Home / ಲೇಖನ / ವಿಜ್ಞಾನ / ನೋವೇ ಇಲ್ಲದ, ಸೂಜಿಯನ್ನು ಬಳಸುವ ಇಂಜೆಕ್ಷನ್

ನೋವೇ ಇಲ್ಲದ, ಸೂಜಿಯನ್ನು ಬಳಸುವ ಇಂಜೆಕ್ಷನ್

ಕೆಲವರಿಗಂತೂ ಇಂಜೆಕ್ಷನ್ ಅಂದರೆ ಹೆದರಿಕೆ. ಅದರಲ್ಲಿಯೂ ಕೆಲವು ವೈದ್ಯರು ನಿರ್ದಾಕ್ಷಿಣ್ಯವಾಗಿ ಸೂಜಿಯನ್ನು ಚುಚ್ಚುವಾಗಿನ ದೃಷ್ಯ ಭೀಕರವಾಗಿರುತ್ತದೆ. ಕೆಲವು ಸಲವಂತೂ ಇಂಜಕ್ಷನ್ ಮಾಡಿಸಿಕೊಂಡ ಸ್ಥಳದಲ್ಲಿ ಸೆಪ್ಪಿಕ್ ಆಗಿ ನರಳಬೇಕಾಗುತ್ತದೆ. ಒಟ್ಟಿನಲ್ಲಿ ಇಂಜಕ್ಷನ್ ಬದಲು ಮಾತ್ರೆಗಳೇ ಸಾಕು, ಎನ್ನುವ ಜನರೇ ಹೆಚ್ಚು. ಈ ಸ್ಥಿತಿಯನ್ಪು ನೋಡಿ ಅಧ್ಯಯನ ಮಾಡಿದ ಆಕ್ಸ್‌ಫರ್ಡ್ನ ಜೀವ ವಿಜ್ಞಾನಿಗಳು ಚುಚ್ಚುಮದ್ದನ್ನು ಪಿಚಕಾರಿ (Syringe) ಯಲ್ಲಿ ಸಿಂಚನಿಸಿ ಔಷಧಿಯನ್ನು ನೋವಿಲ್ಲದಂತೆ ದೇಹದೊಳಕ್ಕೆ ಕಳಿಸುವ ವಿಧಾನವನ್ನು ಕಂಡುಹಿಡಿದಿದ್ದಾರೆ.

ಹಿಂದಿನ ಕಾಲದಲ್ಲಿ ಡಬ್ಬಳದಂತಹ ಚುಚ್ಚುಸೂಜಿಗಳಿದ್ದವು. ಕೆಲವು ದಿನಗಳ ನಂತರ ಉಪಯೋಗಿಸಿ ಎಸೆಯುವ  ದರಿ ಅಕರ್ಷಕವಾಗಿತ್ತು ಆವರಣ ಕಿಂಚಿತ್ತಾದರೂ ನೋವಿನ ಭಯ ಇದ್ದೇ ಇತ್ಪು ಈ ಸಮಸ್ಯೆಗೆ ನೋವಿಲ್ಲದ, ಕ್ಷಣದಲ್ಲಿ ಔಷಧಿಯನ್ನು ಸಿಂಚನದ ಮೂಲಕ ದೇಹದೊಳಕ್ಕೆ ಕಳಿಸುವ ವಿಧಾನವು ಹೊಚ್ಚ ಹೊಸದು ಮತ್ತು  ಧುನಿಕವಾದದ್ದೆಂದು ರೋಗಿಗಳ ಅನುಭವವಾಗಿದೆ.

ಈ ನವೀನ ಪಿಚಕಾರಿಯನ್ನು ಹಿಸುಕಿದ ತಕ್ಷಣ ಅದರೊಳಗೆ ಸಂಕುಚಿತ ‘ಹೀಲಿಯಂ ಅನಿಲ’ ಶಬ್ದಕ್ಕಿಂತಲೂ ಎರಡುಪಟ್ಟು ಮುನ್ನುಗ್ಗಿ (SuperSonic) ಚಿಮ್ಮುತ್ತ ತನ್ನೆದುರಿಗಿನ ಔಷಧಿ (Powdered drug) ಯ ಕೋಣೆ ಹೊಕ್ಕು ಹೊರಗೆ ನೆಗೆಯುತ್ತದೆ. ಎಳ್ಳಷ್ಟು ನೋವಾಗದಂತೆ ಚರ್ಮವನ್ಪು ಬೇಧಿಸಿ ಒಳಸೇರುತ್ತದೆ. ಈ ಸಿಂಚನದೊಂದಿಗೆ ಔಷಧಿಕಣಗಳು ಸೇರಿರುವುದರಿಂದ ದೇಹದೊಳಗೆ ಕ್ರಿಯೆನಡೆಯಿಸಿ ರೋಗಿಗಳನ್ನು ಗುಣಮುಖರನ್ನಾಗಿಸುತ್ತದೆ.
ಈ ಅನಿಲಗಳು ಅತ್ಯಂತ ಹಗುರವಾಗಿದ್ದು ಕಿಂಚಿತ್ತು ನಿರ್ದಿಷ್ಟ ಸ್ಥಳಕ್ಕೆ ನೋವು ಆಗುವುದೇ ಇಲ್ಲ. ಈ ಪಿಚಕಾರಿಯಲ್ಲಿ ಬಳಸುವ ಔಷಧಿ ಪುಡಿ ರೂಪದಲ್ಲಿರುವ ಔಷಧಿಯ ಬೆಲೆಯೂ ಕೂಡ ಕಡಿಮೆಯಾಗುತ್ತೆದೆ. ಬಾಳಿಕೆ ಬರುತ್ತೆದೆಂದು ವಿಜ್ಞಾನಿಗಳು ಹೇಳುತ್ತಾರೆ.

ಮೊದಲಿನ ಸೂಜಿ ಪಿಚಕಾರಿ ಬಳಸಿದಾಗ ಕೆಲ ಅಂಶ ಗಾಳಿಯು ರಕ್ಲದೊಳಗೆ ಹೋಗಿ ಅಪಾಯ ಮಾಡುವ ಸಂದರ್ಭಗಳಿವೆ. ಆದರೆ ಈ “ಅನಿಲ ಸಿಂಚನ ಪಿಚಕಾರಿ” ಇಂಥಹ ಅಪಾಯವನ್ನು ಮಾಡಲಾರದು. ವೈದ್ಯಕೀಯ ವಿಜ್ಞಾನಕ್ಕೊಂದು ಇದು ಹೊಸ ಸೇರ್ಪಡೆ ಮತ್ತು ನೊವಿವಿಲ್ಲದೇ ರೋಗಿಗಳು ಗುಣಮುಖರಾಗುವುದು ಸ್ತುತ್ಯಾರ್ಹವಾಗಿದೆ.
****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...