Home / ಲೇಖನ / ಸಾಹಿತ್ಯ / ಮುಂಬರುವ “ಶೌಚಾಲಯ”

ಮುಂಬರುವ “ಶೌಚಾಲಯ”

“ಲ್ಯಾಟ್ರಿನ್’ ಪದ ಅಸಹ್ಯವಲ್ಲ ದೈನಿಕ ಬದುಕಿನ ಜೀವನಕ್ಕೆ ಅನಿವಾರ್ಯವಾದ ವಸ್ತು ಈಗಾಗಲೇ ಹಳ್ಳಿಯಿಂದ ಊರು, ಪೇಟೆ, ಪಟ್ಟಣ ನಗರಗಳಲ್ಲಿ ಈ “ಲ್ಯಾಟ್ರಿನ್” ಆವಿಷ್ಕಾರಗೊಳ್ಳುತ್ತಾ ಬಂದುದನ್ನು ಕಾಣುತ್ತೇವೆ. ಕೆಲವು ಶ್ರೀಮಂತರ ಮನೆಯಲ್ಲಿ ಲಕ್ಷಾಂತರ ರೂ. ಗಳ ವೆಚ್ಚದಲ್ಲಿ ಆಧುನಿಕ ನಮೂನೆಗಳ ಕಕ್ಕಸು ಕೋಣೆಯನ್ನು ಕಟ್ಟಸಿದವರಿದ್ದಾರೆ. ಇವೆಲ್ಲ ಅಂದ, ಚಂದ, ಸ್ವಚ್ಛತೆಯ ದೃಷ್ಟಿಯಿಂದ ಆಪ್ಯಾಯಮಾನವಾಗಿರಬಹುದು.

ಆದರೆ ಇತ್ತೀಚಿನ ದಿನಗಳಲ್ಲಿ ಇಲ್ಲಿಯ ವೈದ್ಯಕೀಯ ವಿಜ್ಞಾನ ಇಣುಕು ಹಾಕಿದೆ. ಲಂಡನ್ನಿನ ವಿಜ್ಞಾನಿಗಳು ರೂಪಿಸಿದ ಲ್ಯಾಟ್ರಿನ್ ಒಂದು ವರದಾನವೆಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಮುಖ್ಯವಾಗಿ ಗರ್ಭಿಣಿಯರು ಮತ್ತು ಡಯಾಬಿಟಿಸ್ ಕಾಯಿಲೆಗಳಿದ್ದವರ ರೋಗಗಳ ವಿವರವನ್ನು ಈ ಮಲ, ಮೂತ್ರಾಲಯ ನೀಡಲಿದೆ. ಇದಕ್ಕೆ ಸ್ವಯಂ ಚಾಲಿತವಾಗಿ
ಜೋಡಿಸಿದ ಮೋಡೆಮ್‌ಗಳು ರೋಗಿಗಳ ಖಾಸಗಿ ವ್ಶೆದ್ಯರಿಗೆ ರೋಗಗಳ ವಿವರಗಳನ್ನು ಇ-ಮೇಲ್ ಮೂಲಕ ಸಂವಹನ ನಡೆಸುತ್ತವೆ. ವರ್ಸ್‌ಟೈಲ್ ಇಂಟರ್ಯಾಕ್ಟಿವ್ ಪಾನ್ (V.I.P) ಎಂದು ಕರೆಯಲ್ಪಡುವ ಈ ಕಕ್ಕಸ್ಸನ್ನು ಮುಂಬರುವ ಜಾಣ್ಮೆಯ ಕಕ್ಕಸುಗಳೆಂದು ಈಗಾಗಲೇ ಉಪಯೋಗಿಸಿದ ರೋಗಿಗಳ ಅಭಿಪ್ರಾಯವಾಗಿದೆ. ಮಕ್ಕಳು ಅಥವಾ ಅಂಗವಿಕಲರು ಈ ಕಕ್ಕಸ್ಸಿನ ಬಳಿಗೆ ಬಂದು ಮಾತನಾಡಿದರೆ ಸಾಕು ಅದು ಅವರಿಗೆ ಅನುಕೂಲವಾಗುವಂತೆ
ಸ್ವಯಂಚಾಲಿತವಾಗಿ ತನ್ನ ವಿನ್ಯಾಸವನ್ನು ಬದಲಿಸಿಕೊಳ್ಳಲಿದೆ. ಧ್ವನಿಗ್ರಹಣ (ಶಬ್ದ ಮಾಡಿದರೆ) ಮಾಡಿದರೆ ಕಕ್ಕಸ್ಸಿ- ನಿಂದ ಇದು ಕೇವಲ ಮೂತ್ರಾಲಯವಾಗಿ ಪರಿವರ್ತನೆಯಾಗುತ್ತದೆ. ಈ ಹೊಸ ಮಾದರಿಯ ಲ್ಯಾಟ್ರಿನ್  ವಿನ್ಯಾಸ- ಗೊಳಿಸಲು 5 ವರ್ಷ ಹಿಡಿದು 8000 ಡಾಲರ್ ಖರ್ಚಾಗಿದೆ. 2006ರಲ್ಲಿ ಈ ಮಾದರಿಯನ್ನು ಮಾರುಕಟ್ಟೆಗೆ ತರಲಾಗುಪುದೆಂದು ಚೆಸ್ಟರ್ ಮೂಲದ ಟ್ವೈಪೋರ್ಡ್‌ ಬಾತ್‌ರೂಮ್ ಕಂಪನಿ ಪ್ರಕಟಿಸಿದೆ.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...