Home / ಲೇಖನ / ವಿಜ್ಞಾನ / ಸಮುದ್ರ ನೀರಿನ ಸಂಸ್ಕರಣದಿಂದ ಕುಡಿವ ನೀರಿನ ಭಾಗ್ಯ (ಅಣು ಶಕ್ತಿಯಿಂದ ನೀರು ತಯಾರಿಕೆ)

ಸಮುದ್ರ ನೀರಿನ ಸಂಸ್ಕರಣದಿಂದ ಕುಡಿವ ನೀರಿನ ಭಾಗ್ಯ (ಅಣು ಶಕ್ತಿಯಿಂದ ನೀರು ತಯಾರಿಕೆ)

ಸಮುದ್ರ ನೀರು ಲವಣಾಂಶಗಳಿಂದ ಕೂಡಿದ್ದರಿಂದ ಕುಡಿಯಲು ಯೋಗ್ಯವಲ್ಲ ವೆಂಬುದು ಎಲ್ಲರಿಗೂ ಗೊತ್ತಾದ ವಿಷಯ. ನೀರಿನ ಬರವನ್ನು ನೀಗಿಸಲು ಇನ್ನೊಂದು ದಿಕ್ಕಿನ ಪ್ರಯೋಗದ ಪ್ರತಿಫಲವೇ ಸಮುದ್ರನೀರನ್ನು ಕುಡಿಯಲು ಯೋಗ್ಯವನ್ನಾಗಿ ಮಾಡುವುದು.

ಇತ್ತೀಚಿನ ಸಂಶೋಧನೆಗಳ ಪ್ರಕಾರ ಸಮುದ್ರದ ನೀರನ್ನು ಅಣು ಶಕ್ತಿಯಿಂದ ನಿರ್ಲವಣೀಕರಿಸಲು (ಡಿಸ್‌ರೈನೇಷನ್) ಹೊರಟಿದ್ದಾರೆ. ಅಣು ಶಕ್ತಿಯಿಂದ ನೀರನ್ನು ತಯಾರಿಸುವದಕ್ಕೆ ಸಮಾಲೋಚಿಸಲು ವಿಶ್ವದ ವಿಜ್ಞಾನಿಗಳು “ಅಂತರರಾಷ್ಟ್ರೀಯ ಅಣುಶಕ್ತಿ ಏಜೆನ್ಸಿ” ಅಡಿಯಲ್ಲಿ ಸೇರಿ ಅಪಾಯವಿಲ್ಲವೇ ನೀರನ್ನು ಪಡೆಯಬಹುದೆಂದು ತೀರ್ಮಾನಕ್ಕೆ ಬಂದರು. ಕ್ರಿ.ಶ. 1900 ರಿಂದ 1995 ರ ಅವಧಿಯಲ್ಲಿ ಜನಸಂಖ್ಯೆಯ ಬೆಳವಣಿಗೆಗೆ 3 ಪಟ್ಟು ಹೆಚ್ಚಾದರೆ ನೀರಿನ ಸಮಸ್ಯೆ ಅರು ಪಟ್ಟು ಹೆಚ್ಚಾಗಲಿದೆ. ಈ ಕಾರಣ ಕುಡಿವ ನೀರಿನ ಅಗತ್ಯ ಹೆಚ್ಚಿದಂತೆ ವಿಜ್ಞಾನಿಗಳ ಪ್ರಯೋಗಗಳು ಹೆಚ್ಚಾಗಿವೆ. ಈ ಸಮುದ್ರದ ನೀರನ್ನು ನಿರ್ಮಲೀಕರಣಗೊಳಿಸಲು ಕಲ್ಲಿದ್ದಲು, ಅನಿಲ ಮತ್ತು ತೈಲಗಳನ್ನು ಸದ್ಯ ಬೆಳೆಸಲಾಗುತ್ತದೆಯಾದರು ಪ್ರಮಾಣ ಜನಸಂಖ್ಯೆಗನುಗುಣವಾಗಿಲ್ಲ

ವಿಶ್ವದಾದ್ಯಂತ ಈಗಾಗಲೇ ಸು. 400 ನ್ಯೂಕ್ಲಿಯರ್ ರಿಯಾಕ್ಟರುಗಳಿಂದ ವಿದ್ಯುತ್ತನ್ನು ಉತ್ಪಾದಿಸಲಾಗುತ್ತಿದೆ- ಯಾದರೂ ಸಮುದ್ರದ ನೀರನ್ನು ಕುಡಿಯುವ ನೀರನ್ನಾಗಿ ಪರಿವರ್ತಿಸುವ ಕಾರ್ಯ ಅಷ್ಟೇನೂ ನಡೆದಿಲ್ಲ ಜಪಾನ್ ಮತ್ತು ಭಾರತದಲ್ಲಿ ಸಮುದ್ರದ ನೀರನ್ನು ಅಣುಸ್ಥಾವರಗಳಿಂದ ಶುದ್ಧೀಕರಿಸಲಾಗುತ್ತದೆ. ಮುಂಬೈನಲ್ಲಿರುವ ಬಾಬಾ ಅಣು ಸಂಶೋಧನಾ ಕೇಂದ್ರವು ಈ ಸಾಧನೆಯಲ್ಲಿ ಗಮನಾರ್ಹ ಸಾಧನೆ ಮಾಡಿದೆ. “ಕಲ್ಟಾಕಂ ಸ್ಥಾವರದಲ್ಲಿ 50,000 ಕ್ಯೂಬಿಕ್ ಮೀಟರಿನಷ್ಟು ನೀರನ್ನು ಪ್ರತಿದಿನ ಅಣುಶಕ್ತಿಯಿಂದ ಸಂಸ್ಕರಿಸಿ ಕುಡಿವ ನೀರನ್ನಾಗಿ ಸಂಸ್ಕರಿಸಲಾಗುತ್ತದೆ. ಇದರಿಂದಾಗಿ ಅಂದಾಜು 5 ಲಕ್ಷ ಜನರು ಅ ನೀರನ್ನು ಕುಡಿದಂತಾಗಿದೆ. ಅಣುಸ್ಥಾವರ ಕೇಂದ್ರಗಳಲ್ಲಿ ಉತ್ಪತ್ತಿಯಾಗುವ ಅಣುಶಕ್ತಿಯ ನೀರು ಆವಿಯಾಗಲು ಉಪಯೋಗಿಸಿಕೊಳ್ಳುತ್ತದೆಯೇ ಹೊರತು ನೀರಿನ ಮೂಲಕ ಯಾವುದೇ ವಿಕಿರಣ ಹಾದುಹೋಗುವುದಿಲ್ಲ ಮಾತ್ರವಲ್ಲ ಈ ನೀರಿನಿಂದ ಯಾವುದೇ ಅಪಾಯವಿಲ್ಲವೆಂದು ವಿಜ್ಞಾನಿಗಳು ಸ್ಪಷ್ಟಪಡಿಸಿದ್ದಾರೆ. ಕುಡಿಯುವ ನೀರಿನ ಸಮಸ್ಯೆಯ ಪ್ರಮಾಣಕ್ಕೆ ಇದೊಂದು ಸಣ್ಣ
ಉತ್ತರವನ್ನು ನೀಡುತ್ತದೆ.

ಹವೆಯಿಂದ ನೀರು

ಜಗತ್ತಿನಲ್ಲಿ ಜನಸಂಖ್ಯಾಸ್ಫೋಟದ ಸಮಸ್ಯೆ ಮೊದಲನೆಯದ್ದಾದರೆ ಎರಡನೆಯದ್ದು ಕುಡಿಯುವ ನೀರಿನದ್ದು ಭೂಮಿಯ ಮೇಲೆ ಶೇ. 75 ರಷ್ಟು ನೀರು ಇದ್ದರೂ ಕುಡಿಯಲು ಯೋಗ್ಯವಾಗಿಲ್ಲ ಈ ನೀರಿನಲ್ಲಿ ಅನೇಕ ಲವಣಗಳು ಕರಗಿದ್ಭು ಉಪ್ಪಿನ ಅಂಶ ಇರುತ್ತದೆ. ಈ ಕಾರಣವಾಗಿ ಅಣುಶಕ್ತಿಯಿಂದ ನೀರನ್ನು ತಯಾರಿಸುವ, ಸಮುದ್ರದ ನೀರನ್ನು ಸರಿಸ್ಕರಿಸಿ ಸಿಹಿನೀರನ್ನು ಮಾಡುವ ಪ್ರಯತ್ನಗಳು ನಡೆಯುತ್ತಲೇ ಇದೆ. ಅದಾಗ್ಯೂ ಸಮಸ್ಯೆಗೆ ಪೂರ್ಣ ಉತ್ತರ ಸಿಕ್ಕಿಲ್ಲ ಅದಾಗ್ಯೂ ವಿಜ್ಞಾನಿಗಳು ಕುಡಿಯಲು ಯೋಗ್ಯವಾದ ನೀರನ್ನು ಉತ್ಪಾದಿಸುವ ಪ್ರಯತ್ನಗಳನ್ನು ಅಲ್ಲಲ್ಲಿ ಮಾಡುತ್ತಲೇ ಇದ್ದಾರೆ. ಇದೀಗ ವಾತಾವರಣದ ತಿಳಿಯಾದ ಹವೆಯಿಂದ ನೀರನ್ನು ಉತ್ಪಾದಿಸುವ ಪ್ರಕ್ರಿಯೆಯನ್ನು ವಾಷಿಂಗ್‌ಟನ್‌ನಲ್ಲಿರುವ ವಾಟರ ಮಾಸ್ಟರ್ ಟೆಕ್ನಾಲಜಿಸ್ ಕಂಪನಿಯವರು ಅಭಿವೃದ್ಧಿಪಡಿಸಿದ್ಧಾರೆ.

ಈ Airwell 200 Technology ಯು ಪ್ರಂಪಂಚದ ಯಾವುದೇ ಭಾಗದಲ್ಲಿಯ ಕುಡಿಯುವ ನೀರಿನ ಸಮಸ್ಯೆಯನ್ನು ನೀಗಿಸಬಹುದೆಂದು ವಿಜ್ಞಾನಿಗಳ ಅಭಿಪ್ರಾಯ. ಮೋಡದಿಂದ ಕೆಳಕ್ಕೆ ಬಿದ್ದ ನೀರು ಭೂಮಿಯ ಲವಣಾಂಶಗಳಿಂದ, ಬ್ಯಾಕ್ಸಿರಿಯಾಗಳಿಂದ ಕೂಡಿ ಕುಡಿಯಲು ಅಷ್ಟೇನೂ ಯೋಗ್ಯವಾಗಲಾರದು. ಈ ಶುದ್ದವಾದ ವಾಯುವನ್ನು ಸಂಗ್ರಹಿಸಿ H2Oದ ಸಂಸ್ಕಾರ ನೀಡಿ ನೀರನ್ನಾಗಿ ಮಾರ್ಪಡಿಸಲಾಗುತ್ತದೆ. ಸುತ್ತಲಿನ ಹವೆಯಿಂದ ದಿನವೊಂದಕ್ಕೆ ಈಗಾಗಾಲೇ 20 ಲೀಟರ್ ಶುದ್ಧವಾದ ನೀರನ್ನು ತಯಾರಿಸಲಾಗುತ್ತದೆ. ಕ್ಯಾಂಟಬರಿ ವಿಶ್ವವಿದ್ಯಾನಿಲಯದ ಸಹಾಯದಿಂದ ವೆಸ್ಟ್‌ಮಾಸ್ಟರ್ ಕಂಪನಿಯು ಈ ತಾಂತ್ರಿಕತೆಯನ್ನು ಅಭಿವೃದ್ಧಿಪಡಿಸಿ ಜಗತ್ತಿನಾದ್ಯಂತ ‘ಯಂತ್ರ’ವನ್ನು ಬಿಡುಗಡೆ ಮಾಡಿಲಿದೆ. ಆಗ ಬರಗಾಲ ಪ್ರದೇಶದ ನೀರಿನ ಭವಣೆಯಲ್ಲಿ ಬೇಯುತ್ತಿರುವ ಜನತೆಗೆ ಒಂದಿಷ್ಟು ನೆಮ್ಮದಿ ಸಿಗಬಹುದೇನೋ?
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...