Home / ಲೇಖನ / ವಿಜ್ಞಾನ / ಮೂಗಿನ ಮೂಲಕ ಮೆದುಳಿನ ಶಸ್ತ್ರ ಚಿಕಿತ್ಸೆ !?

ಮೂಗಿನ ಮೂಲಕ ಮೆದುಳಿನ ಶಸ್ತ್ರ ಚಿಕಿತ್ಸೆ !?

ಮೆದುಳು ಮನುಷ್ಯನಿಗೆ ಅತ್ಯಮೂಲ್ಯ ವಸ್ತು ಇದರಿಂದಲೇ ಇಡೀ ದೇಹದ ಸೂತ್ರ
ಸಂಹನ ಕ್ರಿಯೆ ನಡೆಯುತ್ತದೆ. ಸೂಕ್ಷ್ಮತೆಯಿಂದಲೂ ಅಷ್ಟೇ ಪ್ರಧಾನವಾದ ಮೆದುಳನ್ನು
ನೈಸರ್ಗಿಕವಾಗಿಯೆ ತಲೆಬುರುಡೆ ರಕ್ಷಿಸುತ್ತದೆ. ತಲೆ ಚಿಪ್ಪಿನೊಳಗೆ ಇರುವ ಮಿದುಳಿಗೆ ಏನಾದರೂ
ಘಾಸಿಯಾದಾಗ ಇದುವರೆಗೆ ಅದರೊಂದಿಗೆ ಸಂಪರ್ಕ ಹೊಂದುವುದು ಬಹಳ ಕಷ್ಟವಿತ್ತು
ಚಿಪ್ಪಿನ ಮೂಲಕ ಅಪರೇಷನ್ ಮಾಡಲು ಸಾಧ್ಯವಿರಲಿಲ್ಲ. ಇದೀಗ ಮೂಗಿನ ಮೂಲಕ
ಅಸ್ತ್ರಗಳನ್ನು ತೂರಿಸಿ ಮೆದುಳಿನ ತೊಂದರೆಗಳನ್ನು ನಾಶಮಾಡಬಹುದೆಂದು ದಿಲ್ಲಿಯ
ಇಂದ್ರಪ್ರಸ್ತ ಅಪೋಲೋ ಅಸ್ಟತ್ರೆಯ ಡಾ|| ವಿಜಯಕುಮಾರ್ ಮತ್ತು ತಂಡದವರು
ಕಂಡುಹಿಡಿದಿದ್ದಾರೆ.

ಮೂಗಿನ ಮೂಲಕ ಮೆದುಳನ್ನು ತಲುಪಿ ಶಸ್ತ್ರ ಚಿಕಿತ್ಸೆ ನಡೆಸುವ ಈ ತಂತ್ರದಲ್ಲಿ
ರಕ್ತಸ್ರಾವವಾಗಲಾರದೆಂದು ಡಾ|| ವಿಜಯಕುಮಾರ್ ತಿಳಿಸುತ್ತಾರೆ. ನೇಸನ್ ಎಂಡೋಸ್ಕೋಪಿ
ಅಥವಾ ಮೂಗಿನ ಮೂಲಕದ ಶಸ್ತ್ರಚಿಕಿತ್ಸಾ ವಿಧಾನದಿಂದ ಮೆದುಳಿನ ಯಾವ
ಭಾಗವನ್ನಾದರೂ ತಲುಪಬಹುದು. ಆದರೆ  ಮಿದುಳಿನ ಶಸ್ತ್ರ ಚಿಕಿತ್ಸೆಯಿಂದ
ಮಿದುಳಿನ ಕೆಳಭಾಗದಲ್ಲಿರುವ ಪಿಟ್ಯೂಟರಿ ಗ್ರಂಥಿಯವನ್ನು ತಲುಪಲು ಸಾಧ್ಯವಾಗುವುದಿಲ್ಲ

ಕೇವಲ 4 ಮೀಟರ್ ಉದ್ದನೆಯ ಹಗುರವಾದ ತಂತಿಯ ಮೂಲಕ ಈ ಎಲ್ಲ ಶಸ್ತ್ರ
ಚಿಕಿತ್ಸೆಯನ್ನು ನಡೆಸಲಾಗುವುದು. ಇದು ಮೂಗನ್ನು ಪ್ರವೇಶಿಸಿದಾಗ ಈ ಭಾಗದಸಂಪೂರ್ಣ
ಚಿತ್ರವು ಗಣಕಯಂತ್ರ (ಕಂಪ್ಯೂಟರ್) ನಲ್ಲಿ ಕಾಣುತ್ತದೆ. ಈ ಕಂಪ್ಯೂಟರ್ ಮೇಲೆ ಕಾಣುವ
ಚಿತ್ರದ ಸಹಾಯದಿಂದ ಎಲ್ಲವನ್ನು ಪರಿಗ್ರಹಿಸುತ್ತ ಮೆದುಳಿನ ಭಾಗವನ್ನು ಪ್ರವೇಶಿಸಿ ಅದರಲ್ಲಿ
ಏನಾದರೂ ಏರುಪೇರಾಗಿದ್ದರೆ ಆ ತಂತಿಯ ತುದಿಯಲ್ಲಿರುವ ಚಿಕಿತ್ಸಕ ಘಟಕದಿಂದ
ಪರಿಹರಿಸಲಾಗುತ್ತದೆ. ಇದರ ಬಗೆಗೆ ಸಂಶೋಧನೆಗಳು  ದೇಶಗಳಲ್ಲಿ ನಡೆದು ‘ಯಶಸ್ವಿ
ಚಿಕಿತ್ಸೆ’ ಎಂದು ಹೇಳಿದೆ ಮೆದುಳಿನ ದ್ರವಸೋರಿಕೆಗೆ ಮತ್ತು ಕೆಲವೊಂದು ಭಾಗದ ಶಸ್ತ್ರ
ಚಿಕಿತ್ಸೆಗಾಗಿ ಇದನ್ನು ಬಳಸಲಾಗುತ್ತದೆ.
****

Tagged:

Leave a Reply

Your email address will not be published. Required fields are marked *

ಭಾಗ ೧ ಒಂದು ಯುನಿವರ್ಸಿಟೀನಲ್ಲಿ ಆಧ್ಯಾಪಕನಾಗಿರುವ ನಾನು ಕ್ಯಾಂಪಸ್ ಆವರಣದೊಳಗೇ ಇರುವ ಫ್ಲಾಟೊಂದರಲ್ಲಿ ಹೆಂಡತಿ ಮಕ್ಕಳ ಜತೆ ಮನೆ ಮಾಡಿಕೊಂಡಿದ್ದೇನೆ. ಮನೆ ಮತ್ತು ಆಫೀಸಿಗೆ ಹೆಚ್ಚೇನೂ ದೂರವಿಲ್ಲದ ಕಾರಣ ವಾಹನಗಳಿಗೆ ವೃಥಾ ಕಾಸು ಖರ್ಚು ಮಾಡಬೇಕಾದುದಿಲ್ಲ. ಮಧ್ಯಾಹ್ನ ಲಂಚಿಗೆ ಕೂಡ ಮನ...

ಬಣಸಾಲೆ ಮುಂದಿನಿಂದ ಹೆಜ್ಜೆ ಹಾಕುವಾಗ ಹೊತ್ತು ಕಂತಿದ್ದು ಲಕ್ಷ್ಯಕ್ಕೆ ಬಂದಿರಲಿಲ್ಲ. ಆಚೀಚಿನ ಹನೆಮರದೆತ್ತರದ ತೇಗ-ಮಾವುಗಳ ಟಿಸಿಲುಗಳಲ್ಲಿ ಹಕ್ಕಿಗಳ ಗರಿ ಒದರುವ ಸರಪರ. ತಾರಕ ಸ್ವರದ ಮಕ್ಕಳಾಟ ವೀಕ್ಷಿಸುತ್ತಾ ರಸ್ತೇಲಿ ಬಿದ್ದಿದ್ದ ಸಣ್ಣ ಸಣ್ಣ ಕಲ್ಲುಗಳನ್ನು ಕಾಲಿನಿಂದ ಚಿಮ್ಮುತ್ತಾ...

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...