Home / ಲೇಖನ / ವಿಜ್ಞಾನ / ನೋವೇ ಇಲ್ಲದ, ಸೂಜಿಯನ್ನು ಬಳಸುವ ಇಂಜೆಕ್ಷನ್

ನೋವೇ ಇಲ್ಲದ, ಸೂಜಿಯನ್ನು ಬಳಸುವ ಇಂಜೆಕ್ಷನ್

ಕೆಲವರಿಗಂತೂ ಇಂಜೆಕ್ಷನ್ ಅಂದರೆ ಹೆದರಿಕೆ. ಅದರಲ್ಲಿಯೂ ಕೆಲವು ವೈದ್ಯರು ನಿರ್ದಾಕ್ಷಿಣ್ಯವಾಗಿ ಸೂಜಿಯನ್ನು ಚುಚ್ಚುವಾಗಿನ ದೃಷ್ಯ ಭೀಕರವಾಗಿರುತ್ತದೆ. ಕೆಲವು ಸಲವಂತೂ ಇಂಜಕ್ಷನ್ ಮಾಡಿಸಿಕೊಂಡ ಸ್ಥಳದಲ್ಲಿ ಸೆಪ್ಪಿಕ್ ಆಗಿ ನರಳಬೇಕಾಗುತ್ತದೆ. ಒಟ್ಟಿನಲ್ಲಿ ಇಂಜಕ್ಷನ್ ಬದಲು ಮಾತ್ರೆಗಳೇ ಸಾಕು, ಎನ್ನುವ ಜನರೇ ಹೆಚ್ಚು. ಈ ಸ್ಥಿತಿಯನ್ಪು ನೋಡಿ ಅಧ್ಯಯನ ಮಾಡಿದ ಆಕ್ಸ್‌ಫರ್ಡ್ನ ಜೀವ ವಿಜ್ಞಾನಿಗಳು ಚುಚ್ಚುಮದ್ದನ್ನು ಪಿಚಕಾರಿ (Syringe) ಯಲ್ಲಿ ಸಿಂಚನಿಸಿ ಔಷಧಿಯನ್ನು ನೋವಿಲ್ಲದಂತೆ ದೇಹದೊಳಕ್ಕೆ ಕಳಿಸುವ ವಿಧಾನವನ್ನು ಕಂಡುಹಿಡಿದಿದ್ದಾರೆ.

ಹಿಂದಿನ ಕಾಲದಲ್ಲಿ ಡಬ್ಬಳದಂತಹ ಚುಚ್ಚುಸೂಜಿಗಳಿದ್ದವು. ಕೆಲವು ದಿನಗಳ ನಂತರ ಉಪಯೋಗಿಸಿ ಎಸೆಯುವ  ದರಿ ಅಕರ್ಷಕವಾಗಿತ್ತು ಆವರಣ ಕಿಂಚಿತ್ತಾದರೂ ನೋವಿನ ಭಯ ಇದ್ದೇ ಇತ್ಪು ಈ ಸಮಸ್ಯೆಗೆ ನೋವಿಲ್ಲದ, ಕ್ಷಣದಲ್ಲಿ ಔಷಧಿಯನ್ನು ಸಿಂಚನದ ಮೂಲಕ ದೇಹದೊಳಕ್ಕೆ ಕಳಿಸುವ ವಿಧಾನವು ಹೊಚ್ಚ ಹೊಸದು ಮತ್ತು  ಧುನಿಕವಾದದ್ದೆಂದು ರೋಗಿಗಳ ಅನುಭವವಾಗಿದೆ.

ಈ ನವೀನ ಪಿಚಕಾರಿಯನ್ನು ಹಿಸುಕಿದ ತಕ್ಷಣ ಅದರೊಳಗೆ ಸಂಕುಚಿತ ‘ಹೀಲಿಯಂ ಅನಿಲ’ ಶಬ್ದಕ್ಕಿಂತಲೂ ಎರಡುಪಟ್ಟು ಮುನ್ನುಗ್ಗಿ (SuperSonic) ಚಿಮ್ಮುತ್ತ ತನ್ನೆದುರಿಗಿನ ಔಷಧಿ (Powdered drug) ಯ ಕೋಣೆ ಹೊಕ್ಕು ಹೊರಗೆ ನೆಗೆಯುತ್ತದೆ. ಎಳ್ಳಷ್ಟು ನೋವಾಗದಂತೆ ಚರ್ಮವನ್ಪು ಬೇಧಿಸಿ ಒಳಸೇರುತ್ತದೆ. ಈ ಸಿಂಚನದೊಂದಿಗೆ ಔಷಧಿಕಣಗಳು ಸೇರಿರುವುದರಿಂದ ದೇಹದೊಳಗೆ ಕ್ರಿಯೆನಡೆಯಿಸಿ ರೋಗಿಗಳನ್ನು ಗುಣಮುಖರನ್ನಾಗಿಸುತ್ತದೆ.
ಈ ಅನಿಲಗಳು ಅತ್ಯಂತ ಹಗುರವಾಗಿದ್ದು ಕಿಂಚಿತ್ತು ನಿರ್ದಿಷ್ಟ ಸ್ಥಳಕ್ಕೆ ನೋವು ಆಗುವುದೇ ಇಲ್ಲ. ಈ ಪಿಚಕಾರಿಯಲ್ಲಿ ಬಳಸುವ ಔಷಧಿ ಪುಡಿ ರೂಪದಲ್ಲಿರುವ ಔಷಧಿಯ ಬೆಲೆಯೂ ಕೂಡ ಕಡಿಮೆಯಾಗುತ್ತೆದೆ. ಬಾಳಿಕೆ ಬರುತ್ತೆದೆಂದು ವಿಜ್ಞಾನಿಗಳು ಹೇಳುತ್ತಾರೆ.

ಮೊದಲಿನ ಸೂಜಿ ಪಿಚಕಾರಿ ಬಳಸಿದಾಗ ಕೆಲ ಅಂಶ ಗಾಳಿಯು ರಕ್ಲದೊಳಗೆ ಹೋಗಿ ಅಪಾಯ ಮಾಡುವ ಸಂದರ್ಭಗಳಿವೆ. ಆದರೆ ಈ “ಅನಿಲ ಸಿಂಚನ ಪಿಚಕಾರಿ” ಇಂಥಹ ಅಪಾಯವನ್ನು ಮಾಡಲಾರದು. ವೈದ್ಯಕೀಯ ವಿಜ್ಞಾನಕ್ಕೊಂದು ಇದು ಹೊಸ ಸೇರ್ಪಡೆ ಮತ್ತು ನೊವಿವಿಲ್ಲದೇ ರೋಗಿಗಳು ಗುಣಮುಖರಾಗುವುದು ಸ್ತುತ್ಯಾರ್ಹವಾಗಿದೆ.
****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...