Home / ಲೇಖನ / ವಿಜ್ಞಾನ / ಬಾಳೆಹಣ್ಣಿನ ಸಿಪ್ಪಯಿಂದ ಇಂಧನ ಅನಿಲ

ಬಾಳೆಹಣ್ಣಿನ ಸಿಪ್ಪಯಿಂದ ಇಂಧನ ಅನಿಲ

ಬಾಳೆಹಣ್ಣಿನ ಸಿಪ್ಪೆಯನ್ನು ತುಳಿದು ಕಾಲು ಜಾರಿದ ಅನುಭವ ಬೇಕಾವಷ್ಟು ಜನಕ್ಕಿದೆ ಅಲ್ಲವೆ? ಇಂಥಹ ಬಾಳೆಹಣ್ಣಿನ ಸಿಪ್ಪೆಯು ತಾಜ್ಯ ವಸ್ತುವಾಗಿ ಅಲ್ಲಲ್ಲಿ ಬೀಳುತ್ತಲೇ ಇರುತ್ತದೆ. ನಮ್ಮಲ್ಲಿ ಸಾಮಾನ್ಯವಾಗಿ ನಿರುಪಯುಕ್ತ ವಸ್ತುವಾಗಿ ಕರಗಿ ಹೋಗುವ ಇಂಥಹ ಸಿಪ್ಪೆಯನ್ನು ಥಾಯ್ಲೆಂಡ್ ದೇಶದ ಜನ ಹಣ್ಣನ್ನು ತಿಂದು ಸಿಪ್ಪೆಯಿಂದಲೂ ಆಗಬಹುದಾದ ಉಪಯೋಗವನ್ನು ಕಂಡುಕೊಂಡಿದ್ದಾರೆ. ಏಕೆಂದರೆ ಇಲ್ಲಿ ಬಾಳೆ ಒಂದು ಪ್ರಮುಖವಾದ ಬೆಳೆ. ಇಲ್ಲಿ ಈ ಸಿಪ್ಪೆಯ ರಾಶಿ ರಾಶಿ ಬೀಳುತ್ತದೆ. ಇಂಥಹ ಸಿಪ್ಪೆಯನ್ನು ಬಳಸಿಕೊಂಡು ಜೈವಿಕ ಅನಿಲವನ್ನು ಉತ್ಪಾದಿಸುವ (Gas) ಸ್ಥಾವರವನ್ನು ಥಾಯ್ಲಾಂಡಿನ ನರಸುವಾನ್ ವಿಶ್ವವಿದ್ಯಾನಿಲಯದ ಸೌರಶಕ್ತಿತರಬೇತಿ ಕೇಂವ್ರದಲ್ಲಿ ಅಭಿವೃದ್ಧಿಪಡಿಸಲಾಗಿದೆ. ಬಾಳೆಹಣ್ಣನ್ನು ಸಂಸ್ಕರಿಸುವ ಉದ್ಯಮಗಳು ಅಲ್ಲಿಯ ಗ್ರಾಮೀಣ ಪ್ರದೇಶದಲ್ಲಿ ಹೇರಳವಾಗಿವೆ. ಉಳಿದ ಸಿಪ್ಪೆಯಿಂದ ಇಂಧನ ಅನಿಲವನ್ನು ಉತ್ಪಾದಿಸಿದರೆ ಹೆಚ್ಚು ಪ್ರಯೋಜನಕಾರಿಯಾಗುತ್ತದೆ. ಜತೆಗೆ ಪರಿಸರ ಮಾಲಿನ್ಯವನ್ನು ಸಹ ತಡೆಗಟ್ಟಬಹುದು.

ದನ ಕರಗಳ ಸಗಣಿಯನ್ನು ಮತ್ತು ಗಿಡಗಳನ್ನು ಕೊಳೆಯಿಸಿ ಮಿಥೇನ್ ಅನಿಲವನ್ನು ಉತ್ಪಾದಿಸುವಂತೆ, ದನಗಳ ಸಗಣಿಯಿಂದ ಗೋಬರ್ ಗ್ಯಾಸನ್ನು ಬಳೆಸುವಂತೆ ಥಾಯ್ಲಾಂಡಿನಲ್ಲಿ ಬಾಳೆಹಣ್ಣಿನ ಸಿಪ್ಪೆಯಿಂದ ಇಂಧನ ಅನಿಲವನ್ನು ತಯಾರಿಸುವ ತಂತ್ರಜ್ಞಾನ ಬೆಳಕಿಗೆ ಬಂದಿದೆ. ಥಾಯ್ಲಾಂಡಿನ ಬಂಗ್‌ಕ್ರಾತುಮ್ ಎಂಬ ಜಿಲ್ಲೆಯಲ್ಲಿ ನಡೆಯಿಸಿದ ಸಮೀಕ್ಷೆಯಿಂದ ಅಲ್ಲಿ ವರ್ಷಕ್ಕೆ 10 ಸಾವಿರ ಟನ್‌ಗಳಷ್ಟು ಬಾಳೆಹಣ್ಣುಗಳನ್ನು ಒಣಗಿಸಲಾಗುತ್ತದೆ. ಮತ್ತು ಇದರಿಂದ ಎರಡುವರೇ ಸಾವಿರ ಟನ್‌ಗಳಷ್ಟು ಸಿಪ್ಪೆ ಉಳಿಯುತ್ತದೆಂದು ತಿಳಿದು ಬಂದಿದೆ. ಇಂಥ ರಾಶಿ ರಾಶಿ ಬೀಳುವ ಸಿಪ್ಪೆಯಿಂದ  ಅನಾಯಾಸವಾಗಿ ಇಂಧನದ ಅನಿಲವನ್ನು ಉತ್ಪಾದಿಸುವ ಘಟಕಗಳು ನಡೆಯುತ್ತದೆ.

ಈ ಯೋಜನೆಯ ಅನುಷ್ಠಾನಕ್ಕಾಗಿ ಜರ್ಮನಿಯ ತಾಂತ್ರಿಕ ಸಲಹಾ ಏಜೆನ್ಸಿಯು ಆರ್ಥಿಕ ಬೆಂಬಲ ನೀಡಿದೆ. 1995ರಲ್ಲಿ ಬಾಳೆಹಣ್ಣಿನ ಸಿಪ್ಪೆ ಆಧಾರಿತ ಇಂಧನ ಅನಿಲ ಸ್ಥಾವರ ಸ್ಥಾಪನೆಗೊಂಡಿದೆ. ಆರ್ಥಿಕವಾಗಿ ಬಾಳೆಹಣ್ಣು ಬೆಳೆಯುವ ಭಾರತದ ಪ್ರದೇಶಗಳಲಿ ನಿರುಪಯುಕ್ತವಾಗುವ ಬಾಳೆಹಣ್ಣಿನ ಸಿಪ್ಪೆಯಿಂದ ಇಂಥಹ ಅನಿಲವನ್ನು ಉತ್ಪಾದಿಸುವ
ಯೋಜನೆ ಬಂದರೆ ಇಂಧನದ ಸಮಸ್ಯೆ  ಒಂದಿಷ್ಟು ತೀರಿತು.

****

Tagged:

Leave a Reply

Your email address will not be published. Required fields are marked *

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...

ಮಧುಮಾಸದ ಮೊದಲ ದಿನಗಳು. ಎಲ್ಲಿ ನೋಡಿದರೂ ತಾಯಿಯ ವಿವಿಧ ವಿಲಾಸ……. ಪುಷ್ಪಶೃಂಗಾರ!! ವರ್‍ಣವೈಖರಿ!! ಮಧುಪಾನದಿಂದ ಮೈಮರೆತು ಮೊರೆಯುತಿಹೆ ಉನ್ಮತ್ತ ಭೃಂಗ ಸಂಕುಲದ ಎಣೆಯಿಲ್ಲದ ಪ್ರಣಯ ಕೇಳಿ! ಸಹಸ್ರಸಹಸ್ರ ಖಗಕಂಠಗಳಿಂದೆ ದಿಕ್ಕುದಿಕ್ಕಿಗೆ ಪಸರಿಸುತಿಹ ಸುಮಧುರ ಗಾನ ತರಂಗ...

ಈ ಮಾಹಾತ್ಮ್ಯೆ ಯಾವ ಪುರಾಣದಲ್ಲಿದೆ? ಎಲ್ಲಿ ಯಾರು ಹೇಳಿದ್ದು? ಯಾರು ಕೇಳಿದ್ದು? ಯಾವ ಇಷ್ಟಾರ್ಥಸಿದ್ದಿಗಾಗಿ? ಎಂದೆಲ್ಲ ಪ್ರಶ್ನೆಗಳನ್ನು ನೀವು ಕೇಳಬಹುದು. ಉತ್ತರ ಹೇಳುತ್ತಾ ಹೋದರೆ ಪೀಠಿಕಾ ಪ್ರಕರಣವೇ ಉದ್ದ ಬೆಳೆದು ಮಹಾತ್ಮ್ಯೆಯನ್ನು ಕೇಳುವಷ್ಟರಲ್ಲಿ ನಿಮಗೆ ಹಾಕಳಿಗೆ ತೊಡಗಿ ತೂಕಡ...

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...