Home / ಲೇಖನ / ವಿಜ್ಞಾನ / ಬಹುರೂಪಿ ಉಪಯೋಗದ ಭತ್ತದ ಹೊಟ್ಟು

ಬಹುರೂಪಿ ಉಪಯೋಗದ ಭತ್ತದ ಹೊಟ್ಟು

ವಿಜ್ಞಾನ ಅವಿಷ್ಕಾರಗೊಂಡಂತೆ ನಿರುಪಯುಕ್ತ ವಸ್ತುಗಳಿಂದಲೂ ಕೂಡ ಹೊಸವಸ್ತುವನ್ನು ನಿರ್ಮಾಣ ಮಾಡುವ ಪ್ರಯೋಗಗಳು ನಡೆಯುತ್ತಲಿದೆ. ನಿರುಪಯುಕ್ತ ವಸ್ತುಗಳಾದ ಕಸ, ಕಡ್ಡಿ ಎಲೆ, ಸಿಪ್ಪೆಗಳಿಂದ ಅನೇಕ ವಸ್ತುಗಳನ್ನು ತಯಾರಿಸಲಾಗುತ್ತವೆ. ಇದರಂತೆ ವಿಜ್ಞಾನಿಗಳು ಭತ್ತದ ಸಿಪ್ಪೆಯ ಬೂದಿಯನ್ನು ಬಳಸಿ ಅಮೂಲ್ಯ ವೈವಿಧ್ಯ ವಸ್ತು- ಗಳನ್ನು, ಉಪಯೋಗಗಳನ್ನು ಕಂಡು ಹಿಡಿದಿದ್ದಾರೆ. ಈ ಭತ್ತದ ಬೂದಿಯಿಂದ ಉತ್ಕೃಷ್ಠಗುಣಮಟ್ಟದ ಸಿಮೆಂಟ್ ತಯಾರಿಸಲು ವಿಜ್ಞಾನಿಗಳು ಪ್ರಯತ್ನ ನಡೆಸಿದ್ದಾರೆ. ಈಗಾಗಲೇ ಬಳಕೆಯಲ್ಲಿರುವ ಇಂತಹ ಭತ್ತದ ಸಿಪ್ಪೆಯ ಬೂದಿ ಆಧಾರಿತ ಸಿಮೆಂಟ್ ಸಾಧಾರಣ ಸಿಮೆಂಟಿಗಿಂತಲೂ ಶ್ರೇ‍ಷ್ಠಮಟ್ಟದ್ದೆಂದು ತಿಳಿದು ಬರಿದಿದೆ. ಭತ್ತದ ಸಿಪ್ಪೆಯ ಬೂದಿಯು ಕಾಂಕ್ರಿಟ್ ತಂತ್ರಜ್ಞಾನದಲ್ಲಿಯೇ ಹೊಸಶಾಖೆಯೊಂದನ್ನು ತೆರೆದಿದೆ ಮಾತ್ರವಲ್ಲ “ಬಹುಪಯೋಗಿ” ಎಂದು ಖಚಿತವಾಗುತ್ತಲಿದೆ. ಸಿಮೆಂಟಿನಂತಹ ಪುಡಿರೂಪದ ವಸ್ತು ಅಷ್ಟೇ ಅಲ್ಲದೇ ಹೊಸ ನಮೂನೆಯ ಇಟ್ಟಗೆಗಳ ತಯಾರಿಕೆಯಲ್ಲಿಯೂ ಭತ್ತದ ಸಿಪ್ಪೆಯ ಬೂದಿಯನ್ನು ಬಳಸಲಾಗುತ್ತದೆ. ಕಾಂಕ್ರೀಟ್ ರಸ್ತೆನಿರ್ಮಾಣ ಕಾರ್ಯ- ದಲ್ಲಿಯೂ ಇಂತಹ ಭತ್ತದ ಸಿಪ್ಪೆಯ ಬೂದಿಯನ್ನು ಬಳಸಿಕೊಳ್ಳಬಹುದೆಂದು ಪ್ರಯೋಗಗಳಿಂದ ಕಂಡುಹಿಡಿಯ- ಲಾಗಿದೆ. ದಿನನಿತ್ಯ ಮನೆ ಮತ್ತು ಹೋಟೆಲ್‌ಗಳಲ್ಲಿ ಭತ್ತವನ್ನು ಸುಟ್ಟು ಬೂದಿಯಾದ ನಂತರ ನಿರುಪಯುಕ್ತವೆಂದು ಬಿಸಾಕುತ್ತಾರೆ. ಬಹುತೇಕ ಭತ್ತಕುಟ್ಟುವ ಯಂತ್ರಗಳು ಉಗುಳಿದ ಹೊಟ್ಟನ ರಾಶಿಯನ್ನು ತಿಪ್ಪೆಗೆಸೆಯುತ್ತಾರೆ. ಅಥವಾ ಬಿಸಾಕುತ್ತಾರೆ. ಅತ್ಯಂತ ಉಪಯುಕ್ತವಾಗುವ ಈ ಭತ್ತದ ಹೊಟ್ಟನಿಂದಾಗುವ ಉಪಯೋಗಗಳನ್ನು ತಿಳಿದು ಸದುಪಯೋಗಪಡಿಸಿಕೊಳ್ಳಬೇಕಿದೆ. ಅಥವಾ ಇಂತಹ ತಂತ್ರಜ್ಞಾನ ಇರುವಲ್ಲಿಗೆ ಭತ್ತದ ಹೊಟ್ಟನ ಲೋಡುಗಳನ್ನು ಸಾಗಾಣಿಕೆ ಮಾಡಿ ಅದರಿಂದಲೂ ಹಣಗಳಿಸಬಹುದು.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...