Home / ಲೇಖನ / ವಿಜ್ಞಾನ / ಮಣ್ಣುತಿನ್ನುವುದು ಆರೋಗ್ಯಕ್ಕೆ ಹಿತಕರ

ಮಣ್ಣುತಿನ್ನುವುದು ಆರೋಗ್ಯಕ್ಕೆ ಹಿತಕರ

“ಸಾಮಾನ್ಯವಾಗಿ ತಪ್ಪು ಮಾಡಿದ್ದರೆ ಮಣ್ಣುತಿನ್ನು ಹೋಗು” ಎಂದು ಉಡಾಫೆಯಾಗಿ ಹೇಳುವ ಜನರಿದ್ಧಾರೆ. ಒಂದರ್ಥದಲ್ಲಿ ಇದು ತಿನ್ನಲು ಯೋಗ್ಯವಲ್ಲದ್ದು ಎಂದೇ ಭಾವನೆ. ಅಥವಾ ಮಣ್ಣನ್ನು ಯಾರು ತಿನ್ನಲಾರರೆಂದೇ ಜನರ ನಂಬಿಕೆ. ಆದರೆ ಇತತ್ತೀಚಿನ ವೈಜ್ಞಾನಿಕ ಪ್ರಯೋಗಗಳ ಪ್ರಕಾರ ಮಣ್ಣು ಒಂದು ಆರೋಗ್ಯವರ್ಧಕ ಪದಾರ್ಥವೆಂದು ದೃಢಪಟ್ಟದೆ. ಇದರಲ್ಲಿ ಅನೇಕ ಪೌಷ್ಟಿಕಾಂಶಗಳು ಇವೆ; ಎಂದು ಸಾಬೀತಾದ ಮಾತು. ಕೆನಡಾದ ಇಬ್ಬರು ವಿಜ್ಞಾನಿಗಳು ಉತ್ತರಕೆರೋಲಿನಾ, ಚೀನಾ ಮತ್ತು ಜಿಂಬಾಬ್ವೆಯಲ್ಲಿ ಕೈಕೊಂಡ ಅಧ್ಯಯನದಿಂದ ಕಂಡು ಕೊಂಡಿದ್ದಾರೆ. ಶುದ್ದವಾದ ಹಳೆಯ ಮಣ್ಣು ಉತ್ತಮ ವಸ್ತುವೆಂದು ಸಂಶೋಧಕರ ಲ್ಲೊಬ್ಬರಾದ ಸುಸಾನ್ ಔಪ್ರೀಟರ್ ತಿಳಿಸುತ್ತಾರೆ. ಅದರಲ್ಲೂ ಭೂಮಿಯೊಳಗಿನ ಮಣ್ಣು ಕಬ್ಬಿಣ ಮತ್ತು ಅಯೋಡಿನ್‌ಗಳಿಂದ ಸಮೃದ್ಧವಾಗಿದ್ದರಿಂದ ಮಕ್ಕಳು ಮತ್ತು ಗರ್ಭಿಣಿಯರು ಉಪಯೋಗಿಸುತ್ತಾರೆ. ಅದರಲ್ಲೂ ಗರ್ಭಿಣಿಯರಿಗೆ ಈ ಮಣ್ಣು ಉತ್ತವು ಪೋಷಕಾಂಶ
ವೆಂದೂ ಅವರು ಹೇಳುತ್ತಾರೆ. (ವರದಿ : ಡ್ಯಾನ್‌ಬರಿ ಅಮೇರಿಕಾ ಅ. 26-1997)

ರೋಮನ್ನರು ಮಣ್ಣು ಮತ್ತು ಆಡಿನ ರಕ್ತವನ್ನು ಸೇರಿಸಿ ಮಾತ್ರೆಗಳನ್ನು ಮಾಡಿ ಉಪಯೋಗಿಸುತ್ತಿದ್ದರು. ಕಳೆದ ಶತಮಾನದಲ್ಲಿ ಜರ್ಮನ್ನರು ಬ್ರೆಡ್ಡಿನೊಂದಿಗೆ ಬೆಣ್ಣೆಯ ಬದಲು ಮಣ್ಣನ್ನು ಉಪಯೋಗಿಸುತ್ತಿದ್ದರಂತೆ. ಆಫ್ರಿಕಾದಲ್ಲಿ ಅಜೀರ್ಣವಾದವರಿಗೆ ಈ ಮಣ್ಣನ್ನೇ ಔಷಧಿಯನ್ನಾಗಿ ತಿನ್ನಲು ಕೊಡುತ್ತಾರೆ. ಈ ಮಣ್ಣಿನ ಸೇವನೆಯಲ್ಲಿ  ಉಪಕಾರಿಯಾಗಬಲ್ಲ ಅಂಶಗಳ ಬಗ್ಗೆ ಕೂಲಂಕುಷವಾಗಿ ಮನಗಾಣಲು ಟೋರಾಂಟೋ ವಿ. ವಿ. ಯ ಪ್ರಯೋಗಾಲಯದ ವಿಶ್ಲೇಷಕಿ ಡಾ|| ಸೂಸನ್ ಮತ್ತು ಯಾಕ್೯ ವಿ. ವಿ.ಯ ಪ್ರೊ.ವಿಲಿಯಂ ಮ್ಯಾಹನಿ ಅವರು ಅನೇಕ ಪ್ರಯೋಗ ನಡೆಯಿಸಿ ಒಪ್ಪಿಕೊಂಡರು. ಚೀನಾದ ಹುನಾನ್ ಪ್ರಾಂತ್ಯದ ಹಳದಿ ಮಿಶ್ರಿತ ಮೆದು ಮಣ್ಣಿನಲ್ಲಿ ಕಬ್ಬಿಣ, ಕ್ಯಾಲ್ಪಿಯಂ, ಮೆಗ್ಲೀಶಿಯಂ, ಪೊಟ್ಯಾಶಿಯಂ ಮತ್ತು ಇತರ ಖನಿಜಗಳಿವೆ. ಜಿಂಬಾಬ್ವೆಯ ಕೆಲವು ಮಣ್ಣಿನಲ್ಲಿ ಲಿನೈಟ್ ಪೌಷ್ಠಿಕಾಂಶ ಇರುವುದಾಗಿ ವಿಜ್ಞಾನಿಗಳು ತಿಳಿಸುತ್ತಾರೆ. ಮಣ್ಣಿನಿಂದಲೇ ನಮ್ಮನ್ನು ರಕ್ಷಿಸುವ ಬೆಳೆಗಳು ಬೆಳೆಯುತ್ತವೆ. ನೀರು, ಖನಿಜಗಳು ದೊರೆಯುತ್ತವೆ. ಜೀವರಕ್ಷಕ ವಿಟ್ಯಾಮಿನ್‌ಗಳು ಈ ಮಣ್ಣಿನಲ್ಲಿ ಇರುವುದರಿಂದಲೇ ಜೀವೋದ್ಭವ- ವಾಗುತ್ತದೆ. ಆದರೆ ಮಣ್ಣು ಕೊಳಕು ಪದಾರ್ಥವೆಂದು ಮಣ್ಣಿನ ಬದಲಾಗಿ ಜೀವರಕ್ಷಕ ಬೆಳೆಗಳ ಆಹಾರವಿರುವಾಗ ಬಹುತೇಕ ಜನ ತಿನ್ನುವುದಿಲ್ಲ ಮತ್ತು ಉದರದೊಳಗಿನ ನರಮಲಡಗಳ ತಂತುಗಳಲ್ಲಿ ಮುಣ್ಣು ಲೇಪನಗೊಂಡು
ನರಮಂಡಲದ ಕ್ರಿಯಾಶೀಲತೆಗೆ ತೊಡಕಾಗಲೂ ಬಹುದೆಂದು ಕೆಲವರ ಅಭಿಪ್ರಾಯ, ಆದ್ದರಿಂದ ಬಹುತೇಕ ಜನ ಮಣ್ಣು ತಿನ್ನಲಾರರು. ಒಂದು ವೇಳೆ ತಿಂದರೆ ಕೆಟ್ಟದ್ದೇನಲ್ಲ ಅಪಾಯಕಾರಿಯಾಗಲಾರದು.
*****

Tagged:

Leave a Reply

Your email address will not be published. Required fields are marked *

ತೆಂಕಣದಿ ಹದಿನಾರು ಮೈಲಿಗಳಾಚಿ ಬಾಂದಳಕೆ ಭುಜಗೊಟ್ಟು ನಿಂತಿರುವ ಸಿಂಹಗಡವೇ-ಇದೋ ನಿನಗೆ ತಲೆಬಾಗುವೆನು. ಶತಮಾನಗಳ ಹಿಂದೆ, ನರಜಾತಿಯಲಿ ಹರಿಯಂತೆ ಮೆರೆದ ವೀರಲೀಲಾಲೋಲ ಶಿವಪ್ರಭುವನು ಶಿರದಲಿ ಹೊತ್ತು ಮೆರೆಯಿಸಿದ ಸಿಂಹಗಡವೇ ಇದೋ-ನಿನಗೆ ವಂದಿಸುವೆನು. ಅಂದು ನಮ್ಮ ನಾಡಿನ ಧರ್‍ಮ-ನಮ್ಮ ಹ...

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...