Home / ಲೇಖನ / ವಿಜ್ಞಾನ / ಜೀವಾಣುಗಳಿಂದ ವಿದ್ಯುತ್ ಉತ್ಪಾದನೆಯ ಶೋಧ

ಜೀವಾಣುಗಳಿಂದ ವಿದ್ಯುತ್ ಉತ್ಪಾದನೆಯ ಶೋಧ

ಸಾಮಾನ್ಯವಾಗಿ ಜಲವಿದ್ಯುತ್ ಶಕ್ತಿಯನ್ನು ಕಂಡಿದ್ದೇವೆ. ಗೋಬರ್ ಗ್ಯಾಸ್ ಉತ್ಪಾದನೆಯನ್ನು ಅರಿತಿದ್ದೇವೆ. ಆದರೆ ಜೀವಾಣುಗಳಾದ ಬ್ಯಾಕ್ಟೀರಿಯಾಗಳಿಂದ ವಿದ್ಯುತ್ತನ್ನು ಉತ್ಪಾದಿಸಲಾಗುತ್ತದೆ ಎಂಬ ಅಂಶ ಹೊಸದು.  ಬ್ಯಾಕ್ಟೀರಿಯಾಗಳನ್ನು ಬಳಸಿ ವೇಗವರ್ಧನೆ ಯನ್ನು ಹೆಚ್ಚಿಸಲು ಸಾಧ್ಯವೆಂದು ಡಾ|| ಸಿಸ್ಲರ್ ಎಂಬ ವಿಜ್ಞಾನಿಯು ಪತ್ತೆಹಚ್ಚಿದ್ದಾರೆ.

ಸಮುದ್ರದ ಹಸಿರು ಪಾಚಿಯಲ್ಲಿರುವ “ಅಲ್ಗೆ” ಎಂಬ ಜೀವಾಣುಗಳನ್ನು ಕಂಡು ಹಿಡಿದರು. ಸೂರ್ಯನ ಬಿಸಿಲನ್ನೇ ಇಂಧನವನ್ನಾಗಿ ಪಡೆದು ವಿದ್ಯುತ್‌ನ್ನು ಉತ್ಪಾದಿಸುವ ಸಾಮರ್ಥ್ಯ ಪಡೆಯಲಾಗಿದೆ. ಬ್ಯಾಕ್ಟೀರಿಯಾದ ಮೂಲಕ ವಿದ್ಯುತ್ತನ್ನು ಪಡೆಯುವುದಾದಲ್ಲಿ ಅದು ಬಳಸುವ ಇಂಧನದಲ್ಲಿ ಶೇ. 50ರಷ್ಟು ಮಾತ್ರ ವಿದ್ಯುತ್ ಆಗಿರುತ್ತದೆ. ಆಗ ಅದಕ್ಕೆ ಇಂಧನವಾಗಿ ಸತು ಇಂಗಾಲ ಬೇಕಿಲ್ಲ. ಸೂರ್ಯನ ಬೆಳಕು, ಗಾಳಿ, ಕಡಲಿನ ನೀರು ಮುಂತಾದ ಬಂಡವಾಳ- ವಿಲ್ಲದೇ ಸಿಗುವ ವಸ್ತುಗಳೇ ಇಂಧನವಾಗಿರುವುದೊಂದು ವಿಶೇಷ. ಇದರಿಂದ ಸುಲಭವಾಗಿ ವಿದ್ಯುತ್‌ಶಕ್ತಿ  ಕೈಸೇರುತ್ತ ದೆಂದು ವಿಜ್ಞಾನಿಗಳು ಹೇಳುತ್ತಾರೆ. ಅಮೇರಿಕಾದ ‘ನಾಸಾ’ ಸಂಸ್ಥೆಯು ಅಕಾಶಯಾನಕ್ಕೆ ಸಜೀವಕೋಶ- ಗಳು ಉತ್ಪಾದಿಸುವ ವಿದ್ಯುತ್‌ನ್ನು ಬಳೆಸಿಕೊಳ್ಳಬಹುದೇ ಎಂಬುದನ್ನು ಯೋಚಿಸುತ್ತದೆ. ಮುಂದಿನ ದಿನಗಳಲ್ಲಿ ನಿರುಪಯುಕ್ತವಾಗಿ, ಕಶ್ಮಲವಾಗಿ, ಅಸಹ್ಯವಾಗಿ ಹರಿದು ಹೋಗುವ ಚರಂಡಿ ನೀರು, ಕೊಳಚೆ ನೀರಿನಲ್ಲಿರುವ ಜೀವಾಣುಗಳಿಂದ (ಬ್ಯಾಕ್ಟೀರಿಯಾಗಳಿಂದ) ವಿದ್ಯುತ್ತನ್ನು ಉತ್ಪಾದಿಸಿ ಕತ್ತಲೆಯ ಸಮಸ್ಯೆಗ ಪರಿಹಾರ
ಕಂಡುಹಿಡಿಯಬಹುದು.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...