Home / ಲೇಖನ / ವಿಜ್ಞಾನ / ಮಾನವನ ಚರ್ಮ ಉತ್ಪಾದಿಸುವ ತಂತ್ರಜ್ಞಾನ

ಮಾನವನ ಚರ್ಮ ಉತ್ಪಾದಿಸುವ ತಂತ್ರಜ್ಞಾನ

ಬೆಂಕಿಯಿಂದ ಚರ್ಮಸುಟ್ಟು ಹೋದಾಗ ಅಥವಾ ಚರ್ಮದ ಕೊಳೆತದಿಂದಾಗಿ, ಒಳಗಿನ ಮಾಂಸ ಹೊರಕಾಣುವಾಗ ಅಥವಾ ಅಪಘಾತ ಇನ್ನಿತರೆ ಅವಘಡಗಳಲ್ಲಿ ಚರ್ಮಕ್ಕೆ ಬಾಧೆಯಾದಾಗ ಆ ಸ್ಥಳಗಳಿಗೆ ಬೇರೆ ಚರ್ಮವನ್ನು ಕವಚ ಗೊಳಿಸಿ (ಜೀವಾಣು) ಗಳ ಕ್ರಿಯೆ ನಡೆಯುವಂತೆ ಮಾಡಲಾಗುತ್ತೆದೆ. ಇಲ್ಲಿಯವರೆಗೆ ಅದೇ ವ್ಯಕ್ತಿಯ ಬೇರೆ ಭಾಗದ ಚರ್ಮವನ್ನು ಸುಲಿದು ಹಾಕುವ ಪದ್ದತಿ ಇತ್ತು ಇನ್ನು ಮುಂದೆ ಮುಂದುವರಿದ ವೈಜ್ಞಾನಿಕ ತಂತ್ರಗಳನ್ನು ಬಳಸಿ ಹೊಸ ಬಗೆಯ ಚರ್ಮವನ್ನೇ ಉತ್ಪಾದಿಸಿ ಕಿತ್ತು ಹೋದ ಭಾಗಕ್ಕೆ ಅಂಟಿಸುವ ತಂತ್ರಜ್ಞಾನ ಬರಲಿದೆ.

ಕ್ಯಾಲಿಫೋರ್ನಿಯಾದ ಜೀವತಾಂತ್ರಿಕ ಸಂಸ್ಥೆಯ ವಿಜ್ಞಾನಿಗಳು ಕೆಲವು ದಿನಗಳಲ್ಲಿ ಇಂಚು ಉದ್ಧ 6 ಇಂಚು ಅಗಲದ ಚರ್ಮದ ಹಾಳೆಗಳನ್ಪು ಅಧಿಕ ಪ್ರಮಾಣದಲ್ಲಿ ಉತ್ಪಾದಿಸಲಿದ್ದಾರೆ. ಇಂತಹ ಚರ್ಮದ ಹಾಳೆಗಳು ಬೆಂಕಿ ಅಪಘಾತಗಳಲ್ಲಿ ಹಾನಿಗೊಂಡ ಚರ್ಮದ ಮೇಲೆ ಹೊದಿಸಲು ತುಂಬ ಉಪಯುಕ್ತವೆಂದು ಹೇಳುತ್ತಾರೆ. ಕ್ಯಾಲಿಫೋರ್ನಿಯಾದ ಜೋಸೆಪ್ ಮತ್ತು ರಾಬರ್ಟ್ ಅವರು ಅನೇಕ ಪ್ರಯೋಗಗಳನ್ನು ಮಾಡಿ ಕೃತಕ ಚರ್ಮದ ಉತ್ಪಾದನೆಯನ್ನೂ ಕಂಡುಹಿಡಿದಿದ್ದಾರೆ. ಕ್ಯಾಲಿಫೋನಿರ್ಯದ ಉನ್ನತ ಅಂಗಾಂಶ (ATS) ವಿಜ್ಞಾನಿಗಳ ಸಂಸ್ಥೆ ಲಾಜೋಲಾವದಲ್ಲಿ ಜಗತ್ತಿನ ಮೊಟ್ಟಮೊದಲ ಚರ್ಮದ ಕಾರ್ಖಾನೆಯ ಕಟ್ಟಡವನ್ನು ಪೂರ್ಣಗೊಳಿಸಿದ್ದಾರೆ. ಉತ್ಪಾದನೆಯನ್ನು ಆರಂಭಿಸಲು ಸರ್ಕಾರದ ಅನುಮತಿ (AIS)ಗಾಗಿ ಕಾಯುತ್ತಿದೆ.

ಈ ಚರ್ಮವು ಚಪ್ಪಟೆಯಾಕಾರವಾಗಿದ್ದು ಸಂಕೀರ್ಣ ಅಂಗವಾಗಿದೆ ಇದರ ಎರಡು ಪದರುಗಳು ವಿಶೇಷ ಕಾರ್ಯ ನಿರ್ವಹಿಸಲೆಂದೇ ನಿರ್ಮಾಣಗೊಂಡಿವೆ. ಕಳೆದ ದಶಕದಲ್ಲಿ ವಿಜ್ಞಾನಿಗಳು ಅವಿರತವಾಗಿ ಪ್ರಯತ್ನ ನಡಸಿದ್ದು ಈಗ ಫಲಕಾರಿಯಾಗಿದೆ. ಹಾಸಿಗೆಯ ಮೇಲೆ ಸತತವಾಗಿ ಮಲಗಿರುವುದರಿಂದ ಉಂಟಾಗುವ ಗಾಯ (Bedsores) ಹಾಗೂ ಸಕ್ಕರೆ ರೋಗದ (Diabetic Ulsers) ಹುಣ್ಣುಗಳನ್ನು ಗುಣಪಡಿಸಲು ಬಳಸುವ ಚರ್ಮ ಭಾಗಗಳೆಂದಲೇ ವರ್ಷಒಂದಕ್ಕೆ 3 ರಿಂದ 5 ಶತ ಕೋಟಿ ಡಾಲರು ವಹಿವಾಟು ಆಗಲಿದೆ. ಪ್ರಯೋಗಾಲಯದಲ್ಲಿ ತಯಾರಿಸಿದ ಚರ್ಮಕ್ಕೆ ಬೇಡಿಕೆ ಇರುವ ಮತ್ತೊಂದು ಮಾರುಕಟ್ಟೆ ಯೆಂದರೆ ಸುಟ್ಟಗಾಯದ ರೋಗಿಗಳದ್ಭು ಇದರ ಆದಾಯ 30 ಕೋಟಿ ಡಾಲರ್ ಅಗಬಹುದೆಂದು ಯೋಜನೆ ಹಾಕಿಕೊಂಡಿದೆ.

ಇದೇ ತಂತ್ರ ಜ್ಞಾನವನ್ನು ಬಳಸಿ ಮೃದ್ವಸ್ಥಿ (Cartilage) ಮತ್ತು ಸ್ಥಾನದ ಅಂಗಾಂಶಗಳನ್ನು ಪ್ರಯೋಗಾಲಯದಲ್ಲಿ ಉತ್ಪಾದಿಸುವ ಕಾರ್ಯವೂ ನಡೆದಿದೆ.

****

Tagged:

Leave a Reply

Your email address will not be published. Required fields are marked *

ತೆಂಕಣದಿ ಹದಿನಾರು ಮೈಲಿಗಳಾಚಿ ಬಾಂದಳಕೆ ಭುಜಗೊಟ್ಟು ನಿಂತಿರುವ ಸಿಂಹಗಡವೇ-ಇದೋ ನಿನಗೆ ತಲೆಬಾಗುವೆನು. ಶತಮಾನಗಳ ಹಿಂದೆ, ನರಜಾತಿಯಲಿ ಹರಿಯಂತೆ ಮೆರೆದ ವೀರಲೀಲಾಲೋಲ ಶಿವಪ್ರಭುವನು ಶಿರದಲಿ ಹೊತ್ತು ಮೆರೆಯಿಸಿದ ಸಿಂಹಗಡವೇ ಇದೋ-ನಿನಗೆ ವಂದಿಸುವೆನು. ಅಂದು ನಮ್ಮ ನಾಡಿನ ಧರ್‍ಮ-ನಮ್ಮ ಹ...

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...