Home / ಲೇಖನ / ವಿಜ್ಞಾನ / ಬಹುರೂಪಿ ಉಪಯೋಗದ ಭತ್ತದ ಹೊಟ್ಟು

ಬಹುರೂಪಿ ಉಪಯೋಗದ ಭತ್ತದ ಹೊಟ್ಟು

ವಿಜ್ಞಾನ ಅವಿಷ್ಕಾರಗೊಂಡಂತೆ ನಿರುಪಯುಕ್ತ ವಸ್ತುಗಳಿಂದಲೂ ಕೂಡ ಹೊಸವಸ್ತುವನ್ನು ನಿರ್ಮಾಣ ಮಾಡುವ ಪ್ರಯೋಗಗಳು ನಡೆಯುತ್ತಲಿದೆ. ನಿರುಪಯುಕ್ತ ವಸ್ತುಗಳಾದ ಕಸ, ಕಡ್ಡಿ ಎಲೆ, ಸಿಪ್ಪೆಗಳಿಂದ ಅನೇಕ ವಸ್ತುಗಳನ್ನು ತಯಾರಿಸಲಾಗುತ್ತವೆ. ಇದರಂತೆ ವಿಜ್ಞಾನಿಗಳು ಭತ್ತದ ಸಿಪ್ಪೆಯ ಬೂದಿಯನ್ನು ಬಳಸಿ ಅಮೂಲ್ಯ ವೈವಿಧ್ಯ ವಸ್ತು- ಗಳನ್ನು, ಉಪಯೋಗಗಳನ್ನು ಕಂಡು ಹಿಡಿದಿದ್ದಾರೆ. ಈ ಭತ್ತದ ಬೂದಿಯಿಂದ ಉತ್ಕೃಷ್ಠಗುಣಮಟ್ಟದ ಸಿಮೆಂಟ್ ತಯಾರಿಸಲು ವಿಜ್ಞಾನಿಗಳು ಪ್ರಯತ್ನ ನಡೆಸಿದ್ದಾರೆ. ಈಗಾಗಲೇ ಬಳಕೆಯಲ್ಲಿರುವ ಇಂತಹ ಭತ್ತದ ಸಿಪ್ಪೆಯ ಬೂದಿ ಆಧಾರಿತ ಸಿಮೆಂಟ್ ಸಾಧಾರಣ ಸಿಮೆಂಟಿಗಿಂತಲೂ ಶ್ರೇ‍ಷ್ಠಮಟ್ಟದ್ದೆಂದು ತಿಳಿದು ಬರಿದಿದೆ. ಭತ್ತದ ಸಿಪ್ಪೆಯ ಬೂದಿಯು ಕಾಂಕ್ರಿಟ್ ತಂತ್ರಜ್ಞಾನದಲ್ಲಿಯೇ ಹೊಸಶಾಖೆಯೊಂದನ್ನು ತೆರೆದಿದೆ ಮಾತ್ರವಲ್ಲ “ಬಹುಪಯೋಗಿ” ಎಂದು ಖಚಿತವಾಗುತ್ತಲಿದೆ. ಸಿಮೆಂಟಿನಂತಹ ಪುಡಿರೂಪದ ವಸ್ತು ಅಷ್ಟೇ ಅಲ್ಲದೇ ಹೊಸ ನಮೂನೆಯ ಇಟ್ಟಗೆಗಳ ತಯಾರಿಕೆಯಲ್ಲಿಯೂ ಭತ್ತದ ಸಿಪ್ಪೆಯ ಬೂದಿಯನ್ನು ಬಳಸಲಾಗುತ್ತದೆ. ಕಾಂಕ್ರೀಟ್ ರಸ್ತೆನಿರ್ಮಾಣ ಕಾರ್ಯ- ದಲ್ಲಿಯೂ ಇಂತಹ ಭತ್ತದ ಸಿಪ್ಪೆಯ ಬೂದಿಯನ್ನು ಬಳಸಿಕೊಳ್ಳಬಹುದೆಂದು ಪ್ರಯೋಗಗಳಿಂದ ಕಂಡುಹಿಡಿಯ- ಲಾಗಿದೆ. ದಿನನಿತ್ಯ ಮನೆ ಮತ್ತು ಹೋಟೆಲ್‌ಗಳಲ್ಲಿ ಭತ್ತವನ್ನು ಸುಟ್ಟು ಬೂದಿಯಾದ ನಂತರ ನಿರುಪಯುಕ್ತವೆಂದು ಬಿಸಾಕುತ್ತಾರೆ. ಬಹುತೇಕ ಭತ್ತಕುಟ್ಟುವ ಯಂತ್ರಗಳು ಉಗುಳಿದ ಹೊಟ್ಟನ ರಾಶಿಯನ್ನು ತಿಪ್ಪೆಗೆಸೆಯುತ್ತಾರೆ. ಅಥವಾ ಬಿಸಾಕುತ್ತಾರೆ. ಅತ್ಯಂತ ಉಪಯುಕ್ತವಾಗುವ ಈ ಭತ್ತದ ಹೊಟ್ಟನಿಂದಾಗುವ ಉಪಯೋಗಗಳನ್ನು ತಿಳಿದು ಸದುಪಯೋಗಪಡಿಸಿಕೊಳ್ಳಬೇಕಿದೆ. ಅಥವಾ ಇಂತಹ ತಂತ್ರಜ್ಞಾನ ಇರುವಲ್ಲಿಗೆ ಭತ್ತದ ಹೊಟ್ಟನ ಲೋಡುಗಳನ್ನು ಸಾಗಾಣಿಕೆ ಮಾಡಿ ಅದರಿಂದಲೂ ಹಣಗಳಿಸಬಹುದು.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...