಕರು ರಕ್ತವನ್ನು ಸೃಷ್ಟಿಸಿ ಅಶಕ್ತ ರೋಗಿಗಳಿಗೆ ಈ ರಕ್ತವನ್ನು ಪೂರೈಸುತ್ತಾರೆ ಎಂಬ ದಿನಗಳು ಬರುತ್ತವೆ !

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...