Home / ಲೇಖನ / ವಿಜ್ಞಾನ / ಜೈವ ತಂತ್ರಜ್ಞಾನದಿಂದ ರಕ್ತದ ಸೃಷ್ಟಿ

ಜೈವ ತಂತ್ರಜ್ಞಾನದಿಂದ ರಕ್ತದ ಸೃಷ್ಟಿ

ಅಶಕ್ತರೋಗಿಗಳಿಗೆ, ಅಥವಾ ಗಂಭೀರ ಕಾಯಿಲೆ ಇದ್ದವರಿಗೆ ರಕ್ತವನ್ನು ಕೊಡುವುದು ಅನಿವಾರ್ಯವಾಗಿರುತ್ತದೆ. ಆದರೆ ರೋಗಿಗೆ ಸರಿ ಹೊಂದುವ ರಕ್ತದ ಕೊರತೆ ಒಂದೆಡೆಯಾದರೆ ರಕ್ತದ ವಿರಳತೆಯಿಂದಾಗಿ ಕೊಡಲಾಗದೇ ರೋಗಿ ಸಾಯಬೇಕಾಗುತ್ತದೆ ಅಥವಾ ಸಹಸ್ರಾರು ರೂ.ಗಳನ್ನು ಸುರಿದು (Blood Bank) ನಲ್ಲಿ ರಕ್ತ ತಂದು ಪೂರೈಸ- ಬೇಕಾಗುತ್ತದೆ. ಇದೆಲ್ಲ ಕಷ್ಟಕರವಾದ ಕೆಲಸವೆ. ಆದರೆ ತಂತ್ರಜ್ಞಾನದಿಂದ ರಕ್ತವೂ ಸೃಷ್ಟಿಯಾಗಿ  ಬೇಕಾದವರಿಗೆ ಅಂಗಡಿಯಲ್ಲಿ ಸಿಗುವಂತಾದರೆ ಅದಕ್ಕಿಂತಲೂ ಇನ್ನೇನು ಬೇಕು. ರೋಗಿಯ ಪುಣ್ಯ ರಕ್ತಕ್ಕಾಗಿ ಅಲೆಯುವ ಸಮಸ್ಯೆಯೇ ಇರಲಾರದು. ಇಂತಹ ಪರಿಸ್ಥಿತಿಯನ್ನು ಅರ್ಥಮಾಡಿಕೊಂಡ ‘ವಿಟ್‌ವೈಸ್’ ಎಂಬ ವಿಜ್ಞಾನಿ ಜೈವ ತಂತ್ರಜ್ಞಾನ ಸಾಧನೆಯಿಂದ ರಕ್ತದ ಸೃಷ್ಟಿಯನ್ನು ಕಂಡು ಹಿಡಿದರು. ಕೆಂಬ್ರಿಡ್ಜ್ ಮಸಾಚುಸೆಟ್ಟ್‌ನಲ್ಲಿರುವ  ಆಂಟೋಜೆನಿ ಎಂಬ ಜೈವ ತಾಂತ್ರಿಕ ಸಂಸ್ಥೆಯಲ್ಲಿ ಸಂಶೋಧಕ ವ್ಶೆದ್ಯರಾಗಿ ಇವರು ಸೇವೆ ಸಲ್ಲಿಸುತ್ತಿದ್ದಾರೆ.

ಪ್ರಪಥಮವಾಗಿ ಆದಿಕೋಶಗಳನ್ನು ಗುರುತಿಸಿ, ಪ್ರತ್ಯೇಕಿಸಿ ಪ್ರಯೋಗಾಲಯದ ಪ್ಲಾಸ್ಟಿಕ್ ತಟ್ಟೆಯೊಂದರಲ್ಲಿ ಅವನ್ನು ಬಿತ್ತಿದರು. ಅವಕ್ಕೆ ಪೋಶಾಕಾಂಶಗಳನ್ನು ಒದಗಿಸಿದರು. ಸೂಕ್ತಜನಕಾಣುಗಳನ್ನು ಪೂರೈಸಿದರು. ಕೆಲವೇ ದಿನಗಳಲ್ಲಿ ನಿಬ್ಬೆರಗಿನ ಫಲಿತಾಂಶವನ್ನು ನೋಡಿ ಕುಣಿದಾಡಿದರು. ಆದಿಕೋಶವು ಕೆಂಗಣಗಳನ್ನು ಉತ್ಪಾದಿಸಲಾಂಭಿಸಿತು. ರಕ್ತವು ಸ್ಪಷ್ಟಿಯಾಯಿತು. ಈ. ಸೂತ್ರವನ್ನು ಅನುಸರಿಸಿ ಸಂಶೋಧಕರು ರಕ್ತವನ್ನು ಸೃಷ್ಟಿಸಿ ಅಶಕ್ತ ರೋಗಿಗಳಿಗೆ ಈ ರಕ್ತವನ್ನು ಪೂರೈಸುತ್ತಾರೆ ಎಂಬ ದಿನಗಳು ಬರುತ್ತವೆ !

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...