Home / ಲೇಖನ / ವಿಜ್ಞಾನ / ಬಾಳೆಹಣ್ಣಿನ ಸಿಪ್ಪಯಿಂದ ಇಂಧನ ಅನಿಲ

ಬಾಳೆಹಣ್ಣಿನ ಸಿಪ್ಪಯಿಂದ ಇಂಧನ ಅನಿಲ

ಬಾಳೆಹಣ್ಣಿನ ಸಿಪ್ಪೆಯನ್ನು ತುಳಿದು ಕಾಲು ಜಾರಿದ ಅನುಭವ ಬೇಕಾವಷ್ಟು ಜನಕ್ಕಿದೆ ಅಲ್ಲವೆ? ಇಂಥಹ ಬಾಳೆಹಣ್ಣಿನ ಸಿಪ್ಪೆಯು ತಾಜ್ಯ ವಸ್ತುವಾಗಿ ಅಲ್ಲಲ್ಲಿ ಬೀಳುತ್ತಲೇ ಇರುತ್ತದೆ. ನಮ್ಮಲ್ಲಿ ಸಾಮಾನ್ಯವಾಗಿ ನಿರುಪಯುಕ್ತ ವಸ್ತುವಾಗಿ ಕರಗಿ ಹೋಗುವ ಇಂಥಹ ಸಿಪ್ಪೆಯನ್ನು ಥಾಯ್ಲೆಂಡ್ ದೇಶದ ಜನ ಹಣ್ಣನ್ನು ತಿಂದು ಸಿಪ್ಪೆಯಿಂದಲೂ ಆಗಬಹುದಾದ ಉಪಯೋಗವನ್ನು ಕಂಡುಕೊಂಡಿದ್ದಾರೆ. ಏಕೆಂದರೆ ಇಲ್ಲಿ ಬಾಳೆ ಒಂದು ಪ್ರಮುಖವಾದ ಬೆಳೆ. ಇಲ್ಲಿ ಈ ಸಿಪ್ಪೆಯ ರಾಶಿ ರಾಶಿ ಬೀಳುತ್ತದೆ. ಇಂಥಹ ಸಿಪ್ಪೆಯನ್ನು ಬಳಸಿಕೊಂಡು ಜೈವಿಕ ಅನಿಲವನ್ನು ಉತ್ಪಾದಿಸುವ (Gas) ಸ್ಥಾವರವನ್ನು ಥಾಯ್ಲಾಂಡಿನ ನರಸುವಾನ್ ವಿಶ್ವವಿದ್ಯಾನಿಲಯದ ಸೌರಶಕ್ತಿತರಬೇತಿ ಕೇಂವ್ರದಲ್ಲಿ ಅಭಿವೃದ್ಧಿಪಡಿಸಲಾಗಿದೆ. ಬಾಳೆಹಣ್ಣನ್ನು ಸಂಸ್ಕರಿಸುವ ಉದ್ಯಮಗಳು ಅಲ್ಲಿಯ ಗ್ರಾಮೀಣ ಪ್ರದೇಶದಲ್ಲಿ ಹೇರಳವಾಗಿವೆ. ಉಳಿದ ಸಿಪ್ಪೆಯಿಂದ ಇಂಧನ ಅನಿಲವನ್ನು ಉತ್ಪಾದಿಸಿದರೆ ಹೆಚ್ಚು ಪ್ರಯೋಜನಕಾರಿಯಾಗುತ್ತದೆ. ಜತೆಗೆ ಪರಿಸರ ಮಾಲಿನ್ಯವನ್ನು ಸಹ ತಡೆಗಟ್ಟಬಹುದು.

ದನ ಕರಗಳ ಸಗಣಿಯನ್ನು ಮತ್ತು ಗಿಡಗಳನ್ನು ಕೊಳೆಯಿಸಿ ಮಿಥೇನ್ ಅನಿಲವನ್ನು ಉತ್ಪಾದಿಸುವಂತೆ, ದನಗಳ ಸಗಣಿಯಿಂದ ಗೋಬರ್ ಗ್ಯಾಸನ್ನು ಬಳೆಸುವಂತೆ ಥಾಯ್ಲಾಂಡಿನಲ್ಲಿ ಬಾಳೆಹಣ್ಣಿನ ಸಿಪ್ಪೆಯಿಂದ ಇಂಧನ ಅನಿಲವನ್ನು ತಯಾರಿಸುವ ತಂತ್ರಜ್ಞಾನ ಬೆಳಕಿಗೆ ಬಂದಿದೆ. ಥಾಯ್ಲಾಂಡಿನ ಬಂಗ್‌ಕ್ರಾತುಮ್ ಎಂಬ ಜಿಲ್ಲೆಯಲ್ಲಿ ನಡೆಯಿಸಿದ ಸಮೀಕ್ಷೆಯಿಂದ ಅಲ್ಲಿ ವರ್ಷಕ್ಕೆ 10 ಸಾವಿರ ಟನ್‌ಗಳಷ್ಟು ಬಾಳೆಹಣ್ಣುಗಳನ್ನು ಒಣಗಿಸಲಾಗುತ್ತದೆ. ಮತ್ತು ಇದರಿಂದ ಎರಡುವರೇ ಸಾವಿರ ಟನ್‌ಗಳಷ್ಟು ಸಿಪ್ಪೆ ಉಳಿಯುತ್ತದೆಂದು ತಿಳಿದು ಬಂದಿದೆ. ಇಂಥ ರಾಶಿ ರಾಶಿ ಬೀಳುವ ಸಿಪ್ಪೆಯಿಂದ  ಅನಾಯಾಸವಾಗಿ ಇಂಧನದ ಅನಿಲವನ್ನು ಉತ್ಪಾದಿಸುವ ಘಟಕಗಳು ನಡೆಯುತ್ತದೆ.

ಈ ಯೋಜನೆಯ ಅನುಷ್ಠಾನಕ್ಕಾಗಿ ಜರ್ಮನಿಯ ತಾಂತ್ರಿಕ ಸಲಹಾ ಏಜೆನ್ಸಿಯು ಆರ್ಥಿಕ ಬೆಂಬಲ ನೀಡಿದೆ. 1995ರಲ್ಲಿ ಬಾಳೆಹಣ್ಣಿನ ಸಿಪ್ಪೆ ಆಧಾರಿತ ಇಂಧನ ಅನಿಲ ಸ್ಥಾವರ ಸ್ಥಾಪನೆಗೊಂಡಿದೆ. ಆರ್ಥಿಕವಾಗಿ ಬಾಳೆಹಣ್ಣು ಬೆಳೆಯುವ ಭಾರತದ ಪ್ರದೇಶಗಳಲಿ ನಿರುಪಯುಕ್ತವಾಗುವ ಬಾಳೆಹಣ್ಣಿನ ಸಿಪ್ಪೆಯಿಂದ ಇಂಥಹ ಅನಿಲವನ್ನು ಉತ್ಪಾದಿಸುವ
ಯೋಜನೆ ಬಂದರೆ ಇಂಧನದ ಸಮಸ್ಯೆ  ಒಂದಿಷ್ಟು ತೀರಿತು.

****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...