Home / ಲೇಖನ / ವಿಜ್ಞಾನ / ಮೂಗಿನ ಮೂಲಕ ಮೆದುಳಿನ ಶಸ್ತ್ರ ಚಿಕಿತ್ಸೆ !?

ಮೂಗಿನ ಮೂಲಕ ಮೆದುಳಿನ ಶಸ್ತ್ರ ಚಿಕಿತ್ಸೆ !?

ಮೆದುಳು ಮನುಷ್ಯನಿಗೆ ಅತ್ಯಮೂಲ್ಯ ವಸ್ತು ಇದರಿಂದಲೇ ಇಡೀ ದೇಹದ ಸೂತ್ರ
ಸಂಹನ ಕ್ರಿಯೆ ನಡೆಯುತ್ತದೆ. ಸೂಕ್ಷ್ಮತೆಯಿಂದಲೂ ಅಷ್ಟೇ ಪ್ರಧಾನವಾದ ಮೆದುಳನ್ನು
ನೈಸರ್ಗಿಕವಾಗಿಯೆ ತಲೆಬುರುಡೆ ರಕ್ಷಿಸುತ್ತದೆ. ತಲೆ ಚಿಪ್ಪಿನೊಳಗೆ ಇರುವ ಮಿದುಳಿಗೆ ಏನಾದರೂ
ಘಾಸಿಯಾದಾಗ ಇದುವರೆಗೆ ಅದರೊಂದಿಗೆ ಸಂಪರ್ಕ ಹೊಂದುವುದು ಬಹಳ ಕಷ್ಟವಿತ್ತು
ಚಿಪ್ಪಿನ ಮೂಲಕ ಅಪರೇಷನ್ ಮಾಡಲು ಸಾಧ್ಯವಿರಲಿಲ್ಲ. ಇದೀಗ ಮೂಗಿನ ಮೂಲಕ
ಅಸ್ತ್ರಗಳನ್ನು ತೂರಿಸಿ ಮೆದುಳಿನ ತೊಂದರೆಗಳನ್ನು ನಾಶಮಾಡಬಹುದೆಂದು ದಿಲ್ಲಿಯ
ಇಂದ್ರಪ್ರಸ್ತ ಅಪೋಲೋ ಅಸ್ಟತ್ರೆಯ ಡಾ|| ವಿಜಯಕುಮಾರ್ ಮತ್ತು ತಂಡದವರು
ಕಂಡುಹಿಡಿದಿದ್ದಾರೆ.

ಮೂಗಿನ ಮೂಲಕ ಮೆದುಳನ್ನು ತಲುಪಿ ಶಸ್ತ್ರ ಚಿಕಿತ್ಸೆ ನಡೆಸುವ ಈ ತಂತ್ರದಲ್ಲಿ
ರಕ್ತಸ್ರಾವವಾಗಲಾರದೆಂದು ಡಾ|| ವಿಜಯಕುಮಾರ್ ತಿಳಿಸುತ್ತಾರೆ. ನೇಸನ್ ಎಂಡೋಸ್ಕೋಪಿ
ಅಥವಾ ಮೂಗಿನ ಮೂಲಕದ ಶಸ್ತ್ರಚಿಕಿತ್ಸಾ ವಿಧಾನದಿಂದ ಮೆದುಳಿನ ಯಾವ
ಭಾಗವನ್ನಾದರೂ ತಲುಪಬಹುದು. ಆದರೆ  ಮಿದುಳಿನ ಶಸ್ತ್ರ ಚಿಕಿತ್ಸೆಯಿಂದ
ಮಿದುಳಿನ ಕೆಳಭಾಗದಲ್ಲಿರುವ ಪಿಟ್ಯೂಟರಿ ಗ್ರಂಥಿಯವನ್ನು ತಲುಪಲು ಸಾಧ್ಯವಾಗುವುದಿಲ್ಲ

ಕೇವಲ 4 ಮೀಟರ್ ಉದ್ದನೆಯ ಹಗುರವಾದ ತಂತಿಯ ಮೂಲಕ ಈ ಎಲ್ಲ ಶಸ್ತ್ರ
ಚಿಕಿತ್ಸೆಯನ್ನು ನಡೆಸಲಾಗುವುದು. ಇದು ಮೂಗನ್ನು ಪ್ರವೇಶಿಸಿದಾಗ ಈ ಭಾಗದಸಂಪೂರ್ಣ
ಚಿತ್ರವು ಗಣಕಯಂತ್ರ (ಕಂಪ್ಯೂಟರ್) ನಲ್ಲಿ ಕಾಣುತ್ತದೆ. ಈ ಕಂಪ್ಯೂಟರ್ ಮೇಲೆ ಕಾಣುವ
ಚಿತ್ರದ ಸಹಾಯದಿಂದ ಎಲ್ಲವನ್ನು ಪರಿಗ್ರಹಿಸುತ್ತ ಮೆದುಳಿನ ಭಾಗವನ್ನು ಪ್ರವೇಶಿಸಿ ಅದರಲ್ಲಿ
ಏನಾದರೂ ಏರುಪೇರಾಗಿದ್ದರೆ ಆ ತಂತಿಯ ತುದಿಯಲ್ಲಿರುವ ಚಿಕಿತ್ಸಕ ಘಟಕದಿಂದ
ಪರಿಹರಿಸಲಾಗುತ್ತದೆ. ಇದರ ಬಗೆಗೆ ಸಂಶೋಧನೆಗಳು  ದೇಶಗಳಲ್ಲಿ ನಡೆದು ‘ಯಶಸ್ವಿ
ಚಿಕಿತ್ಸೆ’ ಎಂದು ಹೇಳಿದೆ ಮೆದುಳಿನ ದ್ರವಸೋರಿಕೆಗೆ ಮತ್ತು ಕೆಲವೊಂದು ಭಾಗದ ಶಸ್ತ್ರ
ಚಿಕಿತ್ಸೆಗಾಗಿ ಇದನ್ನು ಬಳಸಲಾಗುತ್ತದೆ.
****

Tagged:

Leave a Reply

Your email address will not be published. Required fields are marked *

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...